ನೀರು ಕುಡಿಯಲು ಬಂದಿದ್ದೇ ಈ ಆನೆಗಳ ಜೀವಕ್ಕೆ ಕಂಟಕವಾಯಿತು… ಆದರೆ ಕೊನೆಗೆ ಆಗಿದ್ದೇ ಬೇರೆ

ಆಯುಷ್ಯ ಗಟ್ಟಿ ಇದ್ದರೆ ಸಾವು ಬಂದ್ರೂ ಬದುಕಿ ಬರಬಹುದು ಎಂಬುದಕ್ಕೆ ಇದೊಂದು ನಿದರ್ಶನ

Team Udayavani, Sep 17, 2022, 10:53 AM IST

ನೀರು ಕುಡಿಯಲು ಬಂದಿದ್ದೇ ಈ ಆನೆಗಳ ಜೀವಕ್ಕೆ ಕಂಟಕವಾಯಿತು, ಕೊನೆಗೆ ಆಗಿದ್ದೆ ಬೇರೆ

ಕೀನ್ಯಾ : ಆಯುಷ್ಯ ಗಟ್ಟಿ ಇದ್ದರೆ ಸಾವಿನ ದವಡೆಯಿಂದ ಹೇಗಾದರೂ ಪಾರಾಗುತ್ತಾರೆ ಎಂಬುದಕ್ಕೆ ಕೀನ್ಯಾದಲ್ಲಿ ನಡೆದ ಒಂದು ಘಟನೆಯನ್ನು ನೋಡಿದರೆ ಗೊತ್ತಾಗುತ್ತದೆ.
ಕೆಸರಿನ ಹೊಂಡದಲ್ಲಿ ಹೂತುಹೋಗಿ ಎರಡು ದಿನಗಳು ಕಳೆಯಿತು… ಇನ್ನೇನು ಪ್ರಾಣ ಪಕ್ಷಿ ಹಾರಿಹೋಗುವ ಸಮಯ ದೂರ ಇಲ್ಲ ಎನ್ನುವ ಹಂತದಲ್ಲಿದ್ದ ಎರಡು ಹೆಣ್ಣಾನೆಗಳು ಕೊನೆಯ ಕ್ಷಣದಲ್ಲಿ ಸಾವಿನ ದವಡೆಯಿಂದ ಪಾರಾದ ಕತೆ ಇದು.

ನಿಜಕ್ಕೂ ಈ ವಿಡಿಯೋ ನೋಡಿದರೆ ಎಂತವರಿಗೂ ಕಣ್ಣು ತುಂಬಿ ಬರದೇ ಇರದು… ಬಿರು ಬೇಸಿಗೆಯಲ್ಲಿ ತಮ್ಮ ದಾಹವನ್ನು ತೀರಿಸಿಕೊಳ್ಳಲು ನೀರಿನ ಆಸರೆಯನ್ನು ಹುಡುಕಿಕೊಂಡು ಹೋದ ಎರಡು ಹೆಣ್ಣಾನೆಗಳು ತಮ್ಮ ಪ್ರಾಣವನ್ನೇ ಅಪಾಯಕ್ಕೆ ಸಿಲುಕಿಸಿಕೊಂಡಿದೆ. ಕೀನ್ಯಾದ ಶೆಲ್ಡ್ರಿಕ್ ವೈಲ್ಡ್ ಲೈಫ್ ಟ್ರಸ್ಟ್ ಹೆಣ್ಣಾನೆಗಳು ಕೆಸರಿನಲ್ಲಿ ಸಿಲುಕಿ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದು ಅವುಗಳನ್ನು ಕೆಡಬ್ಲ್ಯೂ ಎಸ್ ಮತ್ತು ವನ್ಯಜೀವಿ ಸಂರಕ್ಷಣೆಯ ಕಾರ್ಯಕರ್ತರ ಸತತ ಕಾರ್ಯಾಚರಣೆಯಿಂದ ರಕ್ಷಣೆ ಮಾಡಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಶೆಲ್ಡ್ರಿಕ್ ಟ್ರಸ್ಟ್ ಹಂಚಿಕೊಂಡ ವಿಡಿಯೋದಲ್ಲಿ ಎರಡು ಆನೆಗಳು ನೀರಿನ ಆಸರೆ ಅರಸಿಕೊಂಡು ಬಂದು ಕೆಸರಿನ ಕೂಪಕ್ಕೆ ಬಿದ್ದು ಮೇಲೆ ಬರಲಾಗದೆ ಒದ್ದಾಡಿ ಒದ್ದಾಡಿ ಕೊನೆಗೆ ಇಡೀ ಜೀವವೇ ಕೆಸರಿನಲ್ಲಿ ಮುಳುಗುವ ಹಂತಕ್ಕೆ ತಲುಪಿತ್ತು ಇನ್ನು ಯಾವ ಪ್ರಯತ್ನವೂ ಸಾಧ್ಯವಾಗದ ಸ್ಥಿತಿ ಆ ಎರಡು ಆನೆಗಳದ್ದಾಗಿತ್ತು ಆದರೆ ಕೆಡಬ್ಲ್ಯೂ ಎಸ್ ಮತ್ತು ವನ್ಯಜೀವಿ ಸಂರಕ್ಷಣೆಯ ಕಾರ್ಯಕರ್ತರು ತಮ್ಮ ಪ್ರಾಣದ ಹಂಗನ್ನು ತೊರೆದು ಹೆಣ್ಣಾನೆಗಳನ್ನು ರಕ್ಷಿಸಿ ಮರುಜೀವ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ಮಧ್ಯಪ್ರದೇಶ : ಆಸ್ಪತ್ರೆಯ ಬೆಡ್ ಮೇಲೆ ಆರಾಮವಾಗಿ ಮಲಗಿದ ಶ್ವಾನ : ವಿಡಿಯೋ ವೈರಲ್…

ಘಟನಾ ಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ತಲುಪಿದ ರಕ್ಷಣಾ ತಂಡ ಆನೆಗಳನ್ನು ಮೇಲೆ ಎತ್ತಲು ಒಂದು ಟ್ರ್ಯಾಕ್ಟರ್ , ಎರಡು ಕಾರುಗಳನ್ನು ಬಳಸಿ ಸತತ ಕಾರ್ಯಾಚರಣೆ ನಡೆಸಿದ್ದಾರೆ, ಕೆಸರಿನಲ್ಲಿ ಪೂರ್ತಿ ಜೀವ ಮುಳುಗಿದ ಸ್ಥಿತಿಯಲ್ಲಿದ್ದ ಆನೆಗಳ ಬಳಿ ಕಷ್ಟ ಪಟ್ಟು ಹೋದ ರಕ್ಷಣಾ ತಂಡ ಮೊದಲು ಆನೆಯ ಸುತ್ತ ಇದ್ದ ಕೆಸರು ಮಣ್ಣನು ಹೊರತೆಗೆಯುವ ಕೆಲಸ ಮಾಡಿ ಬಳಿಕ ಹಗ್ಗದ ಮೂಲಕ ಟ್ರ್ಯಾಕ್ಟರ್ ಗೆ ಕಟ್ಟಿ ದಡಕ್ಕೆ ಎಳೆಯಲಾಯಿತು ಅದೇ ರೀತಿ ಇನ್ನೊಂದು ಆನೆಯನ್ನು ಕಾರಿಗೆ ಕಟ್ಟಿ ಕೆಸರಿನಿಂದ ಮೇಲಕ್ಕೆತ್ತಲಾಯಿತು. ಕೊನೆಗೆ ಎರಡೂ ಆನೆಗಳು ಬದುಕಿದೆಯೇ ಬಡಜೀವ ಎಂದು ಕಾಡಿನತ್ತ ಹೆಜ್ಜೆ ಹಾಕಿದೆ.

ರಕ್ಷಣಾ ತಂಡದ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.. ಜಗತ್ತಿನಲ್ಲಿ ಮಾನವೀಯತೆ ಇನ್ನೂ ಜೀವಂತವಿದೆ ಎಂಬುದಕ್ಕೆ ನಿಮ್ಮ ಕಾರ್ಯವೇ ಸಾಕ್ಷಿ ಎಂದು ಓರ್ವರು ಬರೆದಿದ್ದರೆ, ನಿಜಕ್ಕೂ ಆನೆಗಳ ಪಾಲಿಗೆ ನೀವೇ ದೇವರಾಗಿ ಬಂದಿದ್ದೀರಿ ಎಂದು ಇನ್ನೋರ್ವರು ಬರೆದುಕೊಂಡಿದ್ದಾರೆ..

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.