ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗ
Team Udayavani, Sep 25, 2022, 4:30 PM IST
ಭಾಲ್ಕಿ: ಕ್ರೀಡೆಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ ಎಂದು ಶಾಸಕ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು. ಪಟ್ಟಣದ ದಿವ್ಯಜ್ಯೋತಿ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲ್ಯದಿಂದಲೇ ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಅತ್ಯವಶ್ಯಕವಾಗಿವೆ. ಶಿಕ್ಷಕರು ಮಕ್ಕಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಉತ್ತಮ ವೇದಿಕೆ ಕಲ್ಪಿಸಿಕೊಡಬೇಕು. ಮಾಹಿತಿ ತಂತ್ರಜ್ಞಾನ ಬಳಕೆಯಿಂದ ಮಕ್ಕಳು ದೈಹಿಕವಾಗಿ ಕುಂಠಿತರಾಗುತ್ತಿದ್ದಾರೆ. ಅವರ ಆರೋಗ್ಯ ಚನ್ನಾಗಿರುವ ನಿಟ್ಟಿನಲ್ಲಿ ಅವರಿಗೆ ಕ್ರೀಡಯೆಲ್ಲಿ ಭಾಗವಹಿಸಲು ಶಿಕ್ಷಕರು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.
ಕ್ರೀಡೆಗಳಿಂದ ಮಕ್ಕಳಲ್ಲಿ ಶಿಸ್ತು ಮತ್ತು ಸ್ಪರ್ಧಾ ಮನೋಭಾವ ಬೆಳೆಯುತ್ತದೆ. ಕ್ರೀಡಾಕೂಟವು ಮಕ್ಕಳಲ್ಲಿ ಸೃಜನಶೀಲತೆ ಮತ್ತು ಪ್ರತಿಭೆ ಅನಾವರಣ ಮಾಡುವ ವೇದಿಕೆಯಾಗಿದೆ. ತಾಲೂಕಿನಲ್ಲಿಯ ಎಲ್ಲ ಶಾಲೆಗಳಲ್ಲಿಯೂ ಆಟದ ಮೈದಾನ ಸೇರಿದಂತೆ ಕ್ರೀಡಾ ಚಟುವಟಿಕೆ ನಡೆಸಲು ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುತ್ತೇನೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ ಮಾತನಾಡಿದರು. ಪುರಸಭೆ ಉಪಾಧ್ಯಕ್ಷ ಅಶೋಕ ಗಾಯಕವಾಡ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಮಡಿವಾಳಪ್ಪ ಮಂಗಲಗಿ, ಫಾದರ ರೂಕಿ ಡಿಸೋಜಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದತ್ತು ಕಾಟಕರ, ರಾಜಕುಮಾರ ಜೊಳದಪಕೆ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಷ ಇಟಗೆ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಕೀರ್ತಿಲತಾ ಹೊಸಾಳೆ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ್, ಇಸಿಒ ಜಯರಾಮ ಬಿರಾದಾರ, ಸಹದೇವ.ಜಿ, ಪತ್ರಾಂಕಿತ ವ್ಯವಸ್ಥಾಪಕ ಶಿವಕುಮಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು
Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ
Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ
MUST WATCH
ಹೊಸ ಸೇರ್ಪಡೆ
Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!
Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ
Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್ಡಿಕೆ
Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್ಪಾಲ್, ರಶೀದ್ ಸಂಸದರಾಗಿ ಪ್ರಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.