ಮಲ್ಪೆ: ನೀರಿಗೆ ಬಿದ್ದ ಮೀನುಗಾರನ ರಕ್ಷಣೆ
Team Udayavani, Oct 11, 2022, 12:20 AM IST
ಮಲ್ಪೆ: ಮಲ್ಪೆ ಮೀನುಗಾರಿಕಾ ಬಂದರಿನ ಪಶ್ಚಿಮ ದಿಕ್ಕಿನ ಜೆಟ್ಟಿ ಸಮೀಪ ನಿಲ್ಲಿಸಲಾಗಿದ್ದ ಬೋಟಿನಿಂದ ಕಾಲು ಜಾರಿ ಕೆಸರು ನೀರಿಗೆ ಬಿದ್ದ ಮೀನುಗಾರ ಒಡಿಶಾದ ಪ್ರಜ್ವಲ್ನನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ.
ಆತ ಆಳಸಮುದ್ರ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿದ್ದ.ಸೋಮವಾರ ಸಂಜೆ ಒಂದು ಬೋಟಿನಿಂದ ಇನ್ನೊಂದು ಬೋಟಿಗೆ ನಡೆದುಕೊಂಡು ಹೋಗುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ.
ದಕ್ಕೆಯಲ್ಲಿ ಕೆಸರು ತುಂಬಿಕೊಂಡಿದ್ದು, ಆತನ ಅರ್ಧ ದೇಹ ಕೆಸರಿನಲ್ಲಿ ಹೂತು ಹೋಗಿತ್ತು. ಆತ ಬೋಟಿನಲ್ಲಿ ನೇತು ಹಾಕಿದ್ದ ಟಯರನ್ನು ಹಿಡಿದುಕೊಂಡು ರಕ್ಷಣೆಗಾಗಿ ಕೂಗುತ್ತಿದ್ದ. ಅಲ್ಲೇ ಸಮೀಪದಲ್ಲಿದ್ದ ಈಶ್ವರ್ ಮಲ್ಪೆ ಅವರು ಧಾವಿಸಿ ಬಂದು ಹಗ್ಗದ ನೆರವಿನಿಂದ ಆತನನ್ನು ಮೆಲಕ್ಕೆತ್ತಿ ಪ್ರಾಣಪಾಯದಿಂದ ಕಾಪಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.