ಗುಜ್ಜಾಡಿ ಶಾಲೆಯಲ್ಲಿ ತರಕಾರಿ ತೋಟ: ಮಕ್ಕಳಿಗೆ ಕೃಷಿ ಪಾಠ

10 ಸೆಂಟ್ಸ್‌ ಜಾಗದಲ್ಲಿ ತರಹೇವಾರಿ ತರಕಾರಿ ಬೆಳೆ

Team Udayavani, Oct 3, 2022, 12:07 PM IST

news-1

ಗಂಗೊಳ್ಳಿ: ಬೈಂದೂರು ವಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅತೀ ಹೆಚ್ಚು ಮಕ್ಕಳ ದಾಖಲಾತಿ ಹಾಗೂ ಶೈಕ್ಷಣಿಕ ಸಾಧನೆಗಳಿಂದ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈಗ ಮಕ್ಕಳಿಗೆ ಕಲಿಕೆಯ ಜತೆಗೆ ಕೃಷಿ ಪಾಠವನ್ನು ಸ್ವತಃ ಹೇಳಿಕೊಡುವ ಮೂಲಕ ಸುದ್ದಿಯಲ್ಲಿದೆ.

ಶಾಲೆಯ ವಠಾರದಲ್ಲಿ ಸುಮಾರು 10 ಸೆಂಟ್ಸ್‌ ಜಾಗದಲ್ಲಿ ಮಾಡಿರುವ ತರಕಾರಿ ತೋಟದಲ್ಲಿ ಉತ್ತಮ ಗುಣಮಟ್ಟದ ತರಕಾರಿ ಬೆಳೆಯಲಾಗಿದ್ದು, ಶಾಲೆಯ ಮಧ್ಯಾಹ್ನದ ಬಿಸಿಯೂಟಕ್ಕೆ ಇಲ್ಲಿ ಬೆಳೆದ ತರಕಾರಿಗಳನ್ನೇ ಬಳಸಿಕೊಳ್ಳಲಾಗುತ್ತಿದೆ. ಈಗ ಒಂದು ಕ್ವಿಂಟಾಲ್‌ಗ‌ೂ ಮಿಕ್ಕಿ ತರಕಾರಿ ಬೆಳೆದಿದೆ. ಇದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಊರವರ ಪ್ರಶಂಸೆಗೆ ಪಾತ್ರವಾಗಿದೆ.

ಎಸ್‌ಡಿಎಂಸಿ, ಪೋಷಕರ ಸಹಕಾರ ಸಾವಯವ ಕೃಷಿಗೆ ಉತ್ತೇಜನ ನೀಡುವ ಹಾಗೂ ಬಿಸಿಯೂಟಕ್ಕಾಗಿ ತರಕಾರಿ ಅಗತ್ಯ ಮನಗಂಡು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಇಂದಿರಾ ಪೂಜಾರಿ, ಸದಸ್ಯೆ ಶಾಂತಾ ಹಾಗೂ ವಿದ್ಯಾರ್ಥಿ ಪೋಷಕರಾದ ಉಷಾ ಅವರು ಶಾಲಾ ವಠಾರದಲ್ಲಿ ಸುಮಾರು 10 ಸೆಂಟ್ಸ್‌ ಜಾಗದಲ್ಲಿ ತರಕಾರಿ ತೋಟ ಮಾಡಲು ಮುಂದಾದರು. ಸ್ಥಳೀಯ ಕೃಷಿಕ ಜಿ. ನರಸಿಂಹ ನಾಯಕ್‌ ಟ್ರಾಕ್ಟರ್ ಮೂಲಕ ಹದ ಮಾಡಿಕೊಟ್ಟಿದ್ದು, ಅದರಲ್ಲಿ ಸೌತೆ ಕಾಯಿ, ಹೀರೆಕಾಯಿ, ಬೆಂಡೆಕಾಯಿ, ಮುಳ್ಳುಸೌತೆ, ಬಸಳೆ ಮೊದಲಾದ ತರಕಾರಿ ಬೆಳೆಸಲಾಗಿದೆ. ಈಗ ತೋಟದಲ್ಲಿ ಉತ್ತಮ ಫಸಲು ಬಂದಿದೆ. ಇವರೊಂದಿಗೆ ಬಿ.ಕೆ. ರಮೇಶ್‌, ಮಹೇಶ ಆಚಾರಿ, ಅಮರ್‌ ಪೂಜಾರಿ ಹಾಗೂ ಸುಧಾಕರ ಪೂಜಾರಿ, ಮುಖ್ಯ ಶಿಕ್ಷಕ ಆನಂದ ಜಿ., ಶಿಕ್ಷಕ ವಿಶ್ವನಾಥ ಸಹಕರಿಸಿದ್ದಾರೆ.

ಶಾಲೆಯ ವಠಾರದಲ್ಲಿ ತರಕಾರಿ ತೋಟ ಮಾಡುವಲ್ಲಿ ವಿಶೇಷ ಶ್ರಮವಹಿಸಿದ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷೆ ಇಂದಿರಾ ಪೂಜಾರಿ, ಎಸ್‌ಡಿಎಂಸಿ ಸದಸ್ಯೆ ಶಾಂತಾ ಹಾಗೂ ವಿದ್ಯಾರ್ಥಿ ಪೋಷಕರಾದ ಉಷಾ ಹಾಗೂ ಈ ಕಾರ್ಯದಲ್ಲಿ ಕೈಜೋಡಿಸಿದ ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ಶಾಲೆಯ ಶಿಕ್ಷಕರನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಪ್ರಶಂಸಿಸಿದ್ದಾರೆ.

ಬಿಸಿಯೂಟಕ್ಕೆ ಬಳಕೆ: ಶಾಲೆಯ ವಠಾರದಲ್ಲಿ ಮಾಡಿರುವ ತರಕಾರಿ ಕೃಷಿಗೆ ಆದಷ್ಟು ಮನೆಯ ಗೊಬ್ಬರವನ್ನೇ ಬಳಸಲಾಗಿದ್ದು, ಈಗ ಶಾಲೆಯ ಮಧ್ಯಾಹ್ನದ ಬಿಸಿಯೂಟಕ್ಕೆ ಈ ತರಕಾರಿಗಳನ್ನೇ ಬಳಸಿಕೊಳ್ಳಲಾಗುತ್ತಿದೆ. ಒಂದು ಕ್ವಿಂಟಾಲ್‌ಗ‌ೂ ಮಿಕ್ಕಿ ತರಕಾರಿ ಬೆಳೆಯಲಾಗಿದೆ. ಎಸ್‌ಡಿಎಂಸಿ, ಊರವರು, ಪೋಷಕರ ಸಹಕಾರದಿಂದ ಇದು ಸಾಧ್ಯವಾಗಿದೆ. ಮಕ್ಕಳಿಗೂ ಪಾಠದೊಂದಿಗೆ ಕೃಷಿಯ ಬಗ್ಗೆಯೂ ಈ ಮೂಲಕ ತಿಳಿಸಿ ಕೊಡಲು ಇದು ನೆರವಾಗಿದೆ. – ಆನಂದ ಜಿ., ಮುಖ್ಯ ಶಿಕ್ಷಕ, ಗುಜ್ಜಾಡಿ ಸರಕಾರಿ ಹಿ.ಪ್ರಾ. ಶಾಲೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.