ಬೆಳಗಾವಿ: ಭೀಕರ ಅಪಘಾತದಲ್ಲಿ ಎಎಸ್ಐ ಪತ್ನಿ, ಮಗಳು ಸೇರಿ ನಾಲ್ವರು ದುರ್ಮರಣ
Team Udayavani, Sep 25, 2022, 3:24 PM IST
ಬೆಳಗಾವಿ: ಸಿಮೆಂಟ್ ಲಾರಿ ಹಾಗೂ ಕಾರು-ದ್ವಿಚಕ್ರ ವಾಹನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಎಎಸ್ಐ ಪತ್ನಿ, ಪುತ್ರಿ, ಕಾರು ಚಾಲಕ ಸೇರಿ ನಾಲ್ವರು ಮೃತಪಟ್ಟ ಘಟನೆ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ರವಿವಾರ ಸಂಭವಿಸಿದೆ.
ಬೆಳಗಾವಿ ನಿವಾಸಿಗಳಾದ ಕುಡಚಿ ಠಾಣೆ ಎಎಸ್ಐ ಪರುಶರಾಮ ಹಲಕಿ ಎಂಬವರ ಪತ್ನಿ ರುಕ್ಮಿಣಿ ಹಲಕಿ (48 ವ), ಅಕ್ಷತಾ ಹಲಕಿ (24 ವ), ನಿಖಿಲ್ ಕದಮ (24 ವ) ಹಾಗೂ ಹನುಮವ್ವ ಚಿಕ್ಕಲಕಟ್ಟಿ (65 ವ) ಎಂಬವರು ಮೃತಪಟ್ಟಿದ್ದಾರೆ.
ಲೋಕಾಪುರ ಕಡೆಯಿಂದ ಗೋವಾಕ್ಕೆ ಸಿಮೆಂಟ್ ತುಂಬಿಕೊಂಡು ಲಾರಿ ಹೊರಟಿತ್ತು. ಎದುರಿನಿಂದ ಬಂದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದೆ. ಪಕ್ಕದಲ್ಲಿದ್ದ ದ್ವಿಚಕ್ರ ವಾಹನಕ್ಕೂ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:108 ನಲ್ಲಿ ತಾಂತ್ರಿಕ ದೋಷ; ಜನರಿಗೆ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗೆ ಕ್ರಮ: ಕೆ.ಸುಧಾಕರ್
ಕಾರಿನಲ್ಲಿದ್ದ ಕುಡಚಿ ಠಾಣೆ ಎಎಸ್ಐ ಪರುಶರಾಮ ಹಲಕಿ ಎಂಬವರ ಪತ್ನಿ ರುಕ್ಮಿಣಿ ಹಾಗೂ ಮಗಳು ಅಕ್ಷತಾ ಹೊರಟಿದ್ದರು. ಕಾರಿನಲ್ಲಿದ್ದ ಚಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ. ಬೈಕ್ ಮೇಲೆನದ್ದ ವೃದ್ಧೆ ಹನುಮವ್ವ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಎಸ್ ಪಿ ಸಂಜೀವ ಪಾಟೀಲ, ಹೆಚ್ಚುವರಿ ಎಸ್ ಪಿ ಮಹಾಲಿಂಗ ನಂದಗಾಂವಿ, ಬೈಲಹೊಂಗಲ ಡಿಎಸ್ ಪಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.