ನರಗುಂದದಲ್ಲಿ ಅಪರೂಪದ ಹಕ್ಕಿರೆಕ್ಕೆ ಚಿಟ್ಟೆ; ­ಬಹುದೂರ, ಎತ್ತರ ಹಾರುವ ಸಾಮರ್ಥ್ಯ

­ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಪತ್ತೆ; ­ಈ ಚಿಟ್ಟೆಯ ಜೀವಿತಾವಧಿ ಕೇವಲ 19 ದಿವಸ

Team Udayavani, Oct 4, 2022, 3:38 PM IST

14

ನರಗುಂದ: ಪಟ್ಟಣದ ಗುಡ್ಡದ ವಾರೆಯಲ್ಲಿರುವ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಪ್ಯಾಪಿಲಿಯೋನಿಡೇ ಕುಟುಂಬಕ್ಕೆ ಸೇರಿದ ಕಾಮನ್‌ ಬರ್ಡ್‌ವಿಂಗ್‌(ಟ್ರಾಯ್ಡ್ಸ್ ಹೆಲೆನಾ)ಅಪರೂಪದ ಚಿಟ್ಟೆ ಪತ್ತೆಯಾಗಿದೆ. ನಮ್ಮ ದೇಶದಲ್ಲಿ ಅತಿ ದೊಡ್ಡ ಚಿಟ್ಟೆಯ ಜಾತಿಯ ಚಿಟ್ಟೆಗಳಲ್ಲಿ ಇದು ಒಂದು. ಇದರ ರೆಕ್ಕೆಗಳು 140 ರಿಂದ170 ಮಿಮೀ ಅಗಲವಾಗಿರುತ್ತವೆ. ಮುಂದಿನ ರೆಕ್ಕೆಗಳು ಕಪ್ಪಾಗಿದ್ದು, ಹಿಂದಿನ ರೆಕ್ಕೆಗಳು ಹಳದಿ ಬಣ್ಣದಿಂದ ಕೂಡಿದ್ದು ಕಪ್ಪುಚುಕ್ಕೆ ಇರುತ್ತವೆ. ಕಪ್ಪು-ಹಳದಿ ವರ್ಣದಿಂದ ಕೂಡಿದ್ದರಿಂದ ಈ ಚಿಟ್ಟೆ ನೋಡಲು ಆಕರ್ಷಕವಾಗಿರುತ್ತದೆ.

ಇತರೆ ಜಾತಿಯ ಚಿಟ್ಟೆಗಳ ಹಾರಾಟ ಹೋಲಿಸಿದರೆ ಈ ಚಿಟ್ಟೆ ಬಹುದೂರ ಮತ್ತು ಬಹು ಎತ್ತರ ಹಾರುವ ಸಾಮರ್ಥಯ ಹೊಂದಿದೆ. ಈ ಚಿಟ್ಟೆಗೆ ಬರ್ಡ್‌ವಿಂಗ್‌ ಚಿಟ್ಟೆ(ಹಕ್ಕಿರೆಕ್ಕೆ ಚಿಟ್ಟೆ)ಎಂದೇ ಕರೆಯುತ್ತಾರೆ. ಇದರ ಜೀವಿತಾವಧಿ 19 ದಿವಸವಾಗಿರುತ್ತದೆ. ಈ ಚಿಟ್ಟೆ ಸಾಮಾನ್ಯವಾಗಿ ಭಾರತದ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಕಂಡು ಬರುತ್ತದೆ. ಅರಿಸ್ಟ್ಲೋಕಿಯಾ ಜಾತಿಯ ಸಸ್ಯಗಳು ಈ ಚಿಟ್ಟೆಯ ಲಾರ್ವಾಗಳಿಗೆ ಆತಿಥ್ಯ ಸಸ್ಯವಾಗಿದ್ದು, ಪ್ರಬುದ್ಧ ಚಿಟ್ಟೆಗಳು ಕ್ಲಿರೆಡೆಂಡ್ರಾನ್‌, ಅಕೇಶಿಯಾ ಮತ್ತು ರಥಪುಷ್ಪ ಜಾತಿ ಸಸ್ಯಗಳ ಹೂವಿನ ಮಕರಂದ ಸೇವಿಸುತ್ತವೆ. ಚಿಟ್ಟೆಗಳು ಪರಾಗಸ್ಪರ್ಶ ಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಿ ಸಸ್ಯಗಳ ಸಂತತಿ ವೃದ್ಧಿಸುತ್ತವೆ. ಪಶ್ಚಿಮಘಟ್ಟದ ಸದರ್ನ್ ಬರ್ಡ್‌ವಿಂಗ್‌ ಚಿಟ್ಟೆಯನ್ನು 2019ರಲ್ಲಿ ಕರ್ನಾಟಕದ ರಾಜ್ಯ ಚಿಟ್ಟೆಯೆಂದು ಅಧಿಕೃತವಾಗಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಬರ್ಡ್‌ವಿಂಗ್‌ ಪ್ರಭೇದದ ಚಿಟ್ಟೆಗಳು ಸಹಾ ಐಯುಸಿಎನ್‌ ಪ್ರಕಾರ ಸಂರಕ್ಷಣೆ ಪಡೆದಿರುತ್ತವೆ.

ಜೀವವೈವಿಧ್ಯತೆ ಸೌಂದರ್ಯ ಹೆಚ್ಚಿಸುವುದಲ್ಲದೆ ಚಿಟ್ಟೆಗಳು ಸಹ ಆರೋಗ್ಯ ಪರಿಸರದ ಸೂಚಕಗಳಾಗಿವೆ. ಚಿಟ್ಟೆಗಳ ಸಂರಕ್ಷಣೆಗೆಂದೇ ಕರ್ನಾಟಕ ಅರಣ್ಯ ಇಲಾಖೆ ರಾಜ್ಯದ ಹಲವೆಡೆ ಚಿಟ್ಟೆ ಪಾರ್ಕ್‌ ನಿರ್ಮಿಸಿದೆ.

ಪಕ್ಷಿ, ಹಲ್ಲಿ ಇನ್ನಿತರೆ ಕೀಟಗಳಿಗೆ ಚಿಟ್ಟೆ ಮತ್ತು ಚಿಟ್ಟೆ ಲಾರ್ವಾ ಆಹಾರ ಪೂರೈಸುವ ಮೂಲಕ ಆಹಾರ ಸರಪಳಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅರಣ್ಯನಾಶ, ನಗರೀಕರಣ, ಮಿತಿಮೀರಿದ ಕೀಟನಾಶಕ ಬಳಕೆ ಮತ್ತು ಪರಿಸರ ಮಾಲಿನ್ಯದಿಂದ ಅದೆಷ್ಟೋ ಚಿಟ್ಟೆಗಳು ಅಳಿವಿನಂಚಿಗೆ ತಲುಪಿವೆ.  –ಮಂಜುನಾಥ ಎಸ್‌. ನಾಯಕ್‌, ಜೈವಿಕ ವೈವಿಧ್ಯ ಸಂಶೋಧಕರು, ನರಗುಂದ

„ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.