![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 27, 2022, 3:39 PM IST
ಮಂಗಳೂರು/ಉಡುಪಿ: ನಾಡಿನಾದ್ಯಂತ ನವರಾತ್ರಿ ಸಡಗರ ಸೋಮವಾರ ಆರಂಭವಾಗಿದ್ದು, ಕರಾವಳಿಯ ವಿವಿಧ ದೇವಿ ದೇವಸ್ಥಾನಗಳಲ್ಲಿ ನವರಾತ್ರಿ ಸಂಭ್ರಮಕ್ಕೆ ಸೋಮವಾರ ಚಾಲನೆ ದೊರಕಿತು.
ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಉತ್ಸವ ಆರಂಭವಾಗಿದೆ.
“ಮಂಗಳೂರು ದಸರಾ’ ಎಂಬ ಜನಪ್ರೀತಿ ಗಳಿಸಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ರಥಬೀದಿಯ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100ನೇ ವರ್ಷದ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.
ಉಡುಪಿ ಶ್ರೀಕೃಷ್ಣ ಮಠ, ಕೊಲ್ಲೂರು, ಮಂದಾರ್ತಿ, ನೀಲಾವರ, ಉಚ್ಚಿಲ ಮೊದಲಾದ ದೇವಸ್ಥಾನಗಳಲ್ಲಿ ನವರಾತ್ರಿ ವಿಶೇಷ ಪೂಜೆಗಳು ಆರಂಭಗೊಂಡವು.
ಕಾಸರಗೋಡು ಜಿಲ್ಲೆಯ ಮಲ್ಲ, ಪಾಂಗೋಡು, ಕೊರಕೋಡು, ಮೀಪುಗುರಿ ಬಂದಡ್ಕ, ಬೇಕಲ ದೇವಸ್ಥಾನ ಸೇರಿದಂತೆ ವಿವಿಧ ದೇವೀ ದೇಗುಲಗಳಲ್ಲಿ ಉತ್ಸವ ಆರಂಭಗೊಂಡಿತು. ದೇವಸ್ಥಾನ, ಮನೆಗಳಲ್ಲಿ ದೀಪ ನಮಸ್ಕಾರ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು.
ಮಂಗಳೂರು : ನಗರದ ರಥಬೀದಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಶತಮಾನೋತ್ಸವದ ಪರ್ವ ಕಾಲದಲ್ಲಿ ಸೋಮವಾರ ಶ್ರೀ ಕಾಶೀ ಮಠಾಧಿಪತಿ ಶ್ರೀಮತ್ ಸಂಯಮೀಂದ್ರತೀರ್ಥ ಶ್ರೀಪಾದರು ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಿಸಿದರು. ಸ್ವರ್ಣ ನವಿಲು, ಸ್ವರ್ಣ ವೀಣೆ, ಸ್ವರ್ಣ ಕೈಬಳೆ ಅಲ್ಲದೆ ಇತರ ಸ್ವರ್ಣಾಭರಣಗಳೊಂದಿಗೆ ಸರ್ವಾಲಂಕಾರ ಭೂಷಿತಳಾದ ಶ್ರೀ ಶಾರದಾ ಮಾತೆಗೆ ಆರತಿ ಬೆಳಗಲಾಯಿತು.
ಪ್ರಧಾನ ಅರ್ಚಕ ಜೆ. ಭಾಸ್ಕರ ಭಟ್, ವೈದಿಕರಾದ ಪಂಡಿತ ಎಂ. ನರಸಿಂಹ ಆಚಾರ್ಯ, ಪಂಡಿತ ಕಾಶೀನಾಥ ಆಚಾರ್ಯ, ವೇ|ಮೂ| ವೈಕುಂಠ ಭಟ್, ಸಮಿತಿಯ ಅಧ್ಯಕ್ಷ ಡಾ| ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಕೋಶಾಧಿಕಾರಿ ವಿಠಲ ಆಚಾರ್ಯ, ಅಲಂಕಾರ ತಂಡದ ರಘುರಾಮ ಕಾಮತ್ ಮೊದಲ ಉಪಸ್ಥಿತರಿದ್ದರು. ಪ್ರತೀ ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ಸೆ. 27ರಂದು ಸಹಸ್ರ ಚಂಡಿಕಾ ಯಾಗ ಆರಂಭಗೊಳ್ಳಲಿದ್ದು, ಅ. 2ರಂದು ಬೆಳಗ್ಗೆ ಶ್ರೀ ಸಂಯಮೀಂದ್ರತೀರ್ಥ ಸ್ವಾಮೀಜಿ ಮಹಾ ಪೂರ್ಣಾ ಹುತಿ ನೆರವೇರಿಸುವರು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.