ಹೆದ್ದಾರಿ ಕುಸಿತ ತಡೆ: ಬೇಕಿದೆ ಶಾಶ್ವತ ಪರಿಹಾರ

ಮರೋಳಿ ಕೆಂಬಾರು ಬಳಿ ರಾ.ಹೆ. ಕುಸಿತ; ಮಣು ಹಾಕಿ ತಾತ್ಕಾಲಿಕ ವ್ಯವಸ್ಥೆ

Team Udayavani, Oct 8, 2022, 12:22 PM IST

news6

ಮಹಾನಗರ: ಮರೋಳಿ ಕೆಂಬಾರು ಬಳಿ ರಾಷ್ಟ್ರೀಯ ಹೆದ್ದಾರಿ 75ರ ಒಂದು ಬದಿ ಮಳೆ ನೀರು ಹರಿದು ಕುಸಿತಗೊಂಡು ಹಲವು ತಿಂಗಳು ಕಳೆದರೂ ಇನ್ನೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಶ್ವತ ಕಾಮಗಾರಿಗೆ ಮುಂದಾಗಿಲ್ಲ.

ಪಡೀಲ್‌ ಜಂಕ್ಷನ್‌ನಿಂದ ಬಿಕರ್ನಕಟ್ಟೆ, ನಂತೂರು ಕಡೆಗೆ ಸಾಗುವ ಹೆದ್ದಾರಿಯ ಕೆಂಬಾರಿನಲ್ಲಿ ಎಡಭಾಗದ ರಸ್ತೆಯ ಬದಿ ಈ ಬಾರಿ ಸುರಿದ ಮಳೆಗೆ ಕುಸಿದಿತ್ತು. ಇದು ಏರು ರಸ್ತೆಯಾಗಿರುವುದರಿಂದ ಮೇಲ್ಭಾಗದಲ್ಲಿರುವ ಮರೋಳಿ ಕಡೆಯಿಂದ ಹರಿದು ಬರುವ ನೀರು ಕುಸಿತಗೊಂಡಲ್ಲಿ ರಸ್ತೆಯಿಂದ ಕೆಳಕ್ಕೆ ಹರಿಯುತ್ತದೆ. ಹಲವು ವರ್ಷಗಳಿಂದ ಇದೇ ರೀತಿ ನೀರು ಹರಿದು, ಮಣ್ಣು ಸವೆದು ಈ ಬಾರಿ ಆಗಸ್ಟ್‌ ತಿಂಗಳಲ್ಲಿ ಕುಸಿತಗೊಂಡಿದೆ. ಸದ್ಯ ತಾತ್ಕಾಲಿಕವಾಗಿ ಮಣ್ಣು ಹಾಕಿ ನೀರು ಕೆಳಗೆ ಹರಿದು ಹೋಗದಂತೆ ತಡೆಯಲಾಗಿದ್ದು, ಸ್ಥಳದಲ್ಲಿ ಒಂದು ಬ್ಯಾರಿಕೇಡ್‌ ಇಡಲಾಗಿದೆ.

ಸದ್ಯ ಮಣ್ಣು ಹಾಕಿರುವುದರಿಂದ ಮೊದಲೇ ಫುಟ್‌ಪಾತ್‌ ಇಲ್ಲದ ರಸ್ತೆಯಲ್ಲಿ ಪಾದಚಾರಿಗಳು ಮಧ್ಯ ದಲ್ಲೇ ಸಂಚರಿಸಬೇಕಾದ ಅನಿವಾರ್ಯವಿದೆ. ಹೆದ್ದಾರಿಯಲ್ಲಿ ಘನವಾಹನಗಳು ಸಂಚರಿಸುತ್ತಿರುವುದರಿಂದ ಸ್ಥಳ ಅಪಾಯಕಾರಿಯಾಗಿದೆ. ಇನ್ನೊಂದೆಡೆ ನೀರು ಹರಿದು ಕೆಳಗೆ ಬೀಳುವ ಸ್ಥಳ ಪ್ರಪಾತವಾಗಿದ್ದು, ರಸ್ತೆ ಮಟ್ಟದಿಂದ ಸುಮಾರು 50 ಅಡಿಗಳಷ್ಟು ಆಳದಲ್ಲಿದೆ. ಕೆಳಗೆ ಕೆಲವು ಮನೆಗಳೂ ಇವೆ. ತಡೆಗೋಡೆ ನಿರ್ಮಾಣವಾದರೆ ಮಾತ್ರ ಮುಂದಿನ ದಿನಗಳಲ್ಲಿ ರಸ್ತೆ ಮತ್ತಷ್ಟು ಕುಸಿಯುವುದನ್ನು ತಡೆಯಬಹುದಾಗಿದೆ.

ಹೆದ್ದಾರಿ ಅವೈಜ್ಞಾನಿಕ ಹೆದ್ದಾರಿಯೂ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಅನೇಕ ತಿರುವುಗಳಿಂದ ಕೂಡಿದೆ. ಇದರಿಂದ ಘನವಾಹನಗಳ ಸಂಚಾರಕ್ಕೂ ತೊಡಕಾಗುತ್ತಿದ್ದು, ಸಾಕಷ್ಟು ಟ್ಯಾಂಕರ್‌, ಲಾರಿಗಳು ಇಲ್ಲಿ ಮಗುಚಿ ಬಿದ್ದ ಉದಾಹರಣೆಗಳೂ ಇವೆ. ಹೆದ್ದಾರಿ ನಿರ್ಮಾಣದ ವೇಳೆ ಈ ಕುರಿತು ಗಮನ ಹರಿಸದ ಹಿನ್ನೆಲೆಯಲ್ಲಿ ಸದ್ಯ ಅಪಾಯಕಾರಿಯಾಗಿ ಪರಿಣಮಿಸಿದೆ.

ಇನ್ನೊಂದು ಕಡೆ ಬಿರುಕು ಮಣ್ಣು ಹಾಕಿ ಹೆದ್ದಾರಿಯಲ್ಲಿ ನೀರಿನ ಪಥಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಇನ್ನೊಂದು ಕಡೆಯಲ್ಲಿ ನೀರು ಪ್ರಪಾತಕ್ಕೆ ಹರಿಯಲು ದಾರಿ ಕಂಡು ಕೊಂಡಿದೆ. ಮುಂದಿನ ಒಂದೆರಡು ಮಳೆಗಾಲದಲ್ಲಿ ಇಲ್ಲಿಯೂ ನೀರು ಹರಿಯುತ್ತಿದ್ದರೆ, ಹೆದ್ದಾರಿಯಲ್ಲಿ ಇನ್ನೊಂದು ಕಡೆ ಬಿರುಕು ಉಂಟಾಗುವುದು ಖಚಿತ. ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ, ನೀರು ಹರಿದು ಹೋಗಲು ಅವಕಾಶ ಇರುವೆಡೆಯೆಲ್ಲ ಹರಿದು, ಈ ರೀತಿಯ ಸಮಸ್ಯೆಗೆ ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು.

ಅಧಿಕಾರಿಗಳ ಸಭೆಯಲಿ ಚರ್ಚಿಸಿ ತೀರ್ಮಾನ: ಸಮಸ್ಯೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಾರಿ ನಿರಂತರ ಮಳೆಯಾಗುತ್ತಿದ್ದು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಲ್ಲಿ ಅಡ್ಡಿಯಾಗಿದೆ. ಕೆಂಬಾರು ಬಳಿ ರಾಷ್ಟ್ರೀಯ ಹೆದ್ದಾರಿ ಕುಸಿತ ಕುರಿತು ಹೆದ್ದಾರಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಪ್ರಶ್ನಿಸಿ, ಯಾವ ರೀತಿ ಪರಿಹಾರ ಕೈಗೊಳ್ಳಬಹುದು ಎಂದು ತೀರ್ಮಾನಿಸಲಾಗುವುದು. -ವೇದವ್ಯಾಸ ಕಾಮತ್‌, ಶಾಸಕರು ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.