ಹುಣಸೂರು: ಯಶಸ್ವಿ ಈದ್ ಮಿಲಾದ್ ಮೆರವಣಿಗೆ; ಗಮನ ಸೆಳೆದ ಧಪ್ ಕಾರ್ಯಕ್ರಮ

ಶಾಸಕ ಮಂಜುನಾಥ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್‌ಗೌಡ ಭಾಗಿ

Team Udayavani, Oct 9, 2022, 10:17 PM IST

1-ffsfsf

ಹುಣಸೂರು: ಪ್ರವಾದಿ ಮಹಮದ್ ಪೈಗಂಬರ್ ಹುಟ್ಟು ಹಬ್ಬದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮುಸ್ಲಿಂ ಸಮುದಾಯದವರು ಮೆರವಣಿಗೆ ನಡೆಸಿದರು, ಮೆರವಣಿಗೆಯಲ್ಲಿ ಮಕ್ಕಳ ದಫ್ ಕಾರ್ಯಕ್ರಮ ಗಮನ ಸೆಳೆಯಿತು.

ಬಿಸಿಲ ನಡುವೆಯೇ ನಗರದ ಶಬ್ಬೀರ್‌ನಗರದ ಶಾಹಿ ಮಸೀದಿಯಿಂದ ಮಧ್ಯಾಹ್ನ 2.30ಕ್ಕೆ ಹೊರಟ 8 ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದ ಬೃಹತ್ ಮೆರವಣಿಗೆಯು ಕಲ್ಪತರು ವೃತ್ತ, ಬಜಾರ್ ರಸ್ತೆ, ಜೆಎಲ್ ಬಿರಸ್ತೆ, ಎಸ್ ಜೆರಸ್ತೆ ಮೂಲಕ ಸಂವಿಧಾನ ವೃತ್ತಕ್ಕಾಗಮಿಸಿ ಅಲ್ಲಿಂದ ಈದ್ಗಾ ಮೈದಾನಕ್ಕಾಗಮಿಸಿದರು. ಅಲ್ಲಿ ಸಾಮೂಹಿಯ ಉಪಹಾರ ಸೇವಿಸಿದ ನಂತರ ಪ್ರಾರ್ಥನೆ ಸಲ್ಲಿಸಿದರು.

ಮೆರವಣಿಗೆಯಲ್ಲಿ ಮುಸ್ಲಿಂ ಯುವಕರು ಇಸ್ಲಾಂ ಜಿಂದಾಬಾದ್, ಅಲ್ಲಾ ಓ ಅಕ್ಬರ್ ಹಾಗೂ ಇನ್ನಿತರೆ ಪ್ರವಾದಿ ಮಹಮ್ಮದರ ಪರವಾಗಿ ಘೋಷಣೆಗಳನ್ನು ಕೂಗಿದರು. ಮೆರೆವಣಿಗೆಯಲ್ಲಿ ಸುಮಾರು 25 ಕ್ಕೂ ಹೆಚ್ಚು ವಾಹನಗಳಲ್ಲಿ ಟ್ಯಾಬ್ಲೊ ಗಳು, ನೂರಾರು ದೊಡ್ಡ ದೊಡ್ಡ ಹಸುರು ಬಣ್ಣದ ಬಾವುಟಗಳು ಹಿಡಿದು ಸಾಗಿ ಬಂದರು.ಪ್ರಮುಖ ವೃತ್ತಗಳಲ್ಲಿ, ರಸ್ತೆ ಇಕ್ಕೆಲಗಳಲ್ಲಿ ನಿಂತಿದ್ದ ಮಹಿಳೆಯರು ಕೈಯಲ್ಲಿ ಹಸಿರು ಬಾವುಟ ಹಿಡಿದು ಮೆರವಣಿಗೆಯಲ್ಲಿ ಆಗಮಿಸಿದ್ದವರಿಗೆ ಶುಭ ಕೋರಿದರು.

ಮುಸ್ಲಿಂ ಸಂಘಟನೆಗಳ ಯುವಕರು ವೃತ್ತಗಳಲ್ಲಿ ಮಜ್ಜಿಗೆ, ಜ್ಯೂಸ್, ಹರೀರಾ ವಿತರಿಸುವ ಮೂಲಕ ಬಿಸಿಲಬೇಗೆಯಲ್ಲಿ ಬಳಲಿದ್ದವರ ದಣಿವಾರಿಸಿದರು. ಮದರಸಾದ ಮಕ್ಕಳಿಂದ ದಫ್, ಮಕ್ಕಾ-ಮದೀನ, ಗುಲಾಬಿ ಹೂವಿನಿಂದ ಅಲಂಕೃತಗೊಳಿಸಿದ್ದ ಸ್ತಬ್ಧಚಿತ್ರಗಳು ಗಮನ ಸೆಳೆದವು.

ಈದ್-ಮಿಲಾದ್ ಹಬ್ಬ ಆಚರಣೆ ಸಮಿತಿಯ ಅಧ್ಯಕ್ಷ ಸರ್ದಾರ್ ಅಹಮದ್ ಜಿ.ಪಂ.ಮಾಜಿ ಸದಸ್ಯ ಫಜಲುಲ್ಲಾ, ನಗರಸಭೆ ಸದಸ್ಯ ಸೈಯದ್ ಯೂನಸ್, ಪುರಸಭೆ ಮಾಜಿ ಸದಸ್ಯರಾದ ಹಜರತ್ ಜಾನ್, ಮಜಾಜ್‌ಅಹಮದ್, ಮಹಮದ್ ಶಫಿ, ಮುಖಂಡರಾದ ವಜೀರ್, ನಜೀರ್ ಅಹಮದ್, ಇನ್ನಿತರ ಮುಖಂಡರು, ಯುವ ಸಂಘಟನೆಗಳವರು ಮೆರವಣಿಗೆಯನ್ನು ಯಶಸ್ವಿಗೊಳಿಸಿದರು.

ಜಿಲ್ಲಾಪೊಲೀಸ್ ವರಿಷ್ಟಾಧಿಕಾರಿ ಆರ್.ಚೇತನ್, ಅಡಿಷನಲ್ ಎಸ್.ಪಿ.ನಂದಿನಿ ಬೊಳಗಿನಿಂದಲೇ ಮೊಕ್ಕಾಂ ಹೂಡಿದ್ದರು. ಹುಣಸೂರು ಉಪ ಅಧೀಕ್ಷಕ ರವಿಪ್ರಸಾದ್ ನೇತೃತ್ವದಲ್ಲಿ ಡಿಎಆರ್ ಡಿವೈಎಸ್‌ಪಿ ಸತೀಶ್ ಇನ್ಸ್ಪೆಕ್ಟ್ಗಳಾದ ಶ್ರೀನಿವಾಸ್, ರವಿಕುಮಾರ್, ಚಿಕ್ಕಸ್ವಾಮಿ ಹುಣಸೂರು, ಪಿರಿಯಾಪಟ್ಟಣ, ಸರಗೂರು, ಎಚ್.ಡಿ.ಕೋಟೆ ತಾಲೂಕುಗಳ ಪೊಲೀಸ್, ಗೃಹರಕ್ಷಕದಳದ ಸಿಬ್ಬಂದಿಗಳು ಕೆ.ಎಸ್.ಆರ್.ಪಿ ಹಾಗೂ ಡಿಎಆರ್ ತುಕಡಿಗಳು ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಶಾಸಕ ಎಚ್.ಪಿ.ಮಂಜುನಾಥ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ ಪ್ರತ್ಯೇಕವಾಗಿ ಸ್ವಲ್ಪದೂರ ಸಾಗಿ ಬಂದು ಮೆರವಣಿಗೆಗೆ ಶುಭ ಹಾರೈಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.