ಬಿಜೆಪಿ ದುರಾಡಳಿತದ ವಿರುದ್ಧ ರಾಹುಲ್ ಪಾದಯಾತ್ರೆ: ಸಿದ್ದರಾಮಯ್ಯ
ಬಳ್ಳಾರಿಯಲ್ಲಿ ಮಾತ್ರ ಬಹಿರಂಗ ಸಮಾವೇಶ
Team Udayavani, Oct 10, 2022, 10:00 PM IST
ರಾಯಚೂರು: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದುರಾಡಳಿತದ ಬಗ್ಗೆ ಜನರಿಗೆ ನೈಜ ವಿಚಾರಗಳನ್ನು ತಿಳಿಸಲು ರಾಹುಲ್ ಗಾಂಧಿ ನೇತೃತ್ವದಲ್ಲಿ ಸೆ.7ರಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ನಡೆಯುತ್ತಿದೆ. 3750 ಕಿಮೀ ಪಾದಯಾತ್ರೆ 14 ರಾಜ್ಯಗಳಲ್ಲಿ ಸಂಚರಿಸಲಿದೆ. ಸ್ವಾತಂತ್ರ್ಯ ದ ಬಳಿಕ ಐತಿಹಾಸಿಕ ಪಾದಯಾತ್ರೆ ಇದಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.15ರಂದು ಬಳ್ಳಾರಿಯಲ್ಲಿ ಮಧ್ಯಾಹ್ನ 1:30ಕ್ಕೆ ಪಾದಯಾತ್ರೆ ತಲುಪಲಿದ್ದು ಅಲ್ಲಿ ಬೃಹತ್ ಸಮಾವೇಶ ಮಾಡಲಾಗುತ್ತದೆ. 16ರಂದು ಪಾದಯಾತ್ರೆ ಮಾಡುತ್ತೇವೆ. ಬಳಿಕ ಆಂಧ್ರಕ್ಕೆ ಹೋಗಿ ಮತ್ತೆ ಬರುತ್ತಾರೆ. ಮಂತ್ರಾಲಯ ಮಠಕ್ಕೆ ಹೋಗಿ ರಾಯಚೂರಿಗೆ ಬರುತ್ತಾರೆ.
ರಾಯಚೂರಿಗೆ 21ಕ್ಕೆ ಬರುತ್ತಾರೆ. ಇಲ್ಲಿಂದ ತೆಲಂಗಾಣಕ್ಕೆ ಹೋಗುತ್ತಾರೆ. ಕರ್ನಾಟಕದಲ್ಲಿ 21 ದಿನ ಕಾಲ 510 ಕಿಮೀ ಪಾದಯಾತ್ರೆ ಮಾಡಲಿದ್ದಾರೆ. ಎಲ್ಲೂ ಬಹಿರಂಗ ಸಮಾವೇಶ ಮಾಡುವುದಿಲ್ಲ. ಬಳ್ಳಾರಿಯಲ್ಲಿ ಮಾತ್ರ ಒಂದು ಸಮಾವೇಶ ಮಾಡಲಾಗುತ್ತದೆ ಎಂದರು.
ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ಸರ್ಕಾರ ಸಂಪೂರ್ಣ ಸೋತಿದೆ. ಡೀಸೆಲ್, ಪೆಟ್ರೋಲ್, ಗ್ಯಾಸ್ ಸೇರಿದಂತೆ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಕೂಡ ಏರಿದೆ. ಜನ ಬಳಸುವ ವಸ್ತುಗಳ ಮೇಲೆಲ್ಲಾ ಜಿಎಸ್ಟಿ ಹಾಕುತ್ತಿದ್ದಾರೆ. ನರೇಂದ್ರ ಮೋದಿ ನಾವು ಜಿಎಸ್ಟಿ ತರುತ್ತೇವೆ ಅಂದಾಗ ವಿರೋಧ ಮಾಡಿದ್ದರು. ಮಂಡಕ್ಕಿ ಅದಾನಿ, ಅಂಬಾನಿ ಬೆಳೆಸುತ್ತಾರಾ? ಅದಕ್ಕೂ ಜಿಎಸ್ಟಿ ವಿಧಿಸುತ್ತಿದ್ದಾರೆ. ಡ್ರಾಪೌಟ್ ಅದಾನಿ ಈಗ ಜಗತ್ತಿನ ಎರಡನೇ ಅತಿ ದೊಡ್ಡ ಶ್ರೀಮಂತ. ಒಂದು ಕಡೆ ಕಾರ್ಪೊರೇಟ್ರ ಬೆಳೆಯುತ್ತಿದ್ದಾರೆ. ಇನ್ನೊಂದೆಡೆ ಬಡವರ ರಕ್ತ ಹೀರುತ್ತಿದ್ದಾರೆ ಎಂದರು.
ಮುಲಾಯಂ ಸಿಂಗ್ ಯಾದವ್ ಹಿರಿಯ ರಾಜಕಾರಣಿ. ಉತ್ತರ ಪ್ರದೇಶದಲ್ಲಿ ಸಿಎಂ ಆಗಿದ್ದವರು. ಅವರ ಮಗ ಅಖೀಲೇಶ್ ಸಿಎಂ ಆಗಿದ್ದರು. ಅವರದು ದೊಡ್ಡ ಕುಟುಂಬ. ಅವರ ಅಗಲಿಕೆಯಿಂದ ದೇಶಕ್ಕೆ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ.
– ಸಿದ್ದರಾಮಯ್ಯ, ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.