ಕೈಗಾರಿಕೆ ಸ್ಥಾಪನೆ ಕೈಬಿಡುವ ಪ್ರಶ್ನೆ ಸರ್ಕಾರಕ್ಕೆ ಬಿಟ್ಟಿದ್ದು: ಶಾಸಕ


Team Udayavani, Oct 2, 2022, 3:29 PM IST

ಕೈಗಾರಿಕೆ ಸ್ಥಾಪನೆ ಕೈಬಿಡುವ ಪ್ರಶ್ನೆ ಸರ್ಕಾರಕ್ಕೆ ಬಿಟ್ಟಿದ್ದು: ಶಾಸಕ

ಮಾಗಡಿ: ಕೈಗಾರಿಕೆ ಕೈಬಿಡುವ ಪ್ರಶ್ನೆ ಸರ್ಕಾರಕ್ಕೆ ಬಿಟ್ಟಿದ್ದು, ಭೂಸ್ವಾಧೀನ ವಿರೋಧಿಸುತ್ತಿದ್ದವರೇ ಈಗ ಸರಿಯಾದ ಬೆಲೆ ನಿಗದಿಪಡಿಸಲು ಸಭೆ ಕರೆದು ಚರ್ಚಿಸುವಂತೆ ನಮ್ಮ ಬಳಿ ಬಂದು ಮನವಿ ಮಾಡಿದ್ದಾರೆ ಎಂದು ಶಾಸಕ ಎ. ಮಂಜುನಾಥ್‌ ತಿಳಿಸಿದರು.

ತಾಲೂಕಿನ ಜ್ಯೋಗಿಪಾಳ್ಯದಲ್ಲಿ ಟೊಯೊಟಾ ಅಂಗ ಸಂಸ್ಥೆ ಬೊಸ್ಕೋ ಆಟೋಮ್ಯಾಟಿವ್‌ ಇಂಡಿಯಾ ಲಿ.ನಿಂದ 12 ಲಕ್ಷ ರೂ.ನಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು. ಸಭೆ ಕರೆಯುತ್ತೇನೆ, ದರ ನಿಗದಿಯಾಗುತ್ತದೆ, ನೀವು ಒಪ್ಪಿದರೆ ಕೆಐಎಡಿಬಿಗೆ ಕೊಡಬಹುದು. ಇಲ್ಲದಿದ್ದರೆ ವಜಾ ಆಗುತ್ತದೆ ಎಂದು ಹೇಳಿದ್ದೇನೆ. ಹೋರಾಟಗಾರರೇ ಸರಿಯಾದ ದರ ಕೊಟ್ಟರೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಸದನ ನಡೆಯುತ್ತಿದೆ. ಮುಗಿದ ಕೂಡಲೇ ಇನ್ನು 15 ದಿನದಲ್ಲಿ ಸಭೆ ಕರೆಯಲು ತಿಳಿಸುತ್ತೇನೆ ಎಂದು ಹೇಳಿದರು.

ಹಕ್ಕು ಪತ್ರ ವಿತರಣೆಗೆ ಕ್ರಮ: ಗೋಮಾಳದಲ್ಲಿ ಉಳಿಮೆ ಮಾಡುತ್ತಿರುವ ರೈತರು ಫಾರಂ ನಂ.53ರಲ್ಲಿ ಅರ್ಜಿ ಸಲ್ಲಿಸದವರಿಗೆ ಹಕ್ಕುಪತ್ರ ನೀಡುವುದಾಗಿ ಸರ್ಕಾರವೇ ಆದೇಶ ಮಾಡಿದೆ. ಫಾರಂ ನಂ.57ಕ್ಕೆ ಸದ್ಯಕ್ಕೆ ಅವಕಾಶವಿಲ್ಲ, ಸರ್ಕಾರ ಆದೇಶಕ್ಕಾಗಿ ಈಗಾಗಲೇ ತಯಾರಿ ಮಾಡಿಕೊಳ್ಳ ಲಾಗುತ್ತಿದೆ. ಗೋಮಾಳದಲ್ಲಿ ಮನೆ ಕಟ್ಟಿಕೊಂಡಿರು ವವರಿಗೆ 94 ಸಿ ಅಡಿ ಹಕ್ಕುಪತ್ರ ವಿತರಿಸಲು ಕ್ರಮವಹಿಸಿದ್ದೇನೆ.

ನೈಜತೆ ಪರಿಶೀಲಿಸಿ ಕ್ರಮ: ಹೊನ್ನಾಪುರದ ಬಳಿ ವಾಲ್ಮೀಕಿ ಸಮುದಾಯಕ್ಕೆ ಜಿಲ್ಲಾಧಿಕಾರಿಗಳು ನೀಡುವ ಭೂಮಿಯನ್ನು ತಹಶೀಲ್ದಾರ್‌ ಬೇರೆ ಯವರ ಹೆಸರಿಗೆ ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂಬ ದೂರು ಕೇಳಿ ಬಂದಿದೆ. ಇದರ ಬಗ್ಗೆ ನೈಜತೆ ಪರಿಶೀಲಿಸಿ ಕ್ರಮಕ್ಕೆ ಅಧಿಕಾರಿಗಳಗೆ ಸೂಚನೆ ನೀಡಿದ್ದೇನೆ.

ತಪ್ಪಿಸ್ಥರ ವಿರುದ್ಧ ಕ್ರಮ: ಮಾಗಡಿ ಪುರಸಭೆಯಲ್ಲಿ ಖಾತೆ ವಿಳಂಬ ನೀತಿಯಿದೆ ಎಂಬ ಪ್ರಶ್ನೆಗೆ ಇ- ಖಾತೆಯಲ್ಲಿ ಗೊಂದಲವಿದೆ. ಬೋಗಸ್‌ ಖಾತೆಗೆ ಅಧಿಕಾರಿಗಳ ಮೇಲೆ ಒತ್ತಡಕ್ಕೆ ಯತ್ನಿಸಿದವರ ಬಗ್ಗೆ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡ ಲಾಗಿದೆ. ಶೀಘ್ರ ತನಿಖೆ ಆಗುತ್ತದೆ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕರು ವಿವರಿಸಿದರು.

5 ಕೋಟಿ ರೂ. ಕಾಮಗಾರಿಗೆ ಚಾಲನೆ: ಮಾಗಡಿ ತಾಲೂಕಿನ ಬಾಚೇನಹಟ್ಟಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ಕೋಟಿ ರೂ.ನ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿ ಚಾಲನೆ ನೀಡಿದ್ದೇನೆ ಎಂದು ತಿಳಿಸಿದ ಶಾಸಕ ಎ.ಮಂಜುನಾಥ್‌ ಅವರು, ನಾನು ಚುನಾವಣೆ ಸ್ಪರ್ಧಿಸಿದ್ದ ವೇಳೆ ಆ ವ್ಯಾಪ್ತಿಗೆ ಮತ ಕೇಳಲು ಪ್ರಚಾರಕ್ಕೆ ಹೋಗಲೇ ಇಲ್ಲ, ನನ್ನ ಪತ್ನಿ ಲಕ್ಷ್ಮೀ ಅವರು ಮುಖಂಡರು, ಕಾರ್ಯಕರ್ತರೊಂದಿಗೆ ಪ್ರಚಾರ ಮಾಡಿದ್ದರು. ಆ ಭಾಗದ ಜನರು ನನಗೆ ಹೆಚ್ಚಿನ ಮತ ಕೊಟ್ಟು ಗೆಲ್ಲಿಸಿದ್ದಾರೆ. ಅವರ ಋಣ ನನ್ನ ಮೇಲಿದೆ. ಆ ಭಾಗದಲ್ಲಿ 5 ಕೋಟಿ ರೂ.ಗೂ ಹೆಚ್ಚು ಅನುದಾನ ತಂದು ತಗಚಕುಪ್ಪೆ, ಭೋಗನಪಾಳ್ಯ, ದೊಡ್ಡ ಮಸ್ಕಲ್‌, ಭೈರೇಗೌಡನಪಾಳ್ಯ, ರಾಮಯ್ಯಪಾಳ್ಯ, ಗುಡ್ಡಯ್ಯಪಾಳ್ಯ, ವರದೇನಹಳ್ಳಿ, ಸಿಂಗದಾಸನಹಳ್ಳಿ ಗ್ರಾಮಗಳ ಸಂಪೂರ್ಣ ಕಾಂಕ್ರೀಟ್‌ ರಸ್ತೆ, ಚರಂಡಿ, ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿ ದ್ದೇನೆ. ಎಲ್ಲರೂ ಸಹಕರಿಸುವಂತೆ ಶಾಸಕರು ಮನವಿ ಮಾಡಿದರು.

ಜೆಡಿಎಸ್‌ ಯುವ ಮುಖಂಡ ದವಳಗಿರಿ ಚಂದ್ರಣ್ಣ, ಪಂಚೆ ರಾಮಣ್ಣ, ಹನುಮಾಪುರದ ಚಿಕ್ಕಣ್ಣ, ರಂಗಸ್ವಾಮಿ, ರಂಗ ನಾಥ್‌, ವೆಂಕಟೇಶ್‌, ಬಸವರಾಜು, ಹನುಮಾ ನಾಯಕ್‌, ಕಂಬಯ್ಯ, ಮರಲಗೊಂಡಲದ ಪಾರ್ವತಮ್ಮ, ರಂಗೇಗೌಡ, ಜ್ಯೋತಿಪಾಳ್ಯದ ರಾಮಣ್ಣ, ರಾಜಣ್ಣ, ಪೋಲೋಹಳ್ಳಿ ಕೆಂಚಪ್ಪ, ಬುಡ್ಡಯ್ಯ, ಯುವಜೆಡಿಎಸ್‌ ಅಧ್ಯಕ್ಷ ವಿಜಯ ಕುಮಾರ್‌, ರಾಜು, ಶಿವಣ್ಣ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.