ಈ ವರ್ಷವೂ ಅದೇ ರಾಗ! ಭತ್ತ ಮಾರಿದ ಮೇಲೆ ಸರಕಾರಿ ಖರೀದಿ ಕೇಂದ್ರ ಸ್ಥಾಪನೆ

ಐದು ವರ್ಷಗಳಲ್ಲಿ ಒಂದು ಕೆಜಿ ಭತ್ತವೂ ಖರೀದಿಯಾಗಿಲ್ಲ

Team Udayavani, Oct 11, 2022, 7:10 AM IST

ಈ ವರ್ಷವೂ ಅದೇ ರಾಗ! ಭತ್ತ ಮಾರಿದ ಮೇಲೆ ಸರಕಾರಿ ಖರೀದಿ ಕೇಂದ್ರ ಸ್ಥಾಪನೆ

ಕುಂದಾಪುರ: ಕರಾವಳಿ ಭಾಗದ ರೈತರಿಗೆ ಸರಕಾರದ ಬೆಂಬಲ ಬೆಲೆ ಊಟಕ್ಕಿಲ್ಲದ ಉಪ್ಪಿನಕಾಯಿ ಯಾಗಿದೆ. ಕರಾವಳಿಯ ಸಂಸದರೇ ಕೇಂದ್ರ ಕೃಷಿ ಸಚಿವರಾ ಗಿದ್ದರೂ ಭತ್ತದ ಕಟಾವು ಮುಗಿದ ಮೇಲೆ ಖರೀದಿ ಕೇಂದ್ರ ಆರಂಭಿ ಸುವ ಪರಿಪಾಠ ಈ ಬಾರಿಯೂ ಬದಲಾಗುವ ಲಕ್ಷಣ ಗೋಚರಿಸುತ್ತಿಲ್ಲ.

ಪ್ರತೀ ಬಾರಿ ಈ ಸಮಸ್ಯೆ ಇದ್ದದ್ದೇ.ಹಲವು ಬಾರಿ ಮುಂಚಿತವಾಗಿ ಖರೀದಿ ಕೇಂದ್ರ ತೆರೆಯುವಂತೆ ಜನಪ್ರತಿನಿಧಿ ಗಳನ್ನು ಒತ್ತಾಯಿಸಿದರೂ ಅಷ್ಟು ಪ್ರಯೋಜನವಾಗಿಲ್ಲ.ಹಾಗಾಗಿ ಇತ್ತೀಚಿನ 5 ವರ್ಷಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಡಿ ಒಂದೇ ಒಂದು ಕೆಜಿ ಭತ್ತವನ್ನೂ ರೈತರು ಮಾರಿಲ್ಲ. ಕೇಂದ್ರ ಸರಕಾರವು ಸಾಮಾನ್ಯ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿ, ಖರೀದಿ ಕೇಂದ್ರಗಳ ಮೂಲಕ ಖರೀದಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸುತ್ತದೆ. ಈ ವರ್ಷ ಈ ಆದೇಶ ಇನ್ನೂ ಬಿಡುಗಡೆಯಾಗಬೇಕಿದೆ.

5 ವರ್ಷಗಳಲ್ಲಿ ಖರೀದಿಯೇ ಆಗಿಲ್ಲ
ದ.ಕ. ಜಿಲ್ಲೆಯ ಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ ಹಾಗೂ ಕಾರ್ಕಳದಲ್ಲಿ ಪ್ರತೀ ವರ್ಷ ಬೆಂಬಲ ಬೆಲೆಯಡಿ ಭತ್ತದ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ಆದರೆ ದ.ಕ.ದಲ್ಲಿ 2015ರಿಂದ ಈವರೆಗೆ ಎಲ್ಲಿಯೂ ಒಂದು ಕೆಜಿ ಭತ್ತ ಸಹ ಖರೀದಿಯಾಗಿಲ್ಲ. ಉಡುಪಿಯಲ್ಲಿ 2015-16ರಲ್ಲಿ 6 ರೈತರಿಂದ 168 ಕ್ವಿಂಟಾಲ್‌, 20161-17ರಲ್ಲಿ 29 ರೈತರಿಂದ 68 ಕ್ವಿಂಟಾಲ್‌ ಖರೀದಿಸಲಾಗಿತ್ತು. 2017ರಿಂದ ಈವರೆಗೆ ಒಂದು ಕೆಜಿ ಭತ್ತವೂ ಖರೀದಿ ಕೇಂದ್ರಕ್ಕೆ ಬಂದಿಲ್ಲ.

ವಿಳಂಬವೇ ಕಾರಣ
ಖರೀದಿ ಕೇಂದ್ರಕ್ಕೆ ರೈತರು ಭತ್ತವನ್ನು ತರದಿರಲು ಬಹುತೇಕ ಕಟಾವು ಮುಗಿದ ಬಳಿಕ ಖರೀದಿ ಕೇಂದ್ರ ಆರಂಭಿಸುವುದೇ ಪ್ರಮುಖ ಕಾರಣ. ಅದರಲ್ಲೂ ಕುಂದಾಪುರ, ಬೈಂದೂರು ಭಾಗದಲ್ಲಿ ಹಿಂಗಾರಿನಲ್ಲಿ ಸೇವಂತಿಗೆ, ಕಲ್ಲಂಗಡಿ ಬೆಳೆಯುವವರು ಬೇಗ ಭತ್ತ ಕಟಾವು ಮಾಡುತ್ತಾರೆ. ಕಳೆದ ಬಾರಿ ಡಿಸೆಂಬರ್‌ನಲ್ಲಿ ಬೆಂಬಲ ಬೆಲೆ ಘೋಷಿಸಿತ್ತು. ಕಟಾವು ಮುಗಿದ ಬಳಿಕ ಭತ್ತವನ್ನು ದಾಸ್ತಾನಿಟ್ಟರೆ ತೂಕ ಕಳೆದುಕೊಂಡೀತೆಂದು ಹೆಚ್ಚಿನವರು ಕಡಿಮೆ ದರಕ್ಕೆ ಅಕ್ಕಿ ಗಿರಣಿ, ಅಂಗಡಿಗಳಿಗೆ ಮಾರುತ್ತಾರೆ. ಜತೆಗೆ ಖರೀದಿ ಕೇಂದ್ರ ತಾಲೂಕು ಮಟ್ಟದಲ್ಲಿ ಮಾತ್ರ ತೆರೆಯಲಾಗುತ್ತದೆ. ಕನಿಷ್ಠ ಹೋಬಳಿ ಮಟ್ಟದಲ್ಲಿಯೂ ಖರೀದಿಸದಿರುವುದು ಮತ್ತೂಂದು ಸಮಸ್ಯೆ. ಯಾಕೆಂದರೆ ತಾಲೂಕು ಕೇಂದ್ರಕ್ಕೆ ಸಾಗಾಟ ವೆಚ್ಚವೇ ದುಬಾರಿ.

ಶೀಘ್ರ ಆರಂಭಿಸಿ
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಸೆಪ್ಟಂಬರ್‌ ಕೊನೆಯ ವಾರದಿಂದ ಭತ್ತದ ಕಟಾವು ಆರಂಭವಾಗುತ್ತದೆ. ಆದರೆ ಈ ಬಾರಿ ವಾತಾವರಣದ ಏರುಪೇರಿನಿಂದಾಗಿ ಬೆಳೆ ವಿಳಂಬವಾಗಿದ್ದು, ಆದರೂ ಕೆಲವೆಡೆ ಕಟಾವು ಆರಂಭವಾಗಿದೆ. ಅಕ್ಟೋಬರ್‌ ಕೊನೆಯ ವಾರ ಹಾಗೂ ನವೆಂಬರ್‌ ಆರಂಭದ ವೇಳೆಗೆ ಮುಂಗಾರು ಹಂಗಾಮಿನ ಬಹುತೇಕ ಕಟಾವು ಮುಗಿಯಲಿದೆ. ಆದರೆ ಸರಕಾರ ಇನ್ನೂ ಭತ್ತದ ಖರೀದಿ ಕೇಂದ್ರ ಆರಂಭಿಸಿಲ್ಲ. ಆದ್ದರಿಂದ ಆದಷ್ಟು ಶೀಘ್ರವೇ ಭತ್ತದ ಖರೀದಿ ಕೇಂದ್ರವನ್ನು ಆರಂಭಿಸಬೇಕೆಂಬುದು ರೈತರ ಆಗ್ರಹ.

ರಾಜ್ಯ ಸರಕಾರಕ್ಕೆ ಸೂಚನೆ
ಭತ್ತ ಖರೀದಿ ಹೊಣೆ ರಾಜ್ಯ ಸರಕಾರದ್ದಾಗಿದ್ದು, ಕರಾವಳಿ ಭಾಗದ ರೈತರಿಗೆ ಆದಷ್ಟು ಬೇಗ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗುವುದು.
– ಶೋಭಾ ಕರಂದ್ಲಾಜೆ,
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ

ಕೇರಳ ಮಾದರಿ ಅನುಸರಿಸಲಿ
ಕರಾವಳಿ ಭಾಗದಲ್ಲಿ ಕಟಾವು ಮುಗಿದು ಭತ್ತ ಮಾರಿದ ಬಳಿಕ ಖರೀದಿ ಕೇಂದ್ರ ಆರಂಭಿಸಲಾಗುತ್ತದೆ. ಬದಲಾಗಿ ಕೇರಳದಲ್ಲಿ ಕೇಂದ್ರದೊಂದಿಗೆ ರಾಜ್ಯ ಸರಕಾರವು ಹೆಚ್ಚುವರಿ ಬೆಂಬಲ ಬೆಲೆ ನೀಡಿ ರೈತರ ಭತ್ತ ವನ್ನು ಖರೀದಿಸುತ್ತದೆ. ಈ ಮಾದರಿ ನಮ್ಮಲ್ಲೂ ಬರಲಿ.
– ಶರತ್‌ ಕುಮಾರ್‌ ಶೆಟ್ಟಿ ,
ಅಧ್ಯಕ್ಷರು, ರೈತ ಸಂಘ ತ್ರಾಸಿ ವಲಯ


- ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

Udupi-DC

Udupi: ಸೆಪ್ಟೆಂಬರ್ 28-29: ದಸರಾ ಕ್ರೀಡಾಕೂಟ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

2(2)

Puttur: ಪ್ರೀ ವೆಡ್ಡಿಂಗ್‌ ಶೂಟ್‌ಗೂ ಭಟ್ಟರ ಅಡುಗೆ ಘಮ!

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.