ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ

ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಈ ವಿಶೇಷ ಸಾಧನೆ ಮಾಡಿದ್ದಾರೆ.

Team Udayavani, Sep 22, 2022, 6:30 PM IST

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ

ಚಾಮರಾಜನಗರ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಸಮಗ್ರ ಕ್ರೀಡಾ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದ ವೆಂಕಟಯ್ಯನಛತ್ರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲೂ ತಮ್ಮ ಗೆಲುವಿನ ನಾಗಾಲೋಟವನ್ನು ಮುಂದುವರೆಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದನ್ನು ಕಾಲೇಜಿನ ಪ್ರಾಂಶುಪಾಲ ಎಸ್‌. ನಾಗೇಶ್‌ ಅಭಿನಂದಿಸಿದ್ದಾರೆ.

ಕಾಲೇಜಿನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಪ್ರಾಂಶುಪಾಲರು, ವಿದ್ಯಾರ್ಥಿಗಳ ಗೆಲುವಿಗೆ ಅಭಿನಂದನೆ ಸಲ್ಲಿಸಿದರು. ನಿರಂತರ ಶ್ರಮ ಮತ್ತು ಪ್ರಯತ್ನಕ್ಕೆ ಸಂದ ಗೆಲುವು ಇದು ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಸದಾ ಬೆನ್ನೆಲುಬಾಗಿ ಶ್ರಮಿಸುತ್ತಾ ಅತ್ಯುತ್ತಮ ತರಬೇತಿ ನೀಡುತ್ತಿರುವ ಭೂಗೋಳಶಾಸ್ತ್ರ ಉಪನ್ಯಾಸಕ ಮಹಾಂತೇಶ ಕುರುಬರ ಅವರ ಶ್ರದ್ಧೆ ಮತ್ತು ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲೂ ಉತ್ತಮ ಸಾಧನೆ ಮೂಡಿಬರಲಿ ಎಂದು ಶುಭ ಕೋರಿದರು.

ಸೆ.20 ಮತ್ತು 21 ರಂದು ನಗರದ ಡಾ. ಬಿ. ಆರ್‌. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸೇವಾಭಾರತಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜನೆಗೊಂಡಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಈ ವಿಶೇಷ ಸಾಧನೆ ಮಾಡಿದ್ದಾರೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳವಿವರ ಹೀಗಿದೆ:- ಶೈಲಜಾ, 100ಮೀ ಹಾಗೂ 200ಮೀ ಓಟ ಪ್ರಥಮ ಸ್ಥಾನ, ಕಾವ್ಯಾ ಜಿ ಗುಡ್ಡಗಾಡು ಓಟ ಪ್ರಥಮ ಸ್ಥಾನ. 5000ಮೀ ಓಟ ದ್ವಿತೀಯ ಸ್ಥಾನ, ಹರಿಕೃಷ್ಣ ಉದ್ದ ಜಿಗಿತ ಪ್ರಥಮ ಸ್ಥಾನ. ಎತ್ತರ ಜಿಗಿತ ದ್ವಿತೀಯ ಸ್ಥಾನ, ನವೀನ್‌ ಕುಮಾರ್‌ ಗುಡ್ಡಗಾಡು ಓಟ ದ್ವಿತೀಯ ಸ್ಥಾನ , 5000ಮೀ ಓಟ ತೃತೀಯ ಸ್ಥಾನ, ತೇಜಸ್‌ 800ಮೀ ಓಟ ದ್ವಿತೀಯ ಸ್ಥಾನ. ಯೋಗೇಶ 5000 ಮೀ ದ್ವಿತೀಯ ಸ್ಥಾನ, ರಾಜೇಶ್‌ – 4/400 ರಿಲೇ ಪ್ರಥಮ ಸ್ಥಾನ, 4/400 ರಿಲೇ – ಪ್ರಥಮ ಸ್ಥಾನ – ಶೈಲಜಾ ವಿ, ಕಾವ್ಯ ಜಿ,. ಖೋ-ಖೋ – ದ್ವಿತೀಯ ಸ್ಥಾನ- ಶೈಲಜಾ ವಿ, ಕಾವ್ಯ ಜಿ, ನರ್ಮದಾ, ಖೋ-ಖೋ – ಪ್ರಥಮ ಸ್ಥಾನ ಮಹದೇವಸ್ವಾಮಿ, ಯೋಗೇಶ್‌, ಮಧುಕುಮಾರ್‌ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಒಟ್ಟು 09 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಉಪನ್ಯಾಸಕ ಮಲ್ಲೇಶ, ಎಸ್‌. ಪ್ರಶಾಂತ, ಆರ್‌. ಮಹೇಶ್‌, ಎ. ಪೂರ್ಣಿಮಾ ಜೆ, ಅನಿತಾ ವಿ. ಗೋವಿಂದ, ಎಸ್‌. ಶೀಲಾವತಿ, ಮಹಾಂತೇಶ ಕುರುಬರ ಹಾಗೂ ಅತಿಥಿ ಉಪನ್ಯಾಸಕರು ಇತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.