6 ಮಂದಿ ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ: ಸಚಿವ ಶ್ರೀರಾಮುಲು
Team Udayavani, Oct 8, 2022, 11:10 PM IST
ಬೆಂಗಳೂರು: ವಿವಿಧ ಕ್ಷೇತ್ರಗಳ 6 ಮಂದಿ ಸಾಧಕರನ್ನು 2022ನೇ ಸಾಲಿನ “ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು, ಅ.9ರಂದು ಬೆಳಗ್ಗೆ 10.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪ್ರಶಸ್ತಿ ಪ್ರದಾನಿಸುವರು ಎಂದರು.
ಪ್ರಶಸ್ತಿ ಪುರಸ್ಕೃತರು
ಸಾಮಾಜಿಕ ಕ್ಷೇತ್ರದಲ್ಲಿ ಬೆಂಗಳೂರು ಕೇಂದ್ರ ವಿಭಾಗದಿಂದ ಎಲ್. ಮುನಿಸ್ವಾಮಿ, ಮೈಸೂರು ವಿಭಾಗದಿಂದ ಎಸ್.ಎಚ್. ಸುಭಾಷ್, ಇತರ ಕ್ಷೇತ್ರದಲ್ಲಿ ಬೆಂಗಳೂರು ವಿಭಾಗದಿಂದ ಎನ್. ನಾಗಪ್ಪ, ಬೆಳಗಾವಿ ವಿಭಾಗದಿಂದ ನಾಗಪ್ಪ ಎಚ್. ಕೋಣಿ, ಕಲಾ ಕ್ಷೇತ್ರದಲ್ಲಿ ಕಲಬುರಗಿ ವಿಭಾಗದಿಂದ ಶ್ರೀಮತಿ ಪಿ. ಪದ್ಮಾ (ಪದ್ಮಾವತಿ), ಕಲಾ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಕಲಬುರಗಿ ವಿಭಾಗದಿಂದ ಉಷಾರಾಣಿ ಅವರನ್ನು 2022ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರಿಗೆ ಪ್ರಶಸ್ತಿ ಫಲಕ, 20 ಗ್ರಾಂ ಚಿನ್ನದ ಪದಕ ಹಾಗೂ ತಲಾ 5 ಲಕ್ಷ ರೂ. ನಗದು ಮೊತ್ತ ನೀಡಿ ಗೌರವಿಸಲಾಗುವುದು ಎಂದು ಸಚಿವ ಶ್ರೀರಾಮುಲು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.