ಪ್ರವೀಣ್‌ ನೆಟ್ಟಾರು ಹತ್ಯೆಯೇ ಪಿಎಫ್ಐ ಸಂಘಟನೆ ನಿಷೇಧಕ್ಕೆ ಹೇತುವಾಯಿತೇ?


Team Udayavani, Sep 29, 2022, 9:13 AM IST

ಪ್ರವೀಣ್‌ ನೆಟ್ಟಾರು ಹತ್ಯೆಯೇ ಪಿಎಫ್ಐ ಸಂಘಟನೆ ನಿಷೇಧಕ್ಕೆ ಹೇತುವಾಯಿತೇ?

ಪುತ್ತೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಎಲ್ಲ ಆರೋಪಿಗಳಿಗೆ ಪಿಎಫ್ಐ ನಂಟು ಇತ್ತು ಎನ್ನುವ ಅಂಶ ತನಿಖೆಯಿಂದ ದೃಢಪಟ್ಟಿರುವುದೂ ಅದರ ನಿಷೇಧಕ್ಕೆ ಕೊನೆಯ ಮೊಳೆ ಹೊಡೆಯಿತು.

ಪ್ರವೀಣ್‌ ಹತ್ಯೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಉನ್ನತ ಮಟ್ಟದ ತನಿಖೆಗೆ ಪ್ರಕರಣವನ್ನು ಹಸ್ತಾಂತರಿಸಿದ ಪರಿಣಾಮ ಪಿಎಫ್ಐ ಒಳ ಸಂಚಿನ ಇಂಚಿಂಚೂ ಮಾಹಿತಿ ಹೊರಬಿದ್ದಿತ್ತು.

ಪ್ರವೀಣ್‌ ಹತ್ಯೆ ಪ್ರಕರಣ
ಜು. 26ರಂದು ರಾತ್ರಿ ಬೆಳ್ಳಾರೆಯ ಮಾಸ್ತಿಕಟ್ಟೆಯ ಚಿಕನ್‌ ಸೆಂಟರ್‌ ಅಂಗಡಿಯಲ್ಲಿ ಕೆಲಸ ಮುಗಿಸಿ ಮನೆಗೆ ಹೊರಡಲು ಅಣಿಯಾಗಿದ್ದ ಪ್ರವೀಣ್‌ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆಗೆ ಸಹಕಾರ ನೀಡಿದ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈ ಪ್ರಕರಣದ ಹಿಂದೆ ಎಂಟಕ್ಕೂ ಅಧಿಕ ಮಂದಿಗೆ ಆರೋಪಿಗಳ ನಂಟಿರುವ ಬಗೆಗಿನ ಮಾಹಿತಿ ಗೊತ್ತಾಗಿತ್ತು. ಪ್ರಮುಖ ಮೂವರು ಹಂತಕರು ಪದೇ ಪದೇ ವಾಸಸ್ಥಳ ಬದಲಾಯಿಸುತ್ತಿದ್ದ ಕಾರಣ ಅವರ ಪತ್ತೆ ಕಾರ್ಯಕ್ಕೆ ಹದಿನೈದು ದಿನ ತಗಲಿತ್ತು. ಈ ಆರೋಪಿಗಳ ರಕ್ಷಣೆಯ ಹಿಂದೆ ಪಿಎಫ್ಐ ಸಂಘಟನೆ ಕೈ ಜೋಡಿಸಿದ್ದು, ತನಿಖೆಯ ವೇಳೆ ಬಹಿರಂಗಗೊಂಡಿದ್ದರೂ, ಅದಕ್ಕೆ ಪೂರಕ ಸಾಕ್ಷಿಗಾಗಿ ತನಿಖಾ ತಂಡ ಕಾರ್ಯಾಚರಣೆ ತೀವ್ರಗೊಳಿಸಿತ್ತು.

ಶಂಕೆಗೆ ಸಿಕ್ಕಿತ್ತು ಪ್ರಬಲ ಸಾಕ್ಷ್ಯ
ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಹತ್ತು ಆರೋಪಿಗಳಿಗೆ ಪಿಎಫ್ಐ ನಂಟು ಇರುವ ಬಗ್ಗೆ ಪೊಲೀಸ್‌ ತನಿಖೆಯ ವೇಳೆ ಬೆಳಕಿಗೆ ಬಂದಿತ್ತು. ಸಂಘಟನೆಯ ಕಚೇರಿ, ಆರೋಪಿಗಳ ಮೊಬೈಲ್‌ನಲ್ಲಿ ಅದಕ್ಕೆ ಬಲವಾದ ಸಾಕ್ಷಿ ದೊರೆತಿತ್ತು. ಪ್ರಕರಣದ ಉನ್ನತ ಮಟ್ಟದ ತನಿಖೆಯನ್ನು ಎನ್‌ಐಎ ವಹಿಸಿಕೊಂಡ ಅನಂತರ ಈ ಅಂಶ ದೃಢಪಟ್ಟಿತ್ತು. ಪ್ರವೀಣ್‌ ಹತ್ಯೆ ಮಾದರಿ
ಯಲ್ಲಿಯೇ ಈ ಹಿಂದೆ ರಾಷ್ಟ್ರದ ನಾನಾ ಭಾಗದಲ್ಲಿ ನಡೆದ ಹತ್ಯೆಯ ಹಿಂದೆಯೂ ಮತಾಂಧ ಶಕ್ತಿಯ ಶಂಕೆ ಇತ್ತಾದರೂ ದೃಢಪಟ್ಟಿರಲಿಲ್ಲ. ಆದರೆ ಪ್ರವೀಣ್‌ ಹತ್ಯೆಯ ತನಿಖೆ ಈ ಹಿಂದಿನ ಹತ್ಯೆಗಳ ಹಿಂದೆ ಮತಾಂಧ ಶಕ್ತಿಯ ಕೈವಾಡ ಇತ್ತು ಎನ್ನುವುದನ್ನು ಖಾತರಿಪಡಿಸಿತ್ತು. ಭವಿಷ್ಯದಲ್ಲಿ ಅನೇಕ ವಿಧ್ವಂಸಕ ಕೃತ್ಯ ನಡೆಸಲು ಉದ್ದೇಶಿಸಿರುವ ಸಂಚು ಕೂಡ ಬೆಳಕಿಗೆ ಬಂದಿತ್ತು.

ವಿಧ್ವಂಸಕ ಕೃತ್ಯಕ್ಕೆ ಮಂಗಳೂರು ಕೇಂದ್ರ?
ರಾಷ್ಟ್ರದ ನಾನಾ ಕಡೆಗಳಲ್ಲಿ ನಡೆಸಲು ಉದ್ದೇಶಿಸಿರುವ ಹತ್ಯೆಗೆ ಮಂಗಳೂರು ಶಕ್ತಿ ಕೇಂದ್ರ. ಇಲ್ಲಿ ಪಿಎಫ್ಐ ತನ್ನ ಜಾಲವನ್ನು ರಾಷ್ಟ್ರದೆÇÉೆಡೆ ಹರಡಿ ಯುವಕರನ್ನು ಸೇರಿಸುವ ಕೆಲಸ ಮಾಡುತ್ತಿತ್ತು. ಕೇರಳದ ಮತಾಂಧ ಶಕ್ತಿಗಳು ಇದಕ್ಕೆ ಸಹಕಾರ ನೀಡುತ್ತಿದ್ದರೆ, ವಿದೇಶಿ ಶಕ್ತಿಗಳು ಆರ್ಥಿಕ ನೆರವು ನೀಡಿ ಸಂಘಟನೆಯನ್ನು ಮತ್ತಷ್ಟು ಗಟ್ಟಿಗೊಳಿಸಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಲು ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಲಿದ್ದರು. ಹತ್ಯೆ, ಗಲಭೆಕೋರರಿಗೆ ಹಣದ ಆಮಿಷ ಒಡ್ಡಿ ದ್ವೇಷ ಭಾವನೆಗಳನ್ನು ಬಿತ್ತಲಾಗುತ್ತಿತ್ತು. ಈ ಆಮಿಷಕ್ಕೆ ಸಾವಿರಾರು ಮಂದಿ ಆಕರ್ಷಿತರಾಗಿ ವಿಧ್ವಂಸಕ ಕೃತ್ಯ ನಡೆಸಲು ಸಜ್ಜಾಗಿದ್ದರು.

ಈ ಎಲ್ಲ ಅಂಶಗಳನ್ನು ಎನ್‌ಐಎ ಗುಪ್ತವಾಗಿ ಸಂಗ್ರಹಿಸಿ ಕೇಂದ್ರ ಸರಕಾರದ ಗಮನ ಸೆಳೆದ ಕಾರಣ, ಎಲ್ಲ ದಾಖಲೆಗಳನ್ನು ಸಿದ್ಧಪಡಿಸಿಕೊಂಡೇ ಪಿಎಫ್ಐ ಮತ್ತು ಇತರ ಸಂಘಟನೆಗಳನ್ನು ಕೇಂದ್ರ ಸರಕಾರ 5 ವರ್ಷ ನಿಷೇಧ ಮಾಡಿದೆ.

ಇದನ್ನೂ ಓದಿ : ಉಡುಪಿ ಜಿಲ್ಲೆಯಲ್ಲೂ ಸುವರ್ಣ ಸಂಭ್ರಮದ ನವರಾತ್ರಿ ಗೊಂಬೆ ಆರಾಧನೆಯ ಮೆರುಗು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.