ಉಪಗ್ರಹ ಆಧರಿತ ಇಂಟರ್ನೆಟ್‌ ಸೌಲಭ್ಯ ಆರಂಭಿಸಿದ ಭಾರತೀಯ ಸೇನೆ


Team Udayavani, Sep 20, 2022, 7:25 AM IST

thumb internet siyachin

ನವದೆಹಲಿ: ಜಗತ್ತಿನ ಅತಿ ಎತ್ತರದ ಯುದ್ಧಭೂಮಿ ಎಂದು ಕರೆಯಲ್ಪಡುವ ಸಿಯಾಚಿನ್‌ ನೀರ್ಗಲ್ಲು ಪ್ರದೇಶದಲ್ಲಿ ಭಾರತೀಯ ಸೇನೆಯು ಉಪಗ್ರಹ ಆಧಾರಿತ ಇಂಟರ್ನೆಟ್‌ ಸೇವೆಯನ್ನು ಆರಂಭಿಸಿದೆ.

ಸಿಯಾಚಿನ್‌ ಸಿಗ್ನಲರ್‌ಗಳು ಇದರ ಅಳವಡಿಕೆ ಕಾರ್ಯವನ್ನು ಭಾನುವಾರ ಪೂರ್ಣಗೊಳಿಸಿದ್ದು, ಇದರಿಂದಾಗಿ ಇನ್ನು ಮುಂದೆ ಸಮುದ್ರಮಟ್ಟದಿಂದ ಬರೋಬ್ಬರಿ 19,061 ಅಡಿ ಎತ್ತರದಲ್ಲಿ ನಮ್ಮ ಯೋಧರಿಗೆ ಉಪಗ್ರಹ ಆಧಾರಿತ ಇಂಟರ್ನೆಟ್‌ ಸೇವೆ ಲಭ್ಯವಾಗಲಿದೆ.

ಯೋಧರೊಬ್ಬರು ಗ್ಲೆಷಿಯರ್‌ನ ಪರ್ವತ ಪ್ರದೇಶದಲ್ಲಿ ಆ್ಯಂಟೆನಾವನ್ನು ಅಳವಡಿಸುತ್ತಿರುವ ಫೋಟೋಗಳನ್ನು ಸೇನೆ ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಿದೆ. ಈ ಸೇವೆಯಿಂದಾಗಿ ಇನ್ನು ಮುಂದೆ ಯೋಧರು ತಮ್ಮ ತಮ್ಮ ಕುಟುಂಬಗಳೊಂದಿಗೆ ಯಾವುದೇ ನೆಟ್‌ವರ್ಕ್‌ ಸಮಸ್ಯೆಯಿಲ್ಲದೇ ಸಂಭಾಷಣೆ ನಡೆಸಬಹುದಾಗಿದೆ.

ಇದೇ ವೇಳೆ, ಸದ್ಯದಲ್ಲೇ ಭಾರತೀಯ ಸೇನೆಯು ತನಗೆಂದೇ ಪ್ರತ್ಯೇಕ ಸಂವಹನ ಉಪಗ್ರಹವನ್ನು ಹೊಂದಲಿದೆ. ಈಗಾಗಲೇ ಜಿಸ್ಯಾಟ್‌-7ಬಿ ಉಪಗ್ರಹಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಒಪ್ಪಿಗೆಯನ್ನೂ ನೀಡಿದ್ದಾರೆ. ಅದು ಸಶಸ್ತ್ರ ಪಡೆಗಳ ಸಮರ ಸನ್ನದ್ಧತೆ ಮತ್ತು ಸಂವಹನಾ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಲಿದೆ.

ಸೌಲಭ್ಯ ಒದಗಿಸಿದ್ದು ಯಾರು?
ಈ ಎತ್ತರದ ಪ್ರದೇಶದಲ್ಲಿ ದೂರಸಂಪರ್ಕ ಮೂಲಸೌಕರ್ಯ ಕಂಪನಿ ಭಾರತ್‌ ಬ್ರಾಡ್‌ಬ್ಯಾಂಡ್‌ ನೆಟ್‌ವರ್ಕ್‌ ಲಿ.(ಬಿಬಿಎನ್‌ಎಲ್‌) ಇಂಟರ್ನೆಟ್‌ ಸೇವೆಯನ್ನು ಒದಗಿಸಲಿದೆ. ಫೈಬರ್‌ ಆಧಾರಿತ ಇಂಟರ್ನೆಟ್‌ ವ್ಯವಸ್ಥೆಯಿಲ್ಲದಂಥ ಕುಗ್ರಾಮಗಳಲ್ಲಿ ಮತ್ತು ಸುಮಾರು 7 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್‌ ಸಂಪರ್ಕವನ್ನು ಒದಗಿಸುವಂಥ ಭಾರತ್‌ನೆಟ್‌ ಯೋಜನೆಯನ್ನು ಕೂಡ ಇದೇ ಸಂಸ್ಥೆ ಕೈಗೆತ್ತಿಕೊಂಡಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.