![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 22, 2022, 7:40 AM IST
ಮಾಸ್ಕೋ: ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹಿನ್ನಡೆ ಆಗುತ್ತಿರುವುದನ್ನು ಅರಿತ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಬುಧವಾರ ಏಕಾಏಕಿ ಬರೋಬ್ಬರಿ 3 ಲಕ್ಷದಷ್ಟು ಮೀಸಲು ಯೋಧರನ್ನು ಯುದ್ಧಭೂಮಿಗೆ ಕರೆಸಿಕೊಳ್ಳುವ ಅಧ್ಯಾದೇಶಕ್ಕೆ ಸಹಿ ಹಾಕಿದ್ದಾರೆ. ಈ ಮೂಲಕ, ಯುದ್ಧವನ್ನು ಮತ್ತಷ್ಟು ತೀವ್ರಗೊಳಿಸುವ ಬೆದರಿಕೆಯೊಡ್ಡಿದ್ದಾರೆ.
ಹೆಚ್ಚುವರಿ ಸೇನೆಯನ್ನು ನಿಯೋಜಿಸುವ ಮುನ್ನ ದೇಶವನ್ನುದ್ದೇಶಿಸಿ ಮಾತನಾಡಿದ ಪುಟಿನ್, “ನಮ್ಮ ದೇಶವನ್ನು ನಾಶಮಾಡಲು ಪಾಶ್ಚಿಮಾತ್ಯ ರಾಷ್ಟ್ರಗಳು ಯತ್ನಿಸುತ್ತಿವೆ. ಆ ಇಡೀ ಪಾಶ್ಚಿಮಾತ್ಯ ಸೇನಾ ಶಕ್ತಿಯನ್ನು ಎದುರಿಸಬೇಕೆಂದರೆ ನಾವು ಇಂಥ ಕ್ರಮ ಕೈಗೊಳ್ಳಲೇಬೇಕಿದೆ. ಅವರ ನ್ಯೂಕ್ಲಿಯರ್ ಬ್ಲ್ಯಾಕ್ಮೇಲ್ ಅನ್ನು ನಾವು ನಮ್ಮೆಲ್ಲ ಶಕ್ತಿಯನ್ನು ಉಪಯೋಗಿಸುವ ಮೂಲಕ ಎದುರಿಸಿ, ನಮ್ಮ ನೆಲವನ್ನು ರಕ್ಷಿಸಿಕೊಳ್ಳಲಿದ್ದೇವೆ. ಇದು ತಮಾಷೆಯಲ್ಲ’ ಎಂದು ಎಚ್ಚರಿಸಿದ್ದಾರೆ.
ಉಕ್ರೇನ್ನ 4 ಪ್ರದೇಶಗಳು ರಷ್ಯಾಗೆ ಸೇರ್ಪಡೆಯಾಗುವ ಕುರಿತು ಸೆ.23-27ರ ಅವಧಿಯಲ್ಲಿ ಜನಾಭಿಪ್ರಾಯ ಸಂಗ್ರಹಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳು ನಡೆದಿವೆ.
ಮೋದಿ ಮಾತಿಗೆ ಮ್ಯಾಕ್ರನ್ ಮೆಚ್ಚುಗೆ:
ಇತ್ತೀಚೆಗೆ ನಡೆದ ಎಸ್ಸಿಒ ಶೃಂಗದ ವೇಳೆ ರಷ್ಯಾ ಅಧ್ಯಕ್ಷ ಪುಟಿನ್ಗೆ “ಇದು ಯುದ್ಧದ ಯುಗವಲ್ಲ’ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ಸರಿಯಾಗಿಯೇ ಇದೆ ಎಂದು ಬುಧವಾರ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರನ್ ಅಭಿಪ್ರಾಯಪಟ್ಟಿದ್ದಾರೆ.
“ಮೋದಿ ಅವರು ಸರಿಯಾಗಿಯೇ ಹೇಳಿದ್ದಾರೆ. ಇದು ಯುದ್ಧದ ಸಮಯವಲ್ಲ. ಪಾಶ್ಚಿಮಾತ್ಯರ ವಿರುದ್ಧ ಪ್ರತೀಕಾರ ತೀರಿಸುವ ಸಮಯವೂ ಅಲ್ಲ. ನಾವೆಲ್ಲರೂ ಎದುರಿಸುವಂಥ ಸವಾಲುಗಳನ್ನು ಸಮರ್ಥವಾಗಿ, ಒಗ್ಗಟ್ಟಾಗಿ ಎದುರಿಸುವ ಸಮಯ’ ಎಂದು ಮ್ಯಾಕ್ರನ್ ಹೇಳಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.