ಸ್ವಚ್ಛ ಸರ್ವೇಕ್ಷಣ್ ಅವಾರ್ಡ್ಸ್: ಸತತ ಆರನೇ ಬಾರಿಗೆ ಗೆದ್ದ ಇಂದೋರ್

ವಿಜೇತರಿಗೆ ಪ್ರಶಸ್ತಿಗಳ ವಿತರಣೆ

Team Udayavani, Oct 1, 2022, 7:44 PM IST

1-ddasdad

ನವ ದೆಹಲಿ: ಕೇಂದ್ರ ಸರಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯ ಫಲಿತಾಂಶಗಳನ್ನು ಶನಿವಾರ ಪ್ರಕಟಿಸಲಾಗಿದ್ದು, ಇಂದೋರ್ ಸತತ ಆರನೇ ಬಾರಿಗೆ ಭಾರತದ ಸ್ವಚ್ಛ ನಗರ ಎಂದು ಗುರುತಿಸಲ್ಪಟ್ಟರೆ, ಸೂರತ್ ಮತ್ತು ನವಿ ಮುಂಬಯಿ ನಂತರದ ಎರಡು ಸ್ಥಾನಗಳಲ್ಲಿವೆ.

‘ಸ್ವಚ್ಛ ಸರ್ವೇಕ್ಷಣ್ ಅವಾರ್ಡ್ಸ್ 2022’ ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ರಾಜ್ಯಗಳ ವಿಭಾಗದಲ್ಲಿ, ಮಧ್ಯಪ್ರದೇಶ ಮೊದಲ ಸ್ಥಾನವನ್ನು ಪಡೆದುಕೊಂಡಿದೆ, ನಂತರ ಛತ್ತೀಸ್ ಗಢ ಮತ್ತು ಮಹಾರಾಷ್ಟ್ರ ಪಡೆದುಕೊಂಡಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಇತರರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿದರು.

ಇದನ್ನೂ ಓದಿ: ಕೆವೈಸಿ ವಂಚನೆ : ಖ್ಯಾತ ನಟನ ಖಾತೆಯಿಂದ 4.36 ಲಕ್ಷ ರೂ. ಮಾಯ

ಇಂದೋರ್ ಮತ್ತು ಸೂರತ್ ಈ ವರ್ಷ ದೊಡ್ಡ ನಗರಗಳ ವಿಭಾಗದಲ್ಲಿ ತಮ್ಮ ಅಗ್ರ ಸ್ಥಾನಗಳನ್ನು ಉಳಿಸಿಕೊಂಡರೆ, ವಿಜಯವಾಡ ನವಿ ಮುಂಬಯಿಗೆ ಬಿಟ್ಟುಕೊಟ್ಟು ಮೂರನೇ ಸ್ಥಾನವನ್ನು ಕಳೆದುಕೊಂಡಿತು.

100ಕ್ಕಿಂತ ಕಡಿಮೆ ನಗರ ಸ್ಥಳೀಯ ಸಂಸ್ಥೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ತ್ರಿಪುರಾ ಅಗ್ರಸ್ಥಾನವನ್ನು ಪಡೆದುಕೊಂಡಿದೆ ಎಂದು ಸಮೀಕ್ಷೆಯ ಫಲಿತಾಂಶಗಳು ತಿಳಿಸಿವೆ.ಒಂದು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ನಗರಗಳ ವಿಭಾಗದಲ್ಲಿ, ಮಹಾರಾಷ್ಟ್ರದ ಪಂಚಗಣಿ ಮೊದಲ ಸ್ಥಾನದಲ್ಲಿದೆ, ಛತ್ತೀಸ್‌ಗಢದ ಪಟಾನ್ ಮತ್ತು ಮಹಾರಾಷ್ಟ್ರದ ಕರ್ಹಾದ್ ನಂತರದ ಸ್ಥಾನದಲ್ಲಿದೆ.

1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯ ವಿಭಾಗದಲ್ಲಿ ಹರಿದ್ವಾರವನ್ನು ಸ್ವಚ್ಛ ಗಂಗಾ ಪಟ್ಟಣವೆಂದು ಪರಿಗಣಿಸಲಾಗಿದೆ, ನಂತರ ವಾರಣಾಸಿ ಮತ್ತು ರಿಷಿಕೇಶ್. ಬಿಜ್ನೋರ್ ಒಂದು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಗಂಗಾ ಪಟ್ಟಣಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಅನುಕ್ರಮವಾಗಿ ಕನ್ನೌಜ್ ಮತ್ತು ಗಢಮುಖೇಶ್ವರ್ ನಂತರದ ಸ್ಥಾನಗಳಲ್ಲಿವೆ. ಸಮೀಕ್ಷೆಯಲ್ಲಿ, ಮಹಾರಾಷ್ಟ್ರದ ಡಿಯೋಲಾಲಿ ದೇಶದ ಸ್ವಚ್ಛ ಕಂಟೋನ್ಮೆಂಟ್ ಬೋರ್ಡ್ ಎಂದು ಗುರುತಿಸಲ್ಪಟ್ಟಿದೆ.

ಸ್ವಚ್ಛ ಭಾರತ್ ಮಿಷನ್ ನಗರ ದ ಪ್ರಗತಿಯನ್ನು ಅಧ್ಯಯನ ಮಾಡಲು ಮತ್ತು ವಿವಿಧ ಶುಚಿತ್ವ ಮತ್ತು ನೈರ್ಮಲ್ಯ ಮಾನದಂಡಗಳ ಆಧಾರದ ಮೇಲೆ ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್‌ಬಿ) ಶ್ರೇಯಾಂಕ ನೀಡಲು ಸ್ವಚ್ಛ ಸಮೀಕ್ಷೆಯ 7 ನೇ ಆವೃತ್ತಿಯನ್ನು ನಡೆಸಲಾಗಿದೆ. 2016 ರಲ್ಲಿ 73 ನಗರಗಳ ಮೌಲ್ಯಮಾಪನದಿಂದ ಈ ವರ್ಷ 4,354 ನಗರಗಳನ್ನು ಒಳಗೊಂಡಿರುವ ಸರ್ವೇಕ್ಷಣ್ ವಿಕಸನಗೊಂಡಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.