ರೈತರ ಆಸ್ತಿ ಜಪ್ತಿಗೆ ತಡೆ: ದುರುಪಯೋಗವಾಗದಂತೆ ಎಚ್ಚರ ವಹಿಸಲಿ


Team Udayavani, Sep 26, 2022, 6:00 AM IST

ರೈತರ ಆಸ್ತಿ ಜಪ್ತಿಗೆ ತಡೆ: ದುರುಪಯೋಗವಾಗದಂತೆ ಎಚ್ಚರ ವಹಿಸಲಿ

ಕಳೆದೆರಡು ದಶಕಗಳಿಂದೀಚೆಗೆ ರೈತರು ಬೆಳೆ ಹಾನಿ, ಸಾಲದ ಹೊರೆ ಮತ್ತಿತರ ಕಾರಣಗಳಿಂದಾಗಿ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ದೇಶದಲ್ಲಿ ಪ್ರತಿನಿತ್ಯ ಎಂಬಂತೆ ವರದಿಯಾಗುತ್ತಲೇ ಇವೆ. ಪ್ರವಾಹ, ಬರ, ಬೆಳೆಗಳನ್ನು ಇನ್ನಿಲ್ಲದಂತೆ ಕಾಡುತ್ತಿರುವ ರೋಗಬಾಧೆಯಿಂದಾಗಿ ರೈತರ ಪರಿಶ್ರಮ ವ್ಯರ್ಥವಾಗುತ್ತಿದೆ. ಅಲ್ಲದೆ ಒಂದು ವೇಳೆ ಇವೆ ಲ್ಲವನ್ನೂ ಮೆಟ್ಟಿ ನಿಂತು ಬೆಳೆ ಕೈಗೆ ಸಿಕ್ಕಿದರೂ ಸೂಕ್ತ ಬೆಲೆ ಸಿಗದೆ ರೈತರು ತೀವ್ರ ವಾದ ಆರ್ಥಿಕ ಮುಗ್ಗಟ್ಟು ಎದುರಿಸುವ ಅನಿವಾರ್ಯತೆಗೆ ಸಿಲುಕುವಂತಾಗಿದೆ.

ಇದರಿಂದಾಗಿ ಸಾಮಾನ್ಯ ರೈತ ತನ್ನ ಸಂಸಾರದ ವೆಚ್ಚ ವನ್ನೂ ಹೊಂದಿಸಲಾಗದೆ ಸಾವಿನ ಮೊರೆ ಹೋಗುತ್ತಿರುವುದು ತೀರಾ ದುರ ದೃಷ್ಟಕರ. ಅನ್ನದಾತನೇ ದೇಶದ ಬೆನ್ನೆಲುಬು ಎಂದು ಗುಣಗಾನ ಮಾಡ ಲಾಗುತ್ತಿದ್ದರೂ ದೇಶದಲ್ಲಿ ರೈತನ ಪರಿಸ್ಥಿತಿ ಮಾತ್ರ ಆರಕ್ಕೇರುತ್ತಿಲ್ಲ, ಮೂರಕ್ಕೆ ಇಳಿಯುತ್ತಿಲ್ಲ.

ನಮ್ಮನ್ನಾಳುವ ಸರಕಾರಗಳು ರೈತರ ಹಿತಾಸಕ್ತಿ ರಕ್ಷಣೆಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತಂದರೂ ವರ್ಷಗಳುರುಳಿದಂತೆ ಹೊಸ ಹೊಸ ಸಂಕಷ್ಟಗಳು ಎದುರಾಗಿ ರೈತರ ಸಂಕಷ್ಟವನ್ನು ಹೆಚ್ಚಿಸುತ್ತಲೇ ಬಂದಿವೆ. ಈ ಹಿನ್ನೆಲೆಯಲ್ಲಿ ರೈತರಿಗೆ ಆರ್ಥಿಕವಾಗಿ ನೆರವು ನೀಡುವ ಉದ್ದೇಶ ದಿಂದ ಸರಕಾರ ಸಾಲ ನೀಡುವ ಉಪಕ್ರಮವನ್ನು ಆರಂಭಿಸಿತು. ಸರ ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಜತೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳು, ಲೇವಾದೇವಿದಾರರು ರೈತರಿಗೆ ಸಾಲವನ್ನು ನೀಡಲಾರಂಭಿಸಿದರು. ಈ ಆರ್ಥಿಕ ನೆರವು ರೈತರಿಗೆ ಆರಂಭದಲ್ಲಿ ಸಾಕಷ್ಟು ಪ್ರಯೋಜನವನ್ನುಂಟು ಮಾಡಿ ತು. ಆದರೆ ವರ್ಷಗಳುರುಳಿದಂತೆಯೇ ಈ ಸಾಲ ನೀಡಿಕೆ, ಬಡ್ಡಿ ದರ, ಸಾಲ ವಾಸೂಲಾತಿ ಪ್ರಕ್ರಿಯೆಗಳೆಲ್ಲವೂ ರೈತರ ಪಾಲಿಗೆ ಮುಳುವಾಗಿ ಪರಿಣಮಿಸಿತು.

ಇದೀಗ ರಾಜ್ಯ ಸರಕಾರ ಸಾಲ ವಸೂಲಿ ವಿಚಾರದಲ್ಲಿ ಆಸ್ತಿ ಜಪ್ತಿಯಂಥ ಬಲವಂತದ ಕ್ರಮಕ್ಕೆ ಮುಂದಾಗದಂತೆ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶ ನೀಡಿದೆ. ಈ ಬಾರಿ ಮುಂಗಾರಿನಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಹೀಗಾಗಿ ಈ ಬಾರಿ ರೈತರು ಹೆಚ್ಚು ಸಂಕಷ್ಟಕ್ಕೊಳಗಾಗಿರುವುದನ್ನು ಮನಗಂಡಿರುವ ರಾಜ್ಯ ಸರಕಾರ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದೆ. ಸಾಲ ಕಟ್ಟದ ರೈತರ ಆಸ್ತಿಯ ಜಪ್ತಿಯನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೈತರಿಗೆ ಅಭಯ ನೀಡಿದ್ದಾರೆ.

ರಾಜ್ಯ ಸರಕಾರದ ಈ ನಿರ್ಧಾರ ಅತ್ಯಂತ ಸಕಾಲಿಕ ಮತ್ತು ನ್ಯಾಯೋಚಿತವೇ. ಆದರೆ ಈ ನಿರ್ಧಾರವನ್ನು ರೈತರ ಹೆಸರಿನಲ್ಲಿ ಬೇರೆ ಸಾಲಗಾರರು ದುರುಪಯೋಗಪಡಿಸಿಕೊಳ್ಳದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಸರಕಾರದ ಮೇಲಿದೆ. ಇತರ ಉದ್ದೇಶಗಳಿಗಾಗಿ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದವರು ರೈತರ ಹೆಸರಿನಲ್ಲಿ ಸರಕಾರದ ನಿರ್ಧಾರದ ದುರ್ಲಾಭ ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಸಂಬಂಧ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಿ ಸ್ಪಷ್ಟ ನಿರ್ದೇಶಗಳನ್ನು ನೀಡಬೇಕು. ಇಲ್ಲವಾದಲ್ಲಿ ಇದು ರಾಜ್ಯದ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಒಟ್ಟಾರೆ ವ್ಯವಹಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ಸಹಜವಾಗಿಯೇ ರಾಜ್ಯದ ಆರ್ಥಿಕತೆಗೂ ಹೊಡೆತ ಬೀಳಲಿದೆ. ಹೀಗಾಗಿ ಈ ವಿಷಯದಲ್ಲಿ ಸರಕಾರ ಮತ್ತು ಬ್ಯಾಂಕ್‌ಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ.

ಟಾಪ್ ನ್ಯೂಸ್

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.