ನೂಪುರ್ ಶಿಖರೆ ಜತೆ ಎಂಗೇಜ್ ಆದ ಆಮಿರ್ ಖಾನ್ ಪುತ್ರಿ; ಇಲ್ಲಿದೆ ನೋಡಿ ವಿಡಿಯೋ
Team Udayavani, Sep 23, 2022, 3:26 PM IST
ಬಾಲಿವುಡ್ ಸೂಪರ್ ಸ್ಟಾರ್ ಆಮಿರ್ ಖಾನ್ ಪುತ್ರಿ ಇರಾ ಖಾನ್ ಅವರು ತಮ್ಮ ಬಹುಕಾಲದ ಗೆಳೆಯ ನೂಪುರ್ ಶಿಖರೆ ಜೊತೆ ಎಂಗೇಜ್ ಆಗಿದ್ದಾರೆ. ಹೌದು, ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇರಾ ಖಾನ್ ಈ ಬಗ್ಗೆ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾರೆ.
ನೂಪರ್ ಶಿಖರೆ ಅವರು ಸೆಲೆಬ್ರೆಟಿ ಫಿಟ್ನೆಸ್ ಟ್ರೈನರ್ ಆಗಿದ್ದು, ಎರಡು ವರ್ಷಗಳಿಂದ ಇವರಿಬ್ಬರು ಪ್ರೀತಿಯಲ್ಲಿದ್ದರು. ಇರಾ ಖಾನ್ ಅವರು ನೂಪುರ್ ಅವರ ಸೈಕ್ಲಿಂಗ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಆ ಸಮಯದಲ್ಲಿ ನೂಪುರ್ ಇರಾಗೆ ಪ್ರಪೋಸ್ ಮಾಡಿದ್ದಾರೆ.
ಇರಾ ಖಾನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೊಮ್ಯಾಂಟಿಕ್ ಪ್ರಪೋಸ್ ನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇರಾ ಪ್ರೇಕ್ಷಕರ ಗ್ಯಾಲರಿಯಲ್ಲಿ ನಿಂತಿದ್ದು, ನೂಪರ್ ಆಕೆಯೆಡೆಗೆ ಬಂದು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಉಂಗುರವನ್ನು ಹಿಡಿದು ಇರಾಗೆ ‘ನನ್ನನ್ನು ಮದುವೆಯಾಗುತ್ತೀಯಾ’ ಎಂದು ಕೇಳಿದ್ದಾರೆ. ಇರಾ ಕೂಡಲೇ ‘ಯಸ್’ ಎಂದಿದ್ದಾರೆ. ನಂತರ ಜೋಡಿ ಅಪ್ಪಿಕ್ಕಿಕೊಂಡು ಮುತ್ತಿಕ್ಕಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
View this post on Instagram
2020ರಿಂದ ಇರಾ ಖಾನ್ ಮತ್ತು ನೂಪುರ್ ಶಿಖರೆ ಡೇಟ್ ಮಾಡುತ್ತಿದ್ದಾರೆ. ಇರಾ ಖಾನ್ ಆಗಾಗ ತಮ್ಮ ಮತ್ತು ಗೆಳೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. 25 ವರ್ಷದ ಇರಾ ಖಾನ್ ಅವರು ಅಮೀರ್ ಖಾನ್ ಅವರ ಮೊದಲ ಪತ್ನಿ, ನಿರ್ಮಾಪಕಿ ರೀನಾ ದತ್ತಾ ಅವರ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.