ಭಾರತ ಜೋಡೋ ಯಾತ್ರೆಯ ಮುಖ್ಯ ಉದ್ದೇಶ 2024ರ ಚುನಾವಣೆಯಲ್ಲ: ರಾಹುಲ್ ಗಾಂಧಿ
Team Udayavani, Oct 8, 2022, 5:18 PM IST
ತುರುವೇಕೆರೆ: ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯು ಇಂದು ತುಮಕೂರು ಜಿಲ್ಲೆಯಲ್ಲಿ ಸಾಗಿತು. ಭಾರತ ಜೋಡೋ ಯಾತ್ರೆಯ ಪ್ರಮುಖ ಉದ್ದೇಶ ಭಾರತವನ್ನು ಒಂದುಗೂಡಿಸುವುದೇ ಹೊರತು, 2024ರ ಚುನಾವಣೆ ನಮ್ಮ ಗುರಿಯಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್, ಹಿಂಸಾಚಾರ, ದ್ವೇಷದಿಂದ ಮಾನಸಿಕವಾಗಿ ವಿಭಜನೆಯಾಗುತ್ತಿರುವ ಭಾರತವನ್ನು ಒಗ್ಗೂಡಿಸುವುದು ನಮ್ಮ ಉದ್ದೇಶ. ಆರ್ಥಿಕ ಅಸಮಾನತೆ ಮೂಲಕ ಕೆಲವರು ದೇಶದ ಶ್ರೀಮಂತರಾದರೆ, ಬಹುತೇಕರು ಬಡವರಾಗುತ್ತಿರುವುದರ ವಿರುದ್ಧ ನಮ್ಮ ಯಾತ್ರೆ. ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಕುಸಿಯುತ್ತಿದ್ದು, ಕೆಲ ಉದ್ಯಮಿಗಳ ಬಳಿ ದೇಶದ ಸಂಪತ್ತು ಸೇರುತ್ತಿದೆ. ಆರ್ಥಿಕ ಕುಸಿತ ಹಾಗೂ ನಿರುದ್ಯೋಗ ಹೆಚ್ಚಾಗುತ್ತಿದೆ. ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಜನಸಾಮಾನ್ಯರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಈ ಯಾತ್ರೆಯ ಪ್ರಮುಖ ಉದ್ದೇಶ ಎಂದರು.
ಇದನ್ನೂ ಓದಿ:ವಿಮರ್ಶೆಗಳಷ್ಟೇ ಚಿತ್ರ ಚೆನ್ನಾಗಿರಲೆಂದು ನೋಡಲು ಕುಳಿತೆ,ಆದರೆ :ಕಾಂತಾರದ ಬಗ್ಗೆ ಕಿಚ್ಚನ ಮಾತು
ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ದಕ್ಷಿಣ ರಾಜ್ಯಗಳಿಗೆ ಗೌರವ ನೀಡದೇ ಕಡೆಗಣಿಸಲಾಗುತ್ತಿದೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾನು ಸಂಸತ್ತಿನ ಭಾಷಣದಲ್ಲಿ ಭಾರತವನ್ನು ಸಂವಿಧಾನಿಕ ರಾಜ್ಯಗಳ ಒಕ್ಕೂಟ ದೇಶ ಎಂದು ಹೇಳಿದ್ದೆ. ನಮ್ಮ ದೇಶದ ಎಲ್ಲ ಭಾಷೆ. ರಾಜ್ಯಗಳು, ಸಂಪ್ರದಾಯಗಳು ಸಮಾನ ಪ್ರಾಮುಖ್ಯತೆ ಹೊಂದಿದ್ದು, ಎಲ್ಲರಿಗೂ ಸಮಾನ ಪ್ರಾಧಾನ್ಯತೆ ಸಿಗಬೇಕು’ ಎಂದರು.
ಪಿಎಫ್ಐ ನಿಷೇಧ ಹಾಗೂ ಪಿಎಫ್ ಐಗೆ ಪ್ರೋತ್ಸಾಹ ನೀಡಿದ್ದೆ ಕಾಂಗ್ರೆಸ್ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ದೇಶದಲ್ಲಿ ಯಾರೇ ದ್ವೇಷ ಹಬ್ಬಿಸಿ ಅಶಾಂತಿ ಸೃಷ್ಟಿಸಿದರೂ ಅವರು ಯಾವುದೇ ಸಮುದಾಯದವರಾದರೂ ಅವರನ್ನು ನಾವು ವಿರೋಧಿಸುತ್ತೇವೆ ಎಂದು ರಾಹುಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.