ಜಾನುವಾರುಗಳಲ್ಲಿ ಹರಡುತ್ತಿದೆ ಚರ್ಮ ಗಂಟು ರೋಗ

ಗಡಿ ಜಿಲ್ಲೆಯಲ್ಲಿ ಕಾಣಿಸಿದೆ ಸಾಂಕ್ರಾಮಿಕ ರೋಗ; ಈಗಾಗಲೇ 4 ಜಾನುವಾರು ಸಾವು

Team Udayavani, Sep 19, 2022, 3:05 PM IST

19

ಚಿಕ್ಕೋಡಿ: ದೇಶದ ಹಲವು ರಾಜ್ಯಗಳಲ್ಲಿ ರೈತರಲ್ಲಿ ಭಯದ ವಾತಾವರಣ ಸೃಷ್ಟಿಸಿರುವ ದನಕರುಗಳ ಚರ್ಮ ಗಂಟು ರೋಗ ಇದೀಗ ರಾಜ್ಯದ ಗಡಿ ಭಾಗಕ್ಕೂ ಹರಡಿಕೊಂಡಿದ್ದು, ಇದರಿಂದ ರೈತಾಪಿ ವರ್ಗದ ಜನರಲ್ಲಿ ಆತಂಕ ಹೆಚ್ಚಿದೆ.

ನಿಪ್ಪಾಣಿ ತಾಲೂಕಿನ ಗಡಿ ಗ್ರಾಮಗಳಾದ ಮಾಣಕಾಪೂರ ಮತ್ತು ಇನ್ನಿತರ ಗ್ರಾಮಗಳಲ್ಲಿ ಸುಮಾರು 50 ಕ್ಕೂ ಹೆಚ್ಚಿನ ದನಕರುಗಳಿಗೆ ಈ ರೋಗ ಅಂಟಿಕೊಂಡಿದ್ದು, ರಾಜ್ಯದ ಗಡಿ ಭಾಗದ ಮಹಾರಾಷ್ಟ್ರದಲ್ಲಿ ಈ ರೋಗ ಹೆಚ್ಚಿನ ಪ್ರಮಾಣದಲ್ಲಿ ಉಲ್ಬಣಗೊಂಡಿರುವ ಪರಿಣಾಮ ಈಗಾಗಲೇ ಗಡಿ ಗ್ರಾಮವಾದ ರಾಂಗೋಳೆಯಲ್ಲಿ ನಾಲ್ಕು ಜಾನುವಾರುಗಳು ಸಾವನ್ನಪ್ಪಿವೆ.

ಆಕಳು ಮತ್ತು ಎಮ್ಮೆಗಳಲ್ಲಿ ಈ ರೋಗ ದೊಡ್ಡ ಪ್ರಮಾಣದಲ್ಲಿ ಕಂಡು ಬರುತ್ತಿದೆ. ರಾಜಸ್ಥಾನ, ಗುಜರಾತ್‌, ಮಹಾರಾಷ್ಟ್ರದ ನಂತರ ಇದೀಗ ಕರ್ನಾಟಕಕ್ಕೆ ಹಬ್ಬುತ್ತಿದೆ. ಕೂಡಲೇ ಪಶುಸಂಗೋಪನಾ ಇಲಾಖೆ ಸೂಕ್ತ ಗಮನಹರಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ.

ಏನಿದು ರೋಗ: ಜಾನುವಾರು ಚರ್ಮದ ಮೇಲೆ ಗಂಟಿನ ತರಹ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ. ತಕ್ಷಣ ಚಿಕಿತ್ಸೆ ನೀಡಿದರೆ ದನಕರುಗಳು ಗುಣಮುಖವಾಗುತ್ತವೆ. ನಿರ್ಲಕ್ಷ ಮಾಡಿದರೆ ದನಗಳು ಮೃತಪಡುವ ಸಾಧ್ಯತೆಗಳು ಹೆಚ್ಚು.

ರೋಗದ ಪ್ರಮುಖ ಲಕ್ಷಣಗಳು: ಪ್ರಾಣಿಗಳ ಕಣ್ಣು ಮತ್ತು ಮೂಗಿನಿಂದ ನೀರು ಬರುತ್ತದೆ. ಮೂಗಿನಿಂದ ಊತ ಕಾಣಿಸಿಕೊಳ್ಳುತ್ತಿದೆ. ಆರಂಭದಲ್ಲಿ ಪ್ರಾಣಿಗಳಿಗೆ ಜ್ವರ ಬರುತ್ತದೆ ಮತ್ತು ಹಾಲಿನ ಪ್ರಮಾಣ ಕಡಿಮೆಯಾಗುತ್ತದೆ. ಮೇವು ತಿನ್ನುವುದು, ನೀರು ಕುಡಿಯುವುದು ಕಡಿಮೆಯಾಗುತ್ತದೆ. ಪ್ರಾಣಿಗಳ ತಲೆ, ಕುತ್ತಿಗೆ, ಹಣೆ, ಎದೆ ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುತ್ತವೆ. ಬಾಯಿ ಹುಣ್ಣುಗಳು ಉಂಟಾಗಿ ಆಹಾರ ತಿನ್ನಲು ಕಷ್ಟವಾಗುತ್ತದೆ. ಇದರಿಂದ ಪ್ರಾಣಿಗಳು ಮೃತಪಡುವ ಸಾಧ್ಯತೆ ಇರುತ್ತದೆ.

ಸೋಂಕಿತ ಪ್ರಾಣಿಗಳನ್ನು ಪ್ರತ್ಯೇಕಿಸಿ: ಪಶುಸಂಗೋಪನಾ ಇಲಾಖೆ ವೈದ್ಯರ ಪ್ರಕಾರ, ಸೋಂಕಿತ ಪ್ರಾಣಿಗಳನ್ನು ಆರೋಗ್ಯಕರ ಪ್ರಾಣಿಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲು ರೈತರು ಮುಂದಾಗಬೇಕು. ಇದು ಸಾಂಕ್ರಾಮಿಕ ರೋಗವಾಗಿರುವುದರಿಂದ ಆರೋಗ್ಯವಂತ ಪ್ರಾಣಿಗಳೂ ಸೋಂಕಿತ ಪ್ರಾಣಿಗಳ ಸಂಪರ್ಕಕ್ಕೆ ಬಂದರೆ ರೋಗಕ್ಕೆ ತುತ್ತಾಗಬಹುದು. ಆರೋಗ್ಯಕರ ಪ್ರಾಣಿಗಳಿಗೆ ಉಳಿದ ನೀರು ಅಥವಾ ಸೋಂಕಿತ ಪ್ರಾಣಿಗಳ ಮೇವನ್ನು ತಿನ್ನಲು ಅನುಮತಿಸಬಾರದೆಂದು ಮಾಂಗೂರದ ಪಶು ವೈದ್ಯ ಅರವಿಂದ ಕಾಮಿರೆ ರೈತರಿಗೆ ಸಲಹೆ ನೀಡಿದ್ದಾರೆ.

ಚರ್ಮದ ಗಂಟು ರೋಗ ಸಾಂಕ್ರಾಮಿಕ ರೋಗವಾಗಿದೆ. ಜಾನುವಾರಗಳಲ್ಲಿ ಈ ರೋಗದ ಲಕ್ಷಣ ಕಂಡು ಬಂದರೇ ತಕ್ಷಣ ಆ ಜಾನುವಾರನ್ನು ಪ್ರತ್ಯೇಕಿಸಬೇಕು. ಕೂಡಲೇ ಪಶು ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಕೊಡಿಸಬೇಕು. ಈಗಾಗಲೇ ಇದನ್ನು ತಡೆಯಲು ಜಾನು‌ವಾರಗಳ ಸಂತೆಯನ್ನು ಜಿಲ್ಲಾಧಿಕಾರಿಗಳು ರದ್ದು ಮಾಡಿದ್ದಾರೆ. ರೈತರು ಸದ್ಯದ ಪರಿಸ್ಥಿಯಲ್ಲಿ ಜಾನುವಾರುಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬಾರದು. ಡಾ| ಸದಾಶಿವ ಉಪ್ಪಾರ, ಸಹಾಯಕ ನಿರ್ದೇಶಕರು, ಪಶು ಸಂಗೋಪನಾ ಇಲಾಖೆ, ಚಿಕ್ಕೋಡಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.