![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 29, 2022, 9:55 AM IST
ಶಿವಮೊಗ್ಗ/ಚಿಕ್ಕಮಗಳೂರು : ಕೇಂದ್ರ ಸರ್ಕಾರವು ಪಿಎಫ್ಐ ಹಾಗೂ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿದ ಬೆನ್ನೆಲ್ಲೆ ಶಿವಮೊಗ್ಗ ಪೊಲೀಸರ ತಂಡ ಮತ್ತೆ ಕಾರ್ಯಾಚರಣೆಗಿಳಿದಿದೆ. ಪಿಎಫ್ಐ ಮುಖಂಡರು, ಎಸ್ ಡಿಪಿಐ ಕಚೇರಿ ಮೇಲೆ ಶಿವಮೊಗ್ಗ ಪೊಲೀಸರ ತಂಡ ದಾಳಿ ಮಾಡಿದೆ.
ಪೊಲೀಸರು ಐದು ತಂಡ ಬುಧವಾರ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿದೆ. ಕಂದಾಯ ಮತ್ತು ಇತರ ಇಲಾಖೆಯ ಅಧಿಕಾರಿಗಳ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ್ದು, ಪಿಎಫ್ಐ ಮುಖಂಡರ ಮನೆಗಳು ಸೇರಿದಂತೆ ಎಸ್ಡಿಪಿಐ ಕಚೇರಿಯಲ್ಲಿ ಪೊಲೀಸರು ಶೋಧ ಮಾಡಿದ್ದಾರೆ.
ಮನೆಗೆ ಬೀಗ ಹಾಕಿ ಪರಾರಿಯಾಗಿರುವ ಪಿಎಫ್ಐ ಮುಖಂಡರ ಮನೆಯಲ್ಲೂ ಶೋಧ ಮಾಡಲಾಗಿದ್ದು, ಜಿಲ್ಲಾಧಿಕಾರಿ ಅನುಮತಿ ಪಡೆದು, ಮನೆ ಲಾಕ್ ಒಡೆಯಲಾಗಿದೆ. ಪಿಎಫ್ಐ ಜಿಲ್ಲಾಧ್ಯಕ್ಷ ಉಬೇದುಲ್ಲಾ ಷರೀಫ್, ಮಾಜಿ ಅಧ್ಯಕ್ಷ ರಿಜ್ವಾನ್, ಸದಸ್ಯ ಫಾರುಖ್, ಎಸ್ ಡಿಪಿಐ ಮಾಜಿ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಸಮಿತಿ ಸದಸ್ಯ ಸಲೀಂ ಖಾನ್ ಮನೆ ಮೇಲೆ ಪೊಲೀಸರ ದಾಳಿ ಮಾಡಲಾಗಿದೆ.
ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೂ ಪೊಲೀಸರು ದಾಳಿ ನಡೆಸಿ, ಕಚೇರಿಯನ್ನು ಸೀಜ್ ಮಾಡಿದ್ದಾರೆ.
ಇದನ್ನೂ ಓದಿ:ಗ್ಯಾಂಗ್ಸ್ಟಾಸ್ ಪ್ಯಾರಡೈಸ್ ಹಾಡು ಖ್ಯಾತಿಯ ಯುಎಸ್ ರಾಪರ್ ಕೂಲಿಯೊ ನಿಧನ
ದಾಳಿಯಲ್ಲಿ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್, ಸ್ಮಾರ್ಟ್ ಸಿಟಿ ಕಮಿಷನರ್ ಚಿದಾನಂದ ವಟಾರೆ, ಸಿಮ್ಸ್ ಆಡಳಿತಾಧಿಕಾರಿ ಶಿವಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಚಿಕ್ಕಮಗಳೂರಿನಲ್ಲೂ ದಾಳಿ: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ನಿಷೇಧಿತ ಪಿಎಫ್ಐ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಜಿಲ್ಲಾಧಿಕಾರಿಗಳ ಸರ್ಚ್ ವಾರೆಂಟ್ ಆದೇಶದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಆಲ್ದೂರಿನ ವಗಾರ್ ರಸ್ತೆಯಲ್ಲಿ ಆರೀಫ್ ಮನೆ, ಚಿಕ್ಕಮಗಳೂರು ವಿಜಯಪುರದಲ್ಲಿ ನಿಷೇಧಿತ ಪಿಎಫ್ ಐ ಜಿಲ್ಲಾಧ್ಯಕ್ಷ ಚಾಂದ್ ಬಾಷಾ ಮನೆ, ಎಸ್ ಡಿಪಿಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.