ಜಿಲ್ಲಾಧಿಕಾರಿಗೆ ಗ್ರಾಮಸ್ಥರಿಂದ ಅಹವಾಲುಗಳ ಮಹಾಪೂರ

ಗ್ರಾಮೀಣರ ಸಮಸ್ಯೆ ಅರಿತು ಪರಿಹಾರ ಕಲ್ಪಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮ: ಸಂಜಯ ಶೆಟ್ಟೆಣ್ಣವರ

Team Udayavani, Sep 18, 2022, 1:27 PM IST

6

ಹಾವೇರಿ/ಬ್ಯಾಡಗಿ: ಸತತ ಮಳೆ, ಕೆರೆಯ ಜಿನುಗು ನಿಂದಾಗಿ ಗ್ರಾಮದಲ್ಲಿ ವಾಸಿಸುವುದು ಕಷ್ಟವಾಗಿದೆ. ಹಾಗಾಗಿ, ಗುಡ್ಡದ ಪ್ರದೇಶದಲ್ಲಿ ನಿವೇಶನ ರಚಿಸಿ ಗ್ರಾಮವನ್ನು ಸಂಪೂರ್ಣ ಸ್ಥಳಾಂತರಿಸಬೇಕೆಂದು ಖುರ್ಧವೀರಾಪೂರ ಗ್ರಾಮಸ್ಥರು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಮನವಿ ಮಾಡಿದರು.

ಬ್ಯಾಡಗಿ ತಾಲೂಕು ಖುರ್ಧವೀರಾಪೂರದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಹಿಳೆಯರು, ಗ್ರಾಮದ ಯುವಕರು, ಹಿರಿಯರು ಗ್ರಾಮ ಸ್ಥಳಾಂತರ ಸೇರಿದಂತೆ ಗ್ರಾಮದ ಸಮಗ್ರ ಅಭಿವೃದ್ಧಿ ಕುರಿತು ಹಲವು ಬೇಡಿಕೆಗಳನ್ನು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲು ಮನವಿ ಮಾಡಿದರು.

ಈ ವೇಳೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಮೂಲ ಭೂತ ಸೌಕರ್ಯಗಳ ಕೊರತೆ ಎದುರಿಸುವ ಜಿಲ್ಲಾ ಹಾಗೂ ತಾಲೂಕು ಕೇಂದ್ರದಿಂದ ದೂರದಲ್ಲಿರುವ ಗ್ರಾಮಗಳ ಜನರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಅರಿತು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ. ಉತ್ತಮ ವ್ಯವಸ್ಥೆ ಮತ್ತು ಸಮಾಜ ನಿರ್ಮಾಣಕ್ಕೆ ಗ್ರಾಮ ವಾಸ್ತವ್ಯ ಸಹಕಾರಿಯಾಗಿದೆ ಎಂದರು.

ಗ್ರಾಮದ ನಾಗರಿಕರ ಸಮಸ್ಯೆಗೆ ಸಮಚಿತ್ತದಿಂದ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಗ್ರಾಮದ ಸ್ಥಳಾಂತರ ಬೇಡಿಕೆಯನ್ನು ಪರಿಶೀಲನೆ ಮಾಡಲಾಗುವುದು. ವಸತಿ ರಹಿತರಿಗೆ ನಿವೇಶನ ರಚಿಸಿ ಹಂಚಿಕೆಗೆ ಕ್ರಮ ವಹಿಸಲಾಗುವುದು. ಪರಿಶಿಷ್ಟ ಕಾಲೋನಿಯ ಬೀದಿ ದೀಪ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಡಾ.ಬಿ. ಆರ್‌.ಅಂಬೇಡ್ಕರ್‌ ಭವನ ನಿರ್ಮಾಣ, ದೇವಾಲಯ ಜೀರ್ಣೋದ್ಧಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ನರೇಗಾ ಯೋಜನೆಯಡಿ ಯುವಕರ ಬೇಡಿಕೆಯಂತೆ ಕ್ರೀಡಾಂಗಣ ನಿರ್ಮಿಸಿಕೊಡಲು ಸೂಚಿಸಿದರು. ಕೆರೆ ನೀರಿನ ಜಿನುಗುವಿಕೆ ಸಮಸ್ಯೆ ನಿವಾರಣೆಗೆ ತಕ್ಷಣವೇ ಪರಿಶೀಲನೆ ನಡೆಸಿ ವರದಿ ನೀಡುವಂತೆ ಜಿಪಂ ಅಭಿಯಂತರರಿಗೆ ಸೂಚನೆ ನೀಡಿದರು.

ಮಲ್ಲೂರು, ಹಾಸನಗಿ, ಖುರ್ಧವೀರಾಪುರ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ ದೂರುಗಳಿದ್ದು, ಹೊಸ ಯೋಜನೆ ಅನುಷ್ಠಾನಗೊಳ್ಳುವವರೆಗೆ ಪ್ರಸ್ತುತ ಇರುವ ನೀರಿನ ಜಾಲವನ್ನು ಸರಿಪಡಿಸಿ ಶುದ್ಧ ನೀರನ್ನು ಪೂರೈಸಲು ಪಂಚಾಯತ್‌ ರಾಜ್‌ ಅಭಿಯಂತರರಿಗೆ ಸೂಚನೆ ನೀಡಿದರು. ವಸತಿ ಮತ್ತು ಮನೆ ನಿರ್ಮಾಣ, ಗ್ರಾಮದ ಸ್ಥಳಾಂತರ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದರು.

ಮುಜರಾಯಿ ಇಲಾಖೆಯಿಂದ ದೇಗುಲಗಳ ಜೀರ್ಣೋದ್ಧಾರ, ಮಹಿಳಾ ಸ್ವ ಸಹಾಯ ಸಂಘಗಳ ಚಟುವಟಿಕೆಗಳಿಗೆ ನೆರವು, ಗ್ರಂಥಾಲಯ ಸ್ಥಾಪನೆ ಹಾಗೂ ಬ್ಯಾಂಕಿಂಗ್‌ ವ್ಯವಸ್ಥೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಖುರ್ದುವೀರಾಪುರ ಗ್ರಾಮ ಸೇರಿದಂತೆ ಬ್ಯಾಡಗಿ ತಾಲೂಕಿನಾದ್ಯಂತ ಹೊಲಗಳಿಗೆ ತೆರಳುವ ಕಾಲು ದಾರಿಗಳನ್ನು ವಿಸ್ತರಿಸಿ ಎತ್ತಿನಬಂಡಿ, ಟ್ರ್ಯಾಕ್ಟರ್‌ಗಳು ಓಡಾಡುವಂತೆ ಮಾಡುವುದು ಅಗತ್ಯವಾಗಿದೆ. ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣಗೊಂಡಿರುವ ಪ್ರಸ್ತುತ ಹೊಲಗಳಿಗೆ ಟ್ರ್ಯಾಕ್ಟರ್‌ ತೆಗೆದುಕೊಂಡು ಹೋಗಲು ಕಾಲುದಾರಿಗಳು ಅಡ್ಡಿಯಾಗಿವೆ. ಇದರಿಂದ ಪ್ರತಿ ಗ್ರಾಮಗಳಲ್ಲಿ ರೈತರ ಮಧ್ಯ ವ್ಯಾಜ್ಯಗಳು ಉಂಟಾಗಿ ಸಾವಿರಾರು ಕೇಸ್‌ಗಳು ನ್ಯಾಯಾಲಯದಲ್ಲಿ ದಾಖಲಾಗುತ್ತಿವೆ. ವಿಶೇಷ ಕ್ರಮ ಕೈಗೊಂಡು ಕಂದಾಯ ಅಧಿಕಾರಿಗಳು ಹೊಲದ ಕಾಲುದಾರಿಗಳನ್ನು ವಿಸ್ತರಿ ಸಲು ಮನವಿ ಮಾಡಿದರು.

ಪಂಚಾಯತ್‌ ಕೆರೆಗಳ ಅಭಿವೃದ್ಧಿಯನ್ನು ಗ್ರಾಪಂಗೆ ವಹಿಸಲಾಗಿದೆ. ಇದರಿಂದ ಪೂರ್ಣ ಪ್ರಮಾಣದಲ್ಲಿ ಕೆರೆಗಳ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಕೆರೆಗಳ ಅಭಿವೃದ್ಧಿ ಕಾರ್ಯವನ್ನು ಜಿಪಂಗೆ ವರ್ಗಾಯಿಸಿ ಅಭಿವೃದ್ಧಿಪಡಿಸಲು ಕ್ರಮ ವಹಿಸಬೇಕು. ಹಾಗೂ ಉತ್ತಮ ಅಂಕ ಗಳಿಸಿದ ಗ್ರಾಮೀಣ ವಿದ್ಯಾರ್ಥಿ ಗಳಿಗೆ ಮೊರಾರ್ಜಿ ವಸತಿ ಶಾಲೆಗಳಿಗೆ ಹೆಚ್ಚಿನ ಪ್ರವೇಶ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಗ್ರಾಮೀಣ ವಿದ್ಯುತ್‌ ಪೂರೈಕೆಗೆ ವಿತರಣಾ ಜಾಲದ ಕೊರತೆ ದೊಡ್ಡ ಅಡ್ಡಿಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಲಾಗಿದೆ. ಡಿಸೆಂಬರ್‌ ನಲ್ಲಿ ವಿದ್ಯುತ್‌ ಕಾರಿಡಾರ್‌ ಹಾಗೂ ಗ್ರಿಡ್‌ ನಿರ್ಮಿಸಿ ನಿರಂತರ ವಿದ್ಯುತ್‌ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ರೇಷ್ಮೆ ಬೆಳೆಗಾರರಾದ ಮಾಲತೇಶ ಮತ್ತು ಸುರೇಶ ಅವರಿಗೆ ತಲಾ ಮೂರು ಲಕ್ಷ ರೂ. ಮೊತ್ತದ ಪ್ರೋತ್ಸಾಹ ಧನ ಚೆಕ್‌ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಲ್ಲೂರ ಗ್ರಾಪಂ ಅಧ್ಯಕ್ಷೆ ನೀಲವ್ವ ಕುಲಕರ್ಣಿ, ಅಂಬಿಗರಚೌಡಯ್ಯ ಪ್ರಾಧಿಕಾರದ ನಿರ್ದೇಶಕ ಜಿತೇಂದ್ರ ಸುಣಗಾರ, ಜಿಪಂ ಉಪ ಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳೆಗಡ್ಡಿ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ್‌, ಸಮಾಜ ಕಲ್ಯಾಣಾಧಿಕಾರಿ ಜಗದೀಶ ಹೆಬ್ಬಳ್ಳಿ, ಬಿಸಿಎಂ ಅಧಿಕಾರಿ ಪ್ರವೀಣ ಕೆ.ಎನ್‌., ಡಿಎಚ್‌ಒ ಡಾ.ಎಚ್‌.ಎಸ್‌.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶ್ರೀನಿವಾಸ ಆಲದರ್ತಿ, ವಾರ್ತಾಧಿಕಾರಿ ಡಾ.ಬಿ.ಆರ್‌. ರಂಗನಾಥ್‌, ತಹಶೀಲ್ದಾರ್‌ ತಿಪ್ಪೇಸ್ವಾಮಿ, ತಾಪಂ ಇಒ ಮಲ್ಲಿಕಾರ್ಜುನ, ಸಿಪಿಐ ಬಸವರಾಜ, ಇತರ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

55 ಅರ್ಜಿ ಇತ್ಯರ್ಥ

ಬ್ಯಾಡಗಿ: ಖುರ್ದವೀರಾಪೂರ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ದಲ್ಲಿ ಗ್ರಾಮಸ್ಥರಿಂದ ಸಲ್ಲಿಕೆ ಯಾಗಿದ್ದ ಒಟ್ಟು 120 ಅರ್ಜಿಗಳ ಪೈಕಿ 55 ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು.

ಇಸ್ಪಿಟ್‌ ಆಟ ನಿಲ್ಲಿಸಿ

ಗ್ರಾಮದಲ್ಲಿ ಇಸ್ಪಿಟ್‌ ಆಟ ನಿಲ್ಲಿಸಿ. ಗ್ರಾಮದ ಇಸ್ಪಿಟ್‌ ಆಟಕ್ಕೆ ಪೊಲೀಸರು ನೆರವು ನೀಡುತ್ತಿದ್ದಾರೆ. ಇದರಿಂದ ಗ್ರಾಮದ ವಾತಾವರಣ ಹಾಳಾಗುತ್ತಿದೆ ಎಂದು ಮಹಿಳೆಯರು ಜಿಲ್ಲಾಧಿಕಾರಿಗಳಿಗೆ ಲಿಖೀತ ದೂರು ನೀಡಿದರು. ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮಕ್ಕೆ ತಿಳಿಸುವುದಾಗಿ ಜಿಲ್ಲಾಧಿಕಾರಿಗಳು ಸಮಾಧಾನಪಡಿಸಿದರು.

ಗ್ರಾಮದ ಸಮಗ್ರ ಅಭಿವೃದ್ಧಿ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆಯುವಲ್ಲಿ ಫಲಾನುಭವಿಗಳ ಉಂಟಾದ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಭಾಗವಹಿಸಲಾಗಿದೆ. ನಿಮ್ಮ ಸಮಸ್ಯೆಗಳನ್ನು ಆಲಿಸಿ ಸಂಜೆಯೊಳಗಾಗಿ ಪರಿಹರಿಸಲಾಗುವುದು. ಸ್ಥಳದಲ್ಲೇ ಬಗೆಹರಿಸಲು ಸಾಧ್ಯವಾಗದ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಿಸಲಾಗುವುದು. –ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ

pramod muthalik

Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್‌ ಕಿಡಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.