ವಿವಿಧತೆಯಲ್ಲಿ ಏಕತೆ ಭರತ ಭೂಮಿ ಮಣ್ಣಿನ ಗುಣಧರ್ಮ

ಬಾಳೆಹೊನ್ನೂರ ರಂಭಾಪುರಿ ಪೀಠದ ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಅಭಿಮತ

Team Udayavani, Sep 20, 2022, 3:50 PM IST

17

ರಾಣಿಬೆನ್ನೂರ: ಭಾರತೀಯ ಪುಣ್ಯ ಭೂಮಿಯಲ್ಲಿ ಇರುವ ಹಿಂದೂ ಸಂಸ್ಕೃತಿ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಭಾರತದಲ್ಲಿ ವಿವಿಧತೆಯಲ್ಲಿ ಏಕತೆ ಕಾಣುವ ವಿಶಾಲ ಮನೋಭಾವವನ್ನು ಇಲ್ಲಿ ಜನ್ಮ ಪಡೆದವರೆಲ್ಲರಲ್ಲೂ ಕಾಣುತ್ತೇವೆ. ಇದುವೇ ಈ ಮಣ್ಣಿನ ಗುಣಧರ್ಮವಾಗಿದೆ ಎಂದು ಬಾಳೆಹೊನ್ನೂರ ರಂಭಾಪುರಿ ಪೀಠದ ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.

ಇಲ್ಲಿನ ನಗರಸಭಾ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿ ಸಿರುವ ವಂದೇ ಮಾತರಂ ಸ್ವಯಂಸೇವಾ ಸಂಸ್ಥೆಯ 14ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಸೋಮವಾರ, ರಾಣಿಬೆನ್ನೂರ ಕಾ ರಾಜಾ ಮಹಾ ಮಂಟಪದಲ್ಲಿ ವಿಷ್ಣುವಿನ ದಶಾವತಾರದ ಕುರಿತು ಪ್ರತಿಷ್ಠಾಪಿಸಿರುವ ಸ್ತಬ್ಧಚಿತ್ರಗಳ ಮೂಲಕ ಸಾರುವ ಪುರಾಣದ ಮಾಹಿತಿ ವೀಕ್ಷಿಸಿ ಅವರು ಮಾತನಾಡಿದರು.

ಎಲ್ಲ ನದಿಗಳು ಸಾಗರವನ್ನು ಸೇರುವಂತೆ ಎಲ್ಲ ಧರ್ಮಗಳ ಸಾರವೂ ಒಂದೇ ಆಗಿದೆ. ಭಾರತದಲ್ಲಿ ಹಲವಾರು ಸಂಸ್ಕಾರ ಮತ್ತು ಸಂಸ್ಕೃತಿಗಳನ್ನು ಹೊಂದಿರುವ ಮತ, ಪಂಥ, ಧರ್ಮಗಳಿದ್ದರೂ ಗುರಿ ಒಂದೇ ಆಗಿದೆ. ಅದುವೇ ಮಾನವೀಯ ಧರ್ಮವಾಗಿದೆ. ಇದು ಈ ನಾಡಿದ ಹುಟ್ಟು ಗುಣವಾಗಿದೆ. ಹಿಂದೂಗಳು ಮುಸ್ಲಿಮರ ಹಬ್ಬದಲ್ಲಿ, ಮುಸ್ಲಿಮರು ಹಿಂದೂಗಳ ಹಬ್ಬದಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆಯುತ್ತಿದ್ದಾರೆ. ಇಂತಹ ಸಮಾಜವನ್ನು ಕುಲಗೆಡಿಸಲು ಕೆಲವು ರಾಜಕಾರಣಿಗಳು ವಿಷದ ಬೀಜ ಬಿತ್ತಿ ಸಮಾಜ ಹಾಳು ಮಾಡುತ್ತಿರುವುದು ದುರಂತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲೋಕ ಕಲ್ಯಾಣಾರ್ಥವಾಗಿ ವಿಷ್ಣು ತನ್ನ ದಶಾವತಾರಗಳ ಮೂಲಕ ಲೀಲೆಯಿಂದ ದುಷ್ಟರನ್ನು ಸಂಹಾರ ಮಾಡಿರುವ ದೃಶ್ಯಾವಳಿ ಮೂಲಕ ಪುರಾಣ ಮತ್ತು ರಾಮಾಯಣ, ಮಹಾಭಾರತದಲ್ಲಿ ಕೃಷ್ಣಾರ್ಜುನ ಸಂವಾದ ಹಿತಿಹಾಸದ ಗತವೈಭವ ಕಣ್ಣ ಮುಂದೆ ನಿಲ್ಲುವಂತೆ ಮಾಡಿರುವ ವಂದೇ ಮಾತರಂ ಸ್ವಯಂ ಸೇವಾ ಸಂಸ್ಥೆಯ ಕಾರ್ಯ ಶ್ಲಾಘನಿವಾಗಿದೆ. ಬುದ್ಧಿಗೆ ಮೂಲವಾಗಿರು ಗಣಪತಿಯ ಪೂಜೆ ಎಲ್ಲ ಧಾರ್ಮಿಕ ವಿಧಿವಿಧಾನಗಳಲ್ಲಿ ಮೊದಲಿಗೆ ನಡೆಯುತ್ತದೆ ಎಂದು ಶ್ರೀಗಳು ವಿವರಿಸಿದರು.

ಮುಂಬರುವ 15ನೇ ವರ್ಷದ ಗಣೇಶೋತ್ಸವದ ಅಂಗವಾಗಿ ರಾಣಿಬೆನ್ನೂರ ಕಾ ರಾಜಾ ಮಹಾ ಮಂಟಪದಲ್ಲಿ “ಮಾನವ ಧರ್ಮಕ್ಕೆ ಜಯವಾಗಲಿ’ ಎಂದು ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ರೇಣುಕಾಚಾರ್ಯ ಮಹತ್ವ ಹಾಗೂ ಸ್ತಬ್ಧಚಿತ್ರಗಳ ಮೂಲಕ ಅವರ ಸಂದೇಶ ಸಾರುವ ಪುರಾಣದ ಮಾಹಿತಿ ನೀಡಲು ಮುಂದಾಗಬೇಕೆಂದು ಸಲಹೆ ನೀಡಿದರು.

ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಜಗದೀಶ್ವರ ಸ್ವಾಮೀಜಿ, ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಶ್ರೀಗಳು, ವಂದೇ ಮಾತರಂ ಸ್ವಯಂಸೇವಾ ಸಂಸ್ಥೆ ಅಧ್ಯಕ್ಷ ಪ್ರಕಾಶ ಬುರಡಿಗಟ್ಟಿ, ನಗರಸಭಾ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಉಪಾಧ್ಯಕ್ಷೆ ಪ್ರಭಾವತಿ ತಿಳವಳ್ಳಿ, ಭಾರತಿ ಅಳವಂಡಿ, ರಾಘವೇಂದ್ರ ಚಿನ್ನಿಕಟ್ಟಿ, ನಾಗರಾಜ ಅಡ್ಮನಿ, ಹನುಮಂತಪ್ಪ ಹೆದ್ದೇರಿ, ರವಿ ಕಾಕೋಳ, ಹುಚ್ಚಪ್ಪ ಮೆಡ್ಲೇರಿ, ಅಜೇಯ ಮಠದ, ನೀಲಪ್ಪ ಕಸವಾಳ ಮತ್ತಿತರರು ಇದ್ದರು.

ಹಿಂದೂಗಳು ಮುಸ್ಲಿಮರ ಹಬ್ಬದಲ್ಲಿ, ಮುಸ್ಲಿಮರು ಹಿಂದೂಗಳ ಹಬ್ಬದಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆಯುತ್ತಿದ್ದಾರೆ. ಇಂತಹ ಸಮಾಜವನ್ನು ಕುಲಗೆಡಿಸಲು ಕೆಲವು ರಾಜಕಾರಣಿಗಳು ವಿಷದ ಬೀಜ ಬಿತ್ತಿ ಸಮಾಜ ಹಾಳು ಮಾಡುತ್ತಿರುವುದು ದುರಂತ.  -ರಂಭಾಪುರಿ ಶ್ರೀ

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

0023

Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.