ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ


Team Udayavani, Oct 6, 2022, 6:35 AM IST

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ಎರಡು ವರ್ಷಗಳ ಕಾಲ “ಸರಳ ದಸರೆ’ಯ ಬಳಿಕ ಸಾಂಸ್ಕೃತಿಕ ನಗರಿಯು ಈ ಬಾರಿ ಅದ್ದೂರಿ ದಸರಾಕ್ಕೆ ಸಾಕ್ಷಿಯಾಯಿತು. 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗಿತು. ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿ ದೇವಿಯನ್ನು ಕಂಡು ಭಕ್ತರು ಪುನೀತರಾದರು. ಜಂಬೂ ಸವಾರಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ನೆರೆದಿದ್ದರು.

ಮೈಸೂರು: ವಿಜಯದಶಮಿಯ ದಿನವಾದ ಬುಧವಾರ ವೈಭವಯುತ ಜಂಬೂ ಸವಾರಿಯ ಮೆರವಣಿಗೆಯೊಂದಿಗೆ ವಿಶ್ವ ವಿಖ್ಯಾತ ಮೈಸೂರು ದಸರಾ ಬುಧವಾರ ಸಂಪನ್ನಗೊಂಡಿತು. ವಿದ್ಯುತ್‌ ದೀಪಾಲಂಕಾರದ ಹೊನ್ನ ಬೆಳಕಿನಲ್ಲಿ ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಅಭಿಮನ್ಯು ಬಲರಾಮ ದ್ವಾರದ ಮೂಲಕ ಅರಮನೆಯಿಂದೀಚೆಗೆ ಮುಂದಡಿಯಿಡುತ್ತಿದ್ದಂತೆಯೇ ಅಂಬಾರಿಯಲ್ಲಿದ್ದ ದೇವಿ ಚಾಮುಂಡೇಶ್ವರಿ ಕಂಡ ಜನಸ್ತೋಮ ಜೈಕಾರ ಕೂಗಿ, ಶಿಳ್ಳೆ ಚಪ್ಪಾಳೆ ತಟ್ಟಿ, ಕೈಮುಗಿದು ನಮಿಸುತ್ತಾ ಭಾವ ಪರವಶರಾದರು.

ನಗರದ ಅರಮನೆ ಆವರಣದಿಂದ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇ ಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಹೊತ್ತು ತನ್ನ ಗಜ ಗಾಂಭೀರ್ಯದಿಂದ ಕುಮ್ಕಿ ಆನೆಗಳಾದ ಚೈತ್ರಾ ಮತ್ತು ಕಾವೇರಿಯೊಂದಿಗೆ ಕ್ಯಾಪ್ಟನ್‌ ಅಭಿಮನ್ಯು ಹೆಜ್ಜೆ ಹಾಕಿತು. ಅರ ಮನೆ ಆವರಣದಲ್ಲಿ ಚಿನ್ನದ ಅಂಬಾರಿಯಲ್ಲಿದ್ದ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ 5.37 ಗಂಟೆಗೆ ಪುಷ್ಪಾರ್ಚನೆ ಸಲ್ಲಿಸಿದರು.

ಎರಡು ವರ್ಷಗಳ ಕಾಲ ಕೋವಿಡ್‌ ಕಾರಣದಿಂದ ಜಂಬೂ ಸವಾರಿ ಅರ ಮನೆ ಆವರಣಕ್ಕೆ ಸೀಮಿತವಾಗಿತ್ತು. ಈ ಬಾರಿ ಎಂದಿನಂತೆ ಅರಮನೆ ಆವರಣದಿಂದ ಬನ್ನಿಮಂಟಪಕ್ಕೆ ಸಾಗಿತು.

ಮುಂಜಾನೆ 6ರಿಂದಲೇ ಪೂಜೆ
ವಿಜಯದಶಮಿ ಅಂಗವಾಗಿ ಅರಮನೆಯೊಳಗೆ ಮುಂಜಾನೆ 6ರಿಂದ 11ರ ವರೆಗೆ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿದವು. ಬುಧವಾರ ಮುಂಜಾನೆ ನಡೆದ ಹೋಮಕ್ಕೆ ಪೂರ್ಣಾಹುತಿ ಸಲ್ಲಿಸಿದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಪಟ್ಟದ ಆನೆ, ಕುದುರೆ, ಒಂಟೆ, ಹಸುಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ವಿವಿಧ ಪೂಜಾ ಕೈಂಕರ್ಯದಲ್ಲಿ ತೊಡಗಿದರು. ಬೆಳ್ಳಿ ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿ, ಕಾರಿನಲ್ಲಿ ಯದುವೀರ್‌ ಕುಳಿತು ವಿಜಯಯಾತ್ರೆ ಕೈಗೊಂಡು ಅರಮನೆ ಮುಖ್ಯದ್ವಾರದಿಂದಅರಮನೆ ಆವರಣ ಭುವನೇಶ್ವರಿ ದೇಗುಲದ ವರೆಗೂ ಮೆರವಣಿಗೆ ನೆರವೇರಿಸಿದರು ಹಾಗೂ ಭುವನೇಶ್ವರಿ ಮಂಟಪದಲ್ಲಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆ ಮೂಲಕ ಅರಮನೆಗೆ ಮರಳಿ ಕಂಕಣ ವಿಸರ್ಜನೆ ಮೂಲಕ ಜಂಬೂ ಸವಾರಿಯ ಧಾರ್ಮಿಕ ಕಾರ್ಯ ಸಂಪನ್ನಗೊಂಡವು.

ಪುಷ್ಪಾರ್ಚನೆ ವಿಳಂಬ
ಚಿನ್ನದ ಅಂಬಾರಿಯಲ್ಲಿದ್ದ ತಾಯಿ ಚಾಮುಂಡೇಶ್ವರಿ ದೇವಿಗೆ ಸಂಜೆ 5.07ರಿಂದ 5.18ರ ವ ರೆಗೆ ಸಲ್ಲುವ ಶುಭ ಲಗ್ನ ದಲ್ಲಿ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಬೇಕಿತ್ತು. ಆದರೆ ಪುಷ್ಪಾರ್ಚನೆ ಸಲ್ಲಿಸಿದಾಗ ಸಂಜೆ 5.37 ಗಂಟೆ ಆಗಿತ್ತು. ಅರಮನೆ ಬಲರಾಮ ದ್ವಾರದಲ್ಲಿ ಬೊಮ್ಮಾಯಿ ಅವರು ಪತ್ನಿಯೊಂದಿಗೆ ನಂದಿ ಧ್ವಜಕ್ಕೆ ಮಧ್ಯಾಹ್ನ 2.29ಕ್ಕೆ ಪೂಜೆ ಸಲ್ಲಿಸಿದರು. ಮುಹೂರ್ತಕ್ಕಿಂತ ಏಳು ನಿಮಿಷಗಳ ಮುನ್ನವೇ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಯಿತು.

ಪ್ರಮುಖ ಆಕರ್ಷಣೆಗಳು
ಮೈಸೂರು ಜಿಲ್ಲೆ ವತಿಯಿಂದ ಸಿದ್ಧಪಡಿಸಲಾಗಿದ್ದ ಸ್ತಬ್ಧಚಿತ್ರದಲ್ಲಿ ಮೈಸೂರು ವೀಳ್ಯದೆಲೆ, ನಂಜನಗೂಡು ರಸಬಾಳೆ, ಮೈಸೂರು ಮಲ್ಲಿಗೆಯನ್ನು ರಚಿಸಲಾಗಿತ್ತು. ಮೈಸೂರು ಪಾಕ್‌, ಮೈಸೂರು ಪೇಟಾ, ಮೈಸೂರು ರೇಷ್ಮೆ ಸೀರೆ, ಹಂಪಿಯ ಕಲ್ಲಿನ ರಥ, ಉಡುಪಿ ಜಿಲ್ಲೆಯ ಕೈಮಗ್ಗ ಸೀರೆ ನೇಯ್ಗೆ, ಯಕ್ಷಗಾನ ಚಿತ್ರಗಳು ಎಲ್ಲರನ್ನು ಮಂತ್ರಮುಗ್ಧಗೊಳಿಸಿದವು. ಮಂಡ್ಯ ಜಿಲ್ಲೆಯ ಭೂವರಾಹನಾಥಸ್ವಾಮಿ ವಿಗ್ರಹ ಹಾಗೂ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ಸ್ತಬ್ಧಚಿತ್ರಗಳು ಭಕ್ತಿಭಾವ ಮೂಡಿಸಿದವು. ಮುಧೋಳದ ಶ್ವಾನ, ಇಳಕಲ್‌ ಸೀರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಪಿಲೇಶ್ವರ ದೇವಸ್ಥಾನ, ಬೀದರ್‌ ಜಿಲ್ಲೆಯ ನೂತನ ಅನುಭವ ಮಂಟಪದ ಸ್ತಬ್ಧಚಿತ್ರಗಳೂ ಗಮನ ಸೆಳೆದವು.

ಜಂಬೂಸವಾರಿ ವೀಕ್ಷಿಸಿದ ಜನಸಾಗರ
ಈ ಬಾರಿ ದಸರಾ ಅದ್ದೂರಿಯಾಗಿ ನಡೆದಿದ್ದು, ರಾಜ್ಯದ ಮೂಲೆ ಮೂಲೆಗಳು, ಹೊರ ರಾಜ್ಯಗಳೂ ಸೇರಿ ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಬಂದಿದ್ದರು. ಅರಮನೆಯಿಂದ ಬನ್ನಿಮಂಟಪದವರೆಗಿನ ಮಾರ್ಗದ ಇಕ್ಕೆಲಗಳಲ್ಲಿ ನಿಂತು ಅಂಬಾರಿಯನ್ನು ಕಣ್ತುಂಬಿಕೊಂಡರು.ಕೆಲವರಂತೂ ರಸ್ತೆ ಬದಿಯ ಕಟ್ಟಡಗಳು, ಮರಗಳನ್ನು ಏರಿ ಮೆರವಣಿಗೆ ವೀಕ್ಷಿಸಿದರು.

ಸಿಂಹಾಸನ ಸಿಂಹ ವಿಸರ್ಜನೆ
ಸಂಜೆ 7ಕ್ಕೆ ಖಾಸಗಿ ದರ್ಬಾರ್‌ ನಡೆದ ಬಳಿಕ ದರ್ಬಾರ್‌ ಹಾಲ್‌ನಲ್ಲಿ ಸಿಂಹಾಸನದಿಂದ ಸಿಂಹದ ತಲೆಯನ್ನು ವಿಸರ್ಜಿಸಲಾಯಿತು. ದೇವರ ಮನೆಯಲ್ಲಿ ಯದುವೀರ್‌ ಹಾಗೂ ವಾಣಿ ವಿಲಾಸ ದೇವರ ಅರಮನೆಯಲ್ಲಿ ತ್ರಿಷಿಕಾ ಕುಮಾರಿ ಒಡೆಯರ್‌ ಕಂಕಣ ವಿಸರ್ಜಿಸಿದರು.

ಶೀಘ್ರವೇ ಮೈಸೂರು ಪ್ರವಾಸೋದ್ಯಮ ಸರ್ಕಿಟ್‌
ಸದ್ಯದಲ್ಲೇ ಮೈಸೂರು ಪ್ರವಾಸೋದ್ಯಮ ಸರ್ಕಿಟ್‌ ಕಾರ್ಯಾರಂಭವಾಗಲಿದೆ. ಈ ಟೂರಿಸಂ ಸರ್ಕಿಟ್‌ ಮೈಸೂರು, ಹಳೆಬೀಡು, ಬೇಲೂರು, ಸೋಮನಾಥಪುರ ಸಹಿತ ಹಲವು ಪ್ರಮುಖ ಸ್ಥಳಗಳನ್ನು ಒಳಗೊಂಡಿದೆ. ವೆಬ್‌ಸೈಟ್‌ನಲ್ಲಿ ಬುಕ್‌ ಮಾಡುವ ಸೌಲಭ್ಯವಿರಲಿದೆ.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಮಹೋತ್ಸವ: ಅಂತಿಮ ಹಂತದ ಫಿರಂಗಿ ತಾಲೀಮು ಯಶಸ್ವಿ

ದಸರಾ ಮಹೋತ್ಸವ: ಅಂತಿಮ ಹಂತದ ಫಿರಂಗಿ ತಾಲೀಮು ಯಶಸ್ವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.