ಬಿಡುಗಡೆಯತ್ತ ಪೃಥ್ವಿ-ಮಿಲನಾ ನಟನೆಯ ‘ಫಾರ್ ರಿಜಿಸ್ಟ್ರೇಶನ್’
Team Udayavani, Oct 9, 2022, 3:00 PM IST
ಪೃಥ್ವಿ ಅಂಬರ್ ಹಾಗೂ ಮಿಲನಾ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ ಫಾರ್ ರಿಜಿಸ್ಟ್ರೇಶನ್ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.
ಚಿತ್ರದ ಆಡಿಯೋ ಜಂಕಾರ್ ಮ್ಯೂಸಿಕ್ ಸಂಸ್ಥೆಗೆ ಮಾರಾಟವಾಗಿದೆ. ಈ ಚಿತ್ರದಲ್ಲಿಆರು ಹಾಡುಗಳಿದ್ದು, ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿರುವ ಹಾಡುಗಳಿಗೆ ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಧ್ವನಿಯಾಗಿದ್ದಾರೆ.
ಆರ್.ಕೆ.ಹರೀಶ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಚಿತ್ರೀಕರಣ ನಡೆದಿದೆ. ದಿಯಾ ಹಾಗೂ ಲವ್ ಮಾಕ್ಟೇಲ್ ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಈ ಚಿತ್ರದಲ್ಲಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿ ರುವುದು ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ.
ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿಶ್ಚಲ್ ಫಿಲಂಸ್ ಮೂಲಕ ಎನ್. ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನವೀನ್ ದ್ವಾರಕನಾಥ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ.
ಇದನ್ನೂ ಓದಿ:ಸಾವರ್ಕರ್ ಬಗೆಗಿನ ಅಪಪ್ರಚಾರ ನಿಲ್ಲಿಸಿ, ಇಲ್ದಿದ್ರೆ ನಾವೇ ನಿಲ್ಲಿಸುತ್ತೇವೆ: ಬಿ.ಎಲ್.ಸಂತೋಷ್
ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.