![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 3, 2022, 6:47 PM IST
ನವದೆಹಲಿ : ಭ್ರಷ್ಟಾಚಾರದ ಆರೋಪದ ಮೇಲೆ ಕೆಲವು ವರ್ಷಗಳ ಹಿಂದೆ ಕಡ್ಡಾಯವಾಗಿ ನಿವೃತ್ತಿ ಹೊಂದಿದ್ದ ಆದಾಯ ತೆರಿಗೆ ಇಲಾಖೆಯ ಮಾಜಿ ಅಧಿಕಾರಿಯೊಬ್ಬರ 7.33 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಪ್ತಿ ಮಾಡಲಾಗಿದೆ ಎಂದು ಇಡಿ ಸೋಮವಾರ ತಿಳಿಸಿದೆ.
ಸೆಪ್ಟೆಂಬರ್ 30 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಹೊರಡಿಸಲಾದ ಆದೇಶದಂತೆ ಅಂದಾಸು ರವೀಂದರ್ ಅವರ ಐದು ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ : ಪಿಎಫ್ಐ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು
1991 ರ ಬ್ಯಾಚ್ನ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿ ರವೀಂದರ್, ಕೊನೆಯದಾಗಿ ಚೆನ್ನೈನಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆಯ ಹೆಚ್ಚುವರಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 2011ರ ಆಗಸ್ಟ್ನಲ್ಲಿ ಅವರ ನಿವಾಸದಲ್ಲಿ 50 ಲಕ್ಷ ರೂ. ಲಂಚದ ಮೊತ್ತ ಪಡೆಯುತ್ತಿದ್ದಾಗ ಸಿಬಿಐ ಅವರನ್ನು ಬಂಧಿಸಿತ್ತು.
ಭ್ರಷ್ಟಾಚಾರದ ಆರೋಪದ ಮೇಲೆ ರವೀಂದರ್ ಅವರನ್ನು ಹಲವಾರು ಐಟಿ ಇಲಾಖೆ ಅಧಿಕಾರಿಗಳೊಂದಿಗೆ 2019 ರಲ್ಲಿ ಕೇಂದ್ರ ಹಣಕಾಸು ಸಚಿವಾಲಯ ಕಡ್ಡಾಯವಾಗಿ ಸೇವೆಯಿಂದ ನಿವೃತ್ತಿಗೊಳಿಸಲಾಗಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.