ಶರನ್ನವರಾತ್ರಿ ಆಚರಣೆಗೆ ಭರದ ಸಿದ್ಧತೆ

ಶಕ್ತಿದೇವತೆಗಳ ಆರಾಧನೆಗಾಗಿ ದೀಪಾಲಂಕಾರದೊಂದಿಗೆ ಸಿಂಗಾರಗೊಂಡ ದೇಗುಲಗಳು

Team Udayavani, Sep 25, 2022, 12:44 PM IST

10

ಹಾವೇರಿ: ನವರಾತ್ರಿ ಹಿನ್ನೆಲೆಯಲ್ಲಿ ಶಕ್ತಿದೇವತೆಗಳ ಆರಾಧನೆಗಾಗಿ ನಗರದ ಪ್ರಮುಖ ದೇಗುಲಗಳಲ್ಲಿ ಪೂರ್ವಸಿದ್ಧತೆಗಳು ಭರದಿಂದ ಸಾಗಿದ್ದು, ಕೆಲ ದೇವಸ್ಥಾನಗಳು ವಿದ್ಯುತ್‌ ದೀಪಾಲಂಕಾರದೊಂದಿಗೆ ಕಂಗೊಳಿಸುತ್ತಿವೆ.

ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ದಸರಾ ಸೇರಿದಂತೆ ಬಹುತೇಕ ಎಲ್ಲ ಹಬ್ಬಗಳನ್ನು ಸರಳ ಹಾಗೂ ಸಂಕ್ಷಿಪ್ತವಾಗಿ ಆಚರಿಸುವಂತಾಗಿತ್ತು. ಪುರಾಣ ಪ್ರವಚನ, ಪಾರಾಯಣ, ಪಲ್ಲಕ್ಕಿ ಉತ್ಸವ ಹಾಗೂ ಧಾರ್ಮಿಕ ಸಭೆಗಳಿಗೂ ಅವಕಾಶವಿಲ್ಲದಂತಾಗಿತ್ತು. ಪ್ರಸಕ್ತ ವರ್ಷ ಕೋವಿಡ್‌ ಸೋಂಕು ಮರೆಯಾಗಿದ್ದು, ಈ ಬಾರಿ ಸಂಭ್ರಮದಿಂದ ದಸರಾ ಹಬ್ಬ ಆಚರಣೆಗೆ ಜನರು ಉತ್ಸುಕರಾಗಿದ್ದಾರೆ.

ನಗರದ ರೈಲ್ವೆ ಸ್ಟೇಷನ್‌ ರಸ್ತೆಯಲ್ಲಿರುವ ನವದುರ್ಗೆಯರ ದೇವಸ್ಥಾನ, ಬಸವೇಶ್ವರ ನಗರದ ಸಿ ಬ್ಲಾಕ್‌ನ ಅನ್ನಪೂರ್ಣೇಶ್ವರಿ ದೇವಸ್ಥಾನ, ಹಳೆಯ ಪಿ.ಬಿ.ರಸ್ತೆಯಲ್ಲಿರುವ ವಡ್ಡಮ್ಮದೇವಿ ದೇವಸ್ಥಾನ, ಮುನ್ಸಿಫಲ್‌ ಹೈಸ್ಕೂಲ್‌ ರಸ್ತೆಯಲ್ಲಿರುವ ದಾನಮ್ಮದೇವಿ ದೇವಸ್ಥಾನ, ಉದಯ ನಗರದಲ್ಲಿರುವ ಚೌಡೇಶ್ವರಿ ದೇವಸ್ಥಾನ, ದ್ಯಾಮವ್ವನ ಗುಡಿ ಓಣಿಯ ಶ್ರೀ ಕಾಳಿಕಾಂಬ ದೇವಸ್ಥಾನ, ಗ್ರಾಮದೇವತೆ ದೇವಸ್ಥಾನ, ಯಾಲಕ್ಕಿ ಓಣಿಯ ಜೈನ ಮಂದಿರ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಸುಣ್ಣ-ಬಣ್ಣ ಹಾಗೂ ಸ್ವಚ್ಛತಾ ಕಾರ್ಯಗಳು ಭರದಿಂದ ಸಾಗಿವೆ.

ನವದುರ್ಗಾ ದೇಗುಲದ ಕಾರ್ಯಕ್ರಮಗಳು: ನಗರದ ರೈಲ್ವೆ ಸ್ಟೇಷನ್‌ ರಸ್ತೆಯಲ್ಲಿರುವ ನವದುರ್ಗಾ ದೇವಸ್ಥಾನದಲ್ಲಿ ದಸರಾ ಹಬ್ಬದ ನಿಮಿತ್ತ ಸೆ.26ರಿಂದ ಅಕ್ಟೋಬರ್‌ 5ರವರೆಗೆ ಶರನ್ನವರಾತ್ರಿ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆ.26ರಂದು ಶ್ರೀ ಶೈಲಪುತ್ರಿ ದೇವಿಗೆ ಅಭಿಷೇಕ ಹಾಗೂ ಪೂಜೆ, ಸೆ.27ರಂದು ಶ್ರೀ ಬ್ರಹ್ಮಚಾರಿಣೀ ದೇವಿಗೆ ಅಭಿಷೇಕ ಹಾಗೂ ಪೂಜೆ, ಸೆ.28ರಂದು ಶ್ರೀ ಚಂದ್ರಘಂಟಾ ದೇವಿಗೆ ಅಭಿಷೇಕ, ಸೆ.29ರಂದು ಶ್ರೀ ಕೂಷ್ಮಾಂಡಾ ದೇವಿಗೆ ಪೂಜೆ, ಸೆ.30ರಂದು ಶ್ರೀ ಸ್ಕಂದಮಾತಾ ದೇವಿಗೆ ಅಭಿಷೇಕ, ಅ.1ರಂದು ಶ್ರೀ ಕಾತ್ಯಾಯಿನೀ ದೇವಿಗೆ ವಿಶೇಷ ಪೂಜೆ, ಅ.2ರಂದು ಶ್ರೀ ಕಾಲರಾತ್ರಿ ದೇವಿಗೆ ಅಭಿಷೇಕ, ಅ.3ರಂದು ಶ್ರೀ ಮಹಾಗೌರಿ ದೇವಿಗೆ ಅಭಿಷೇಕ, ಬೆಳಗ್ಗೆ 10ಗಂಟೆಗೆ ದುರ್ಗಾ ಹೋಮ, ಅ.4ರಂದು ಶ್ರೀ ಸಿದ್ಧಿದಾತ್ರಿ ದೇವಿಗೆ ಅಭಿಷೇಕ ಹಾಗೂ ಪೂಜೆ, ಅ.5ರಂದು ವಿಜಯದಶಮಿ ಆಚರಣೆ ನಡೆಯಲಿದೆ.

ಶ್ರೀ ಕಾಳಿಕಾಂಬ ದೇವಸ್ಥಾನ: ನಗರದ ಕಾಳಿಕಾಂಬ ದೇವಸ್ಥಾನದಲ್ಲಿ ಸೆ.26ರಂದು ಬೆಳಗ್ಗೆ 8ಗಂಟೆಗೆ ಶ್ರೀ ಕಾಳಿಕಾದೇವಿಗೆ ಪಂಚಾಮೃತ ಅಭಿಷೇಕ ಹಾಗೂ ಘಟಸ್ಥಾಪನೆ, ದೀಪಾರಾಧನೆ ಜರುಗುವುದು. ಪ್ರತಿದಿನ ಸಂಜೆ 7ಗಂಟೆಗೆ ಗೋಪಾಲಕೃಷ್ಣ ಆಚಾರ್ಯ ಮನ್ವಾಚಾರ್ಯ ಅವರಿಂದ ಶ್ರೀದೇವಿ ಪುರಾಣ ಪ್ರವಚನ ನಡೆಯಲಿದೆ. ಪ್ರತಿದಿನ ಶ್ರೀ ಗಾಯತ್ರಿ ಭಜನಾ ಮಂಡಳಿ ಮಹಿಳೆಯಿಂದ ಶ್ರೀದೇವಿಗೆ ಕುಂಕುಮಾರ್ಚನೆ, ಶ್ರೀಶಕ್ತಿ ಮಹಿಳಾ ಮಂಡಳದ ವತಿಯಿಂದ 3ರಿಂದ 6ವರ್ಷದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ, ಮಹಿಳೆಯರಿಂದ ವಿವಿಧ ಕಾರ್ಯಕ್ರಮಗಳು ಜರುಗಲಿವೆ.

ನವರಾತ್ರಿ-ವಿಶೇಷ ಪೂಜೆ

ನಗರದ ಬಹುತೇಕ ಶಕ್ತಿದೇವತೆಗಳ ದೇವಸ್ಥಾನಗಳಲ್ಲಿ ಸೆ.26ರಂದು ಸಂಜೆ ದೇವಿಗೆ ಅಲಂಕಾರ ಸೇವೆ ಹಾಗೂ ಘಟಸ್ಥಾಪನೆ, ಸೆ.30ರಂದು ಲಲಿತ ಪಂಚಮಿ ಆಚರಣೆ, ಅ.3ರಂದು ದುರ್ಗಾಷ್ಟಮಿ, ಅ.4ರಂದು ಮಹಾನವಮಿ ನಿಮಿತ್ತ ಆಯುಧ ಪೂಜೆ ನೆರವೇರಿಸಲಾಗುತ್ತದೆ. ಅ.5ರಂದು ವಿಜಯದಶಮಿ ಪ್ರಯುಕ್ತ ತಾಯಿ ಜಗನ್ಮಾತೆಗೆ ವಿಶೇಷ ಪೂಜೆ ಹಾಗೂ ಸಂಜೆ ಬನ್ನಿ ಮುಡಿಯುವ ಕಾರ್ಯಕ್ರಮ ನೆರವೇರಿಸಲು ಸಿದ್ಧತೆ ನಡೆಸಲಾಗುತ್ತಿದೆ.

ನಗರದ ನವದುರ್ಗೆ ದೇವಸ್ಥಾನದಲ್ಲಿ ದಸರಾ ಹಬ್ಬದ ನಿಮಿತ್ತ ಶರನ್ನವರಾತ್ರಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸೆ.26ರಿಂದ ಅ.5ರವರೆಗೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಕೊರೊನಾ ಸೋಂಕು ಮರೆಯಾಗಿದ್ದರಿಂದ ಹಬ್ಬದ ಸಂಭ್ರಮ ಇಮ್ಮಡಿಯಾಗಿದೆ.  –ಗೌರೀಶ ಭಟ್‌, ನವದುರ್ಗೆ ದೇವಸ್ಥಾನದ ಪ್ರಧಾನ ಅರ್ಚಕರು

-ವೀರೇಶ ಮಡ್ಲೂರ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.