ಮಧ್ಯಪ್ರದೇಶ: ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಪುರಾತನ 26 ದೇವಾಲಯ, ಬೌದ್ಧ ವಿಹಾರ ಪತ್ತೆ

ಈ ಪ್ರದೇಶ ಸುಮಾರು 170 ಚದರ ಕಿಲೋ ಮೀಟರ್ ವಿಸ್ತೀರ್ಣ ಹೊಂದಿರುವುದಾಗಿ ವರದಿ ವಿವರಿಸಿದೆ.

Team Udayavani, Sep 29, 2022, 4:49 PM IST

ಮಧ್ಯಪ್ರದೇಶ: ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಪುರಾತನ 26 ದೇವಾಲಯ, ಬೌದ್ಧ ವಿಹಾರ ಪತ್ತೆ

ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮಧ್ಯಪ್ರದೇಶದ ಬಾಂಧವ್ ಗಢ್ ನಲ್ಲಿ ಉತ್ಖನನ ನಡೆಸಿದ ವೇಳೆ ಪುರಾತನ ಗುಹೆ, ದೇವಾಲಯಗಳು, ಬೌದ್ಧರ ಕಾಲದ ಅವಶೇಷಗಳು, ಮಥುರಾ, ಕೌಶಂಬಿ ನಗರಗಳ ಹೆಸರನ್ನು ಹೊಂದಿರುವ ಪುರಾತನ ಲಿಪಿಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಹಾಲಿವುಡ್ ಡೈರೆಕ್ಟರ್ ಜೊತೆ ಕಾಣಿಸಿಕೊಂಡ ಯಶ್; ಏನಿದು ಕಲಾಶ್ನಿಕೋವ್ ಗನ್ ಕಥೆ?

1938ರ ನಂತರ ಮೊದಲ ಬಾರಿಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳ ತಂಡ ಬಾಂಧವ್ ಗಢ್ ಹುಲಿ ರಕ್ಷಿತಾರಣ್ಯ ಪ್ರದೇಶದಲ್ಲಿ ಸುಮಾರು ಒಂದು ತಿಂಗಳ ಕಾಲ ಉತ್ಖನನ ನಡೆಸಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಈ ಪ್ರದೇಶ ಸುಮಾರು 170 ಚದರ ಕಿಲೋ ಮೀಟರ್ ವಿಸ್ತೀರ್ಣ ಹೊಂದಿರುವುದಾಗಿ ವರದಿ ವಿವರಿಸಿದೆ.

ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಉತ್ಖನನ ಕಾರ್ಯಾಚರಣೆಯಲ್ಲಿ 26 ದೇವಾಲಯಗಳು, 26 ಗುಹೆಗಳು, 2 ಬೌದ್ಧ ವಿಹಾರ,  2 ಸ್ತೂಪ, 24 ಶಿಲಾಶಾಸನಗಳು, 46 ಶಿಲ್ಪಗಳು ಹಾಗೂ 19 ನೀರಿನ ಮಾರ್ಗದ ರಚನೆಯನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದೆ.

ಮೇ 20ರಿಂದ ಜೂನ್ 27ರವರೆಗೆ ನಡೆಸಿದ ಉತ್ಖನನದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಜಬಲ್ಪುರ್ ವಲಯ ಕೂಡಾ ಅನೇಕ ಪ್ರಾಚೀನ ಶಿಲ್ಪಗಳು ದೊರೆತಿರುವುದಾಗಿ ವರದಿ ನೀಡಿತ್ತು. ಇದರಲ್ಲಿ ಭಗವಾನ್ ವಿಷ್ಣುವಿನ ಅವತಾರಗಳಲ್ಲಿ ಒಂದಾದ ವರಾಹ ಮತ್ತು ಮತ್ಸ್ಯ ಶಿಲ್ಪ ಮತ್ತು ನೈಸರ್ಗಿಕ ಗುಹೆಯಲ್ಲಿ ಕೊರೆದ ಬೋರ್ಡ್ ಆಟಗಳು ಸೇರಿದಂತೆ ಹಲವು ಶಿಲ್ಪಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಜಬಲ್ಪುರ್ ಸರ್ಕಲ್ ನ ಹಿರಿಯ ಪುರಾತತ್ವ ಶಾಸ್ತ್ರಜ್ಞ ಎಸ್.ಕೆ. ಬಾಜ್ ಪೈ ನೇತೃತ್ವದ ತಂಡ ಉತ್ಖನನ ಕೈಗೊಂಡಿದ್ದು, ಈ ಬಗ್ಗೆ ನವದೆಹಲಿಯ ಎಎಸ್ ಐ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ಉತ್ಖನನ ಕುರಿತ ಮಾಹಿತಿ ಮತ್ತು ಚಿತ್ರಗಳ ಕುರಿತು ವಿವರ ನೀಡಿರುವುದಾಗಿ ವರದಿ ತಿಳಿಸಿದೆ.

ನನಗೆ ಹಿಂದೂ ರಾಜವಂಶ ಆಳ್ವಿಕೆ ನಡೆಸಿದ ಪ್ರದೇಶದಲ್ಲಿ ಬೌದ್ಧರ ರಚನೆಗಳ ಅವಶೇಷ ಕಂಡು ಬಂದಿರುವುದು ಅಚ್ಚರಿ ಮೂಡಿಸಿತ್ತು. ಇದು ಧಾರ್ಮಿಕ ಸಾಮರಸ್ಯವನ್ನು ಸೂಚಿಸುತ್ತದೆ. ಆದರೆ ಬೌದ್ಧ ರಚನೆಗಳನ್ನು ಯಾರು ನಿರ್ಮಿಸಿದ್ದರು ಎಂಬ ಬಗ್ಗೆ ತಿಳಿದುಬಂದಿಲ್ಲ ಎಂದು ಬಾಜ್ ಪೈ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.