ಸಾವರ್ಕರ್ ಬಗೆಗಿನ ಅಪಪ್ರಚಾರ ನಿಲ್ಲಿಸಿ, ಇಲ್ದಿದ್ರೆ ನಾವೇ ನಿಲ್ಲಿಸುತ್ತೇವೆ: ಬಿ.ಎಲ್.ಸಂತೋಷ್
Team Udayavani, Oct 9, 2022, 2:47 PM IST
ಹುಬ್ಬಳ್ಳಿ: ಭಾರತ ಆತ್ಮನಿರ್ಭರತೆಯೊಂದಿಗೆ ಮುಂದೆ ಸಾಗುತ್ತಿರುವಾಗ, ವೀರ ಸಾವರ್ಕರ್ ಅವರ ಬಗ್ಗೆ ಹಸಿ ಸುಳ್ಳುಗಳ ಅಪ್ರಪ್ರಚಾರ ನಿಲ್ಲಿಸಬೇಕು. ಇಲ್ಲವಾದರೆ ನಾವು ನಿಲ್ಲಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಎಚ್ಚರಿಕೆ ನೀಡಿದರು.
ರವಿವಾರ ಇಲ್ಲಿನ ಸವಾಯಿ ಗಂಧರ್ವ ಸಭಾಭವನದಲ್ಲಿ ಸ್ವರಾಜ್-75 ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಾವರ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಕೇವಲ ಎಡಪಂಥೀಯ ವಿಚಾರಧಾರೆ, ಮತ ತುಷ್ಠೀಕರಣಕ್ಕಾಗಿ ಹಸಿ ಸುಳ್ಳುಗಳನ್ನು ಹಬ್ಬಿಸಲು ಮುಂದಾದರೆ ಸಹಿಸಿಕೊಳ್ಳಲಾಗದು. ಇಂತಹ ಕಾರಣಗಳಿಂದ ದೇಶ ಅಪಾಯ ಸ್ಥಿತಿ ಎದುರಿಸುವಂತಾಗಿದೆ. ಭಾರತ ಮಾತಾಕಿ ಜೈ ಎಂದರೆ ಆರ್ ಎಸ್ಎಸ್ ಕಾರ್ಯಕ್ರಮ ಎಂದು, ವಂದೇಮಾತರಂ ಹಾಡಿದರೆ ಎಬಿವಿಪಿ ಕಾರ್ಯಕ್ರಮ ಎಂದು ಹೇಳಲಾಗುತ್ತಿದೆ. ಭಾರತ ಮಾತೆಗೆ ಜೈ ಎನ್ನುವುದಕ್ಕೆ ನಿಮಗೆ ಮನಸಿಲ್ಲ ಎಂದರೆ ನಾವೇನು ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ:ಮುಸ್ಲಿಮರು ಕಾಂಡೋಮ್ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ ಹೇಳಿದ್ದೇನು?
ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಕೇವಲ ಗಾಂಧೀಜಿ ಒಬ್ಬರಿಂದಲೇ ಎಂದರೆ ಉಳಿದ ಹೋರಟಗಾರಿಗೆ ಅವಮಾನ ಮಾಡಿದಂತೆ. ಗಾಂಧಿಜೀಯವರ ಬಗ್ಗೆ ಪೂರ್ಣ ಶ್ರದ್ಧೆಯಿಂದಲೇ ನಾನು ಈ ಮಾತು ಹೇಳುತ್ತೇನೆ. ಅನೇಕ ನಾಯಕರು ಅಲ್ಲದೆ ಸಾಹಿತಿಗಳು, ಕಲಾವಿದರು, ಮಹಿಳೆಯರು, ಬಾಲಕರು, ಯುವಕರು ಹೀಗೆ ಅನೇಕರು ತ್ಯಾಗ, ಬಲಿದಾನ ಇದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅಸಹಕಾರ ಚಳವಳಿ ಮಹತ್ವದ ಕೊಡುಗೆ ನೀಡಿದೆ ಎನ್ನಬಹುದು ಎಂದರು.
ನಮ್ಮ ದೇಶಕ್ಕೆ ಎಡಪಂಥೀಯ ವಿಚಾರ ಧಾರೆ ಮಾಡಿದಷ್ಟು ಅನ್ಯಾಯ ಜಗತ್ತಿನ ಬೇರಾವ ದೇಶದಲ್ಲೂ ಆಗಿಲ್ಲ. ವರ್ಷಕ್ಕೆ ಸರಾಸರಿ 32 ಲಕ್ಷ ಜನ ತಾಜ್ ಮಹಲ್ ಗೆ ಭೇಟಿ ನೋಡುತ್ತಾರೆ. ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳಕ್ಕೆ ಸೇರಿದಂತೆ ದೇಶಕ್ಕಾಗಿ ತ್ಯಾಗಮಾಡಿದ ಯೋಧರ ಸ್ಥಳಗಳಿಗೆ ಎಷ್ಟು ಜನ ಭೇಟಿ ನೀಡುತ್ತಾರೆ ಎಂಬ ಆತ್ಮಾವಲೋಕನ ಅಗತ್ಯ. ಮಕ್ಕಳಿಗೆ ಇದರ ಮನವರಿಕೆ ಆಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.