ಬೇನಾಮಿ ಜಮೀನಿಗಾಗಿ ಗುರೂಜಿ ಹತ್ಯೆ? 840 ಪುಟಗಳ ಜಾರ್ಜ್‌ ಶೀಟ್‌ ಸಲ್ಲಿಕೆ

ಜು. 4ರಂದು ಗುರೂಜಿ ಉಳಿದುಕೊಂಡಿದ್ದ ಹೊಟೇಲ್‌ಗೆ ಹೋಗಿ ತಮ್ಮ ಕಷ್ಟಗಳನ್ನೆಲ್ಲ ಹೇಳಿಕೊಂಡಿದ್ದಾರೆ

Team Udayavani, Oct 8, 2022, 5:08 PM IST

ಬೇನಾಮಿ ಜಮೀನಿಗಾಗಿ ಗುರೂಜಿ ಹತ್ಯೆ? 840 ಪುಟಗಳ ಜಾರ್ಜ್‌ ಶೀಟ್‌ ಸಲ್ಲಿಕೆ

ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಹತ್ಯೆಗೆ ಬೇನಾಮಿ ಆಸ್ತಿ ಮಾರಾಟ, ಮೈಮನಸ್ಸು, ನಿರ್ಲಕ್ಷé ಧೋರಣೆಯೇ ಪ್ರಮುಖ ಕಾರಣ. ಅದರಲ್ಲೂ ಗುರೂಜಿ ಸಂಸ್ಥೆಯ ಹಳೆಯ ನೌಕರನ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿದ್ದರು ಎಂಬ ಮಹತ್ವದ ಅಂಶಗಳು ಪೊಲೀಸರು ಸಲ್ಲಿಸಿದ ದೋಷಾರೋಪಣ ಪಟ್ಟಿಯ ದಾಖಲೆಗಳಿಂದ ಬೆಳಕಿಗೆ ಬಂದಿವೆ.

ಇಲ್ಲಿನ ಉಣಕಲ್ಲ-ಶ್ರೀನಗರ ಕ್ರಾಸ್‌ ಬಳಿಯ ಹೊಟೇಲ್‌ವೊಂದರ ಸ್ವಾಗತಕಾರರ ಲಾಬಿಯಲ್ಲಿ ಜು. 5ರಂದು ಹಾಡಹಗಲೇ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಎಸಿಪಿ ವಿನೋದ ಮುಕ್ತೇದಾರ ನೇತೃತ್ವದ ತನಿಖಾ ತಂಡ ನಗರದ ಜೆಎಂಎಫ್‌ ನ್ಯಾಯಾಲಯಕ್ಕೆ 840 ಪುಟಗಳ ಜಾರ್ಜ್‌ ಶೀಟ್‌ ಸಲ್ಲಿಕೆ ಮಾಡಿದೆ. ಇದರಲ್ಲಿ ಗುರೂಜಿ ಅವರು ಮಹಾಂತೇಶ ಶಿರೂರ ಮತ್ತು ಆತನ ಪತ್ನಿ ಹಾಗೂ ಮಂಜುನಾಥ ಮರೇವಾಡ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿರದೆ ಸಂಸ್ಥೆಯ ಮತ್ತೂಬ್ಬ ಮಾಜಿ ನೌಕರ ಬಸವರೆಡ್ಡಿ ಚೌಡರೆಡ್ಡಿ ಎಂಬುವನ ಹೆಸರಲ್ಲಿ ಮಾಡಿದ್ದರು ಎಂಬುದು ಬಯಲಾಗಿದೆ.

ಸಂಸ್ಥೆಯಿಂದ ತೆಗೆದು ಹಾಕಿದ ಮೇಲೆ ಕಂಪನಿ ಹಾಗೂ ಗುರೂಜಿ ಮೇಲೆ ಬಹಳಷ್ಟು ಕೋಪಗೊಂಡಿದ್ದ ಮಹಾಂತೇಶ ಮತ್ತು ಮಂಜುನಾಥ ತಮಗೆ ಬರಬೇಕಾದ ಬಾಕಿ ಹಣ, ವಿವಿಧ ಸೌಲಭ್ಯಗಳ ಹಣ ಸಕಾಲಕ್ಕೆ ಬರದಿರುವುದರಿಂದ ವಿಚಲಿತರಾಗಿದ್ದರು. ಅಲ್ಲದೆ ಇವರಿಬ್ಬರು ಆರಂಭಿಸಿದ್ದ ಕಿರಾಣಿ ಅಂಗಡಿ, ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲೂ ಕೈ ಸುಟ್ಟುಕೊಂಡಿದ್ದರು. ಜೊತೆಗೆ ಗುರೂಜಿ ಪದೇ ಪದೇ ಹಣಕ್ಕಾಗಿ ನೀಡುತ್ತಿದ್ದ ಕಿರುಕುಳ, ಸಮಸ್ಯೆಯಿಂದ ಕಂಗಾಲಾಗಿದ್ದರು. ಗುರೂಜಿ ನಗರದ ಗೋಕುಲ ರಸ್ತೆಯಲ್ಲಿ ನಿರ್ಮಿಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಕಿಂಗ್‌ ಇಲ್ಲ, ಸೋಲಾರ್‌ ವ್ಯವಸ್ಥೆ ಸೇರಿದಂತೆ ಇನ್ನಿತರೆ ಮೂಲಸೌಲಭ್ಯಗಳಿಲ್ಲವೆಂದು ಗ್ರಾಹಕರ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಈ ಪ್ರಕರಣ ಹಿಂಪಡೆಯುವಂತೆ ಗುರೂಜಿ ಈ ಇಬ್ಬರಿಗೆ ಕೊಡುತ್ತಿದ್ದ ಕಿರಿಕಿರಿಯಿಂದ ಬೇಸತ್ತು ಹೋಗಿದ್ದರು.

ಹೀಗಾಗಿ ಅವರ ವಿರುದ್ಧ ದ್ವೇಷ ಸಾಧಿಸುತ್ತ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದರು. ಅಲ್ಲದೇ ತಮ್ಮ ಜೊತೆಗೆ ಸಹೋದ್ಯೋಗಿಯಾಗಿ ಕೆಲಸ ಬಿಟ್ಟಿದ್ದ ಬಸವರೆಡ್ಡಿ ಹೆಸರಿನಲ್ಲಿ ಗೋಕುಲ ರಸ್ತೆಯಲ್ಲಿ 5 ಎಕರೆ 11 ಗುಂಟೆ ಜಮೀನನ್ನು ಗುರೂಜಿ ಬೇನಾಮಿ ಆಸ್ತಿ ಹೊಂದಿದ್ದಾರೆ ಎಂಬುದನ್ನು ತಿಳಿದಿದ್ದ ಇವರು, ಬಸವರೆಡ್ಡಿ ಪುಸಲಾಯಿಸಿ ಆತನಿಂದ ತಮ್ಮ ಹೆಸರಿಗೆ ಜಮೀನನ್ನು ವರ್ಗಾಯಿಸಿಕೊಂಡು ಅದನ್ನು ಮಾರಾಟ ಮಾಡಿ, ಬಳಿಕ ಬಂದ ಹಣದಲ್ಲಿ ಮೂವರು ಸಮನಾಗಿ ಹಂಚಿಕೊಳ್ಳಲು ನಿರ್ಧರಿಸಿದ್ದರು. ಇದು ಗುರೂಜಿಗೆ ಗೊತ್ತಾಗಿ ಇದನ್ನು ಪ್ರಶ್ನಿಸಿ ಕಾನೂನು ಸಮರಕ್ಕೆ ಮುಂದಾಗಿದ್ದರು.

ಗುರೂಜಿ ಒಂದಲ್ಲ ಒಂದು ರೀತಿಯಲ್ಲಿ ಮಹಾಂತೇಶ ಮತ್ತು ಮಂಜುನಾಥನಿಗೆ ತೊಂದರೆ ನೀಡುತ್ತಿರುವುದರಿಂದ ಬಹಳಷ್ಟು ನೊಂದಿದ್ದ ಅವರು, ಗುರೂಜಿ ಕೊನೆಗಾಣಿಸಲು ಯೋಚಿಸಿದ್ದರು. ಜು. 1ರಂದು ತಮ್ಮ ಮೊಮ್ಮಗನ ಅಂತ್ಯಸಂಸ್ಕಾರಕ್ಕೆ ಹುಬ್ಬಳ್ಳಿಗೆ ಗುರೂಜಿ ಬಂದಿರುವುದನ್ನು ಅರಿತ ಅವರಿಬ್ಬರು ಭೇಟಿ ಮಾಡಿ ಮಾತನಾಡಿದ್ದಾರೆ. ಆಗ ಗುರೂಜಿ ಇದು ಸೂಕ್ತ ಸಮಯವಲ್ಲವೆಂದು ಹೇಳಿ ಕಳುಹಿಸಿದ್ದಾರೆ.

ಮಹಾಂತೇಶ ಮತ್ತು ಮಂಜುನಾಥನು ಗುರೂಜಿ ಹೇಗಾದರೂ ಮಾಡಿ ಮುಗಿಸಬೇಕೆಂದುಕೊಂಡು ನಗರದ ಹೊಸೂರ ಬಳಿಯ ಹೊಟೇಲ್‌ ನಲ್ಲಿ ಉಳಿದುಕೊಂಡು ಸ್ಕೆಚ್‌ ಹಾಕಿದ್ದರು. ಜು. 4ರಂದು ಗುರೂಜಿ ಉಳಿದುಕೊಂಡಿದ್ದ ಹೊಟೇಲ್‌ಗೆ ಹೋಗಿ ತಮ್ಮ ಕಷ್ಟಗಳನ್ನೆಲ್ಲ ಹೇಳಿಕೊಂಡಿದ್ದಾರೆ. ಅಲ್ಲದೆ ತಮಗೆ ಕಂಪನಿಯಿಂದ ಬರಬೇಕಾದ ಬಾಕಿ ಹಣ ಮತ್ತು ಅಪಾರ್ಟ್‌ಮೆಂಟ್‌ನಲ್ಲಿ ಸೌಲಭ್ಯ ಸರಿ ಮಾಡಿಸಿಕೊಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು 3-4 ತಾಸು ಚರ್ಚಿಸಿದ್ದಾರೆ. ಆದರೆ ಗುರೂಜಿ ಅವರ ಮಾತಿಗೆ ತಲೆಕೆಡಿಸಿಕೊಂಡಿರಲಿಲ್ಲ.ಇದರಿಂದಾಗಿ ಅವರಿಬ್ಬರು ತೀವ್ರ ನೊಂದಿದ್ದರು.

ಮರುದಿನ ಬೆಳಗ್ಗೆ ಗುರೂಜಿಗೆ ಕರೆ ಮಾಡಿ ದಾಖಲೆಗಳನ್ನು ತಂದು ಒಪ್ಪಿಸುತ್ತೇವೆ ಎಂದು ಭೇಟಿಗೆ ಅವಕಾಶ ಕೇಳಿದ್ದಾರೆ. ಇದಕ್ಕೆ ಗುರೂಜಿ ಸಹ ಸಮ್ಮತಿ ವ್ಯಕ್ತಪಡಿಸಿದ್ದಾರೆ. ಅದರಂತೆ ಜು. 5ರಂದು ಅವರಿಬ್ಬರು ದಾಖಲೆ ಪತ್ರಗಳೊಂದಿಗೆ ಚಾಕು ತೆಗೆದುಕೊಂಡು ಬಂದು ಗುರೂಜಿ ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಹಂತಕರು ಕೊಲೆಗೆ ಬಳಸಿದ್ದ ಚಾಕು, ಹೊಟೇಲ್‌ನಲ್ಲಿ ದೊರೆತ ಸಿಸಿಟಿವಿ ದೃಶ್ಯಾವಳಿಗಳು, ಸಾಕ್ಷಿಗಳು
ಸೇರಿದಂತೆ ಇನ್ನಿತರೆ ಮಹತ್ವದ ದಾಖಲೆಗಳನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪಣ ಪಟ್ಟಿಯಲ್ಲಿ ನಮೂದಿಸಲಾಗಿದೆ ಎಂದು ತಿಳಿದುಬಂದಿದೆ.

ಮಹಾಂತೇಶ-ವನಜಾಕ್ಷಿ ಹೆಸರಿನಲ್ಲಿ ಮಾಡಿರಲಿಲ್ಲ ಬೇನಾಮಿ ಆಸ್ತಿ
ಚಂದ್ರಶೇಖರ ಗುರೂಜಿ ಅವರು ತಮ್ಮ ಸಂಸ್ಥೆಯ ಉದ್ಯೋಗಿಗಳಾಗಿದ್ದ ಮಹಾಂತೇಶ ಶಿರೂರ ಹೆಸರಿಗಾಗಲಿ ಇಲ್ಲವೆ ಅವರ ಪತ್ನಿ ವನಜಾಕ್ಷಿ ಹೆಸರಿನಲ್ಲಿ ಯಾವುದೇ ರೀತಿ ಬೇನಾಮಿ ಆಸ್ತಿ ಮಾಡಿರಲಿಲ್ಲ ಎಂಬ ಅಂಶವು ತನಿಖಾಧಿಕಾರಿಗಳ ವಿಚಾರಣೆ ವೇಳೆ ಬಹಿರಂಗಗೊಂಡಿದೆ ಎನ್ನಲಾಗಿದೆ. ಆಸ್ತಿ ವಿಷಯವಾಗಿ ಹಾಗೂ ಜಮೀನಿಗೆ ಸಂಬಂಧಿಸಿ ನಡೆದ ಹಣಕಾಸಿನ ವ್ಯವಹಾರ ಸೇರಿದಂತೆ ಪೆನ್ಶನ್‌ ಕೊಡುವುದು, ಮನೆ ಕಟ್ಟಿಸಿಕೊಡುವುದು, ಫಂಡ್‌ ಕೊಡುವುದು, ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ ಹಿಂಪಡೆಯುವುದು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಗುರೂಜಿ ಜೊತೆ ಮಹಾಂತೇಶ ಮತ್ತು ಮಂಜುನಾಥ ಚರ್ಚಿಸಿದ್ದರು. ಇದಕ್ಕೆ ಗುರೂಜಿ ಒಪ್ಪಿಕೊಳ್ಳದಿದ್ದಾಗ ಅವರಿಬ್ಬರು ಗುರೂಜಿ ವಿರುದ್ಧ ಸಿಟ್ಟಾಗಿದ್ದರು ಎಂದು ದೋಷಾರೋಪಣ ಪಟ್ಟಿಯಲ್ಲಿ ನಮೂದಿಸಲಾಗಿದೆ.

ಗುರೂಜಿ ಹತ್ಯೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಒಟ್ಟು 85 ಸಾಕ್ಷಿದಾರರನ್ನು ಪರಿಗಣಿಸಿದ್ದು, ಇವರಲ್ಲಿ ಪ್ರಮುಖವಾಗಿ ಗುರೂಜಿ ಅಣ್ಣನ ಮಗ ಸಂಜಯ ಅಂಗಡಿ, ಕಾಂಗ್ರೆಸ್‌ ಮುಖಂಡ ದೀಪಕ ಚಿಂಚೋರೆ ಸೇರಿದಂತೆ ಮೊದಲಾದವರಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ 712 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ ಎಂದು ಆರೋಪಿಗಳ ಪರ ವಕೀಲ ಶಿವಾನಂದ ವಡ್ಡಟ್ಟಿ “ಉದಯವಾಣಿ’ಗೆ ತಿಳಿಸಿದರು.

*ಶಿವಶಂಕರ ಕಂಠಿ

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.