![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 23, 2022, 7:16 PM IST
ಆಳಂದ: ಸ್ವಚ್ಛ ಭಾರತ ಸ್ವತ್ಛ ನಗರವನ್ನಾಗಿಸಲು ಪುರಸಭೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿಜಯಮಹಾಂತೇಶ ಹೂಗಾರ ಜನತೆಗೆ ಕರೆ ನೀಡಿದರು.
ಪಟ್ಟಣದ ಹನುಮಾನ ದೇವಸ್ಥಾನ ಆವರಣದಲ್ಲಿ ಪುರಸಭೆ ಹಾಗೂ ಲೈಫ್ ಲೈನ್ ಅಸೋಶಿಯೇಶನ್ ಜೇವರ್ಗಿ ಸಂಸ್ಥೆಯ ಆಶ್ರಯದಲ್ಲಿ ಸ್ವಚ್ಛ ಭಾರತ ಅಭಿಯಾನ ಜಾಗೃತಿ ಮತ್ತು ಕಲಾ ತಂಡದ ಬೀದಿನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ನಾವು ವಾಸಿಸುವ ಬಡಾವಣೆ ನಗರದಲ್ಲಿ ಪುರಸಭೆ ಸಿಬ್ಬಂದಿಗಳೊಂದಿಗೆ ನಾಗರಿಕರು ಸಹ ಸ್ವಚ್ಛತೆಗೆ ಒತ್ತು ನೀಡಬೇಕು. ಸ್ವಚ್ಛತೆ ಇದ್ದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ. ಬೀದಿ ಬದಿಗಳ ಮೇಲೆ ಬೇಕಾಬಿಟ್ಟಿಯಾಗಿ ಕಸವನ್ನು ಚಲ್ಲದೆ, ಕಸ ಸಂಗ್ರಹಿಸಲು ಸಿಬ್ಬಂದಿಗಳು ಮನೆ ಬಾಗಿಲಿಗೆ ಬಂದಾಗ ಕಸವನ್ನು ಗಾಡಿಗೆ ಹಾಕಬೇಕು. ನೀರಿನ ಬಾಟಲ್, ಪ್ಲಾಸ್ಟಿಕ್ಗಳನ್ನು ಚರಂಡಿಗೆ ಎಸೆದರೆ ನೀರು ಹರಿಯದೆ ರಸ್ತೆಗೆ ಬರುತ್ತವೆ. ಇದರಿಂದ ರಸ್ತೆ ಮಲೀನವಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಕಾಲಕಾಲಕ್ಕೆ ಬಡಾವಣೆಗಳಲ್ಲಿ ಸ್ವತ್ಛತೆ ಆಗದೆ ಇದ್ದಲ್ಲಿ ಗಮನಕ್ಕೆ ತಂದರೆ ಸರಿಪಡಿಸಲಾಗುವುದು ಎಂದು ಹೇಳಿದರು.
ಪುರಸಭೆ ವಾರ್ಡ್ ಸದಸ್ಯ ಶ್ರೀಶೈಲ ಪಾಟೀಲ, ಯುವ ಮುಖಂಡ ಶ್ರೀಶೈಲ ಖಜೂರಿ, ಸಿದ್ದು ಪೂಜಾರಿ, ಪರಿಸರ ಅಭಿಯಂತರ ರವಿಕಾಂತ ಮೀಸ್ಕಿನ್, ಎಸ್ಐ ಲಕ್ಷ್ಮಣ ತಳವಾರ ಇದ್ದರು. ಬಳಿಕ ಪ್ರದರ್ಶನಗೊಂಡ ಸಂಸ್ಥೆಯ ಕಲಾತಂಡ ಬೀದಿ ನಾಟಕದಲ್ಲಿ ಸ್ವಚ್ಛತೆ ಕುರಿತು ನಾಗರಿಕ ಸಮುದಾಯದಲ್ಲಿ ಹಕ್ಕು ಮತ್ತು ಕರ್ತವ್ಯ ಜವಾಬ್ದಾರಿ ಕುರಿತು ಅರಿವು ಮೂಡಿಸಲಾಯಿತು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.