155ಕ್ಕೂ ಹೆಚ್ಚು ಸರ ಕದ್ದವ ಸೇರಿ ಮೂವರ ಬಂಧನ
Team Udayavani, Oct 11, 2022, 2:15 PM IST
ಬೆಂಗಳೂರು: ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಗುರಿಯಾಗಿಸಿ ಚಿನ್ನದ ಸರ ಕಳವು ಮಾಡುತ್ತಿದ್ದ ಮೂವರು ಆರೋಪಿ ಗಳನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಂಕದಕಟ್ಟೆ ನಿವಾಸಿ ಅಚ್ಯುತ್ ಕುಮಾರ್ ಅಲಿಯಾಸ್ ಗಣಿ(35), ಮೈಸೂರು ಮೂಲದ ಸಿದ್ದರಾಜು ಅಲಿಯಾಸ್ ಪ್ರಜ್ವಲ್ (21) ಹಾಗೂ ಬೆಂಗಳೂರಿನ ಕಮಲಾನಗರದ ಪ್ರಸನ್ನಕುಮಾರ್(35) ಬಂಧಿತರು.
ಆರೋಪಿ ಗಳಿಂದ 5 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಇತ್ತೀಚೆಗೆ ದಾಸರಹಳ್ಳಿ ಭುವನೇಶ್ವರಿನಗರದಲ್ಲಿ ಸಂಜೆ ವಾಯು ವಿಹಾರಕ್ಕೆ ಹೋಗುತ್ತಿದ್ದ ಮಹಿಳೆಯನ್ನು ಬೈಕ್ ನಲ್ಲಿ ಹಿಂಭಾಲಿಸಿ ಮಾಂಗಲ್ಯ ಸರ ಕಳವು ಮಾಡಿ ಪರಾರಿಯಾಗಿದ್ದರು. ಸರ ಕದಿಯುವು ದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದು, ಹಲವು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ.
ಆರೋಪಿಗಳ ಪೈಕಿ ಅಚ್ಯುತ್ ಕುಮಾರ್ ವಿರುದ್ಧ ಈ ಹಿಂದೆ ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ, ಹೊಸಪೇಟೆ, ಹಾಸನ, ತುಮಕೂರು, ದೊಡ್ಡಬಳ್ಳಾಪುರ, ಬಳ್ಳಾರಿ, ಚನ್ನಪಟ್ಟಣ ಸೇರಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 155ಕ್ಕೂ ಅಧಿಕ ಸರಗಳವು ಪ್ರಕರಣ ದಾಖಲಾಗಿವೆ. 2018ನೇ ಸಾಲಿನಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರ ಕಳವು ಮಾಡಿ ಜೈಲು ಸೇರಿದ್ದ. 4 ವರ್ಷ ಜೈಲಿನಲ್ಲಿದ್ದು ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದು ಹೊರಬಂದು, ಇದೀಗ ಮತ್ತೆ ಅದೇ ಕೃತ್ಯಗಳಲ್ಲಿ ತೊಡಗಿದ್ದನು ಎಂದು ಪೊಲೀಸರು ಹೇಳಿದರು.
ಆರೋಪಿ ಸಿದ್ದರಾಜು ರಾತ್ರಿ ವೇಳೆ ಬೀಗ ಹಾಕಿರುವ ಅಂಗಡಿಗಳನ್ನು ಗುರಿಯಾಗಿಸಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ. ಮತ್ತೂಬ್ಬ ಆರೋಪಿ ಪ್ರಸನ್ನ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ಪೊಲೀಸರು ಹೇಳಿದರು.
ಜೈಲಿನಲ್ಲಿ ಪರಿಚಯ, ಒಟ್ಟಿಗೆ ಕಳ್ಳತನ : ಮೂವರು ಆರೋಪಿಗಳು ಬೇರೆ ಬೇರೆ ಪ್ರಕರಣಗಳಲ್ಲಿ ಜೈಲು ಸೇರಿದ್ದಾಗ ಪರಸ್ಪರ ಪರಿಚಯವಾಗಿದ್ದಾರೆ. ಈ ವೇಳೆಯೇ ಸರಗಳವು ಮಾಡಿದರೆ ಸುಲಭವಾಗಿ ಹಣ ಸಂಪಾದಿಸಬಹುದು ಎಂದು ಲೆಕ್ಕಾಚಾರ ಹಾಕಿ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಬಳಿಕ ಮೂವರು ಸೇರಿಕೊಂಡು ಸರಗಳವು ಮಾಡುತ್ತಿದ್ದರು. ಅದಕ್ಕಾಗಿ ತುಮಕೂರಿನಲ್ಲಿ ಪಲ್ಸರ್ ದ್ವಿಚಕ್ರ ವಾಹನ ಕಳವು ಮಾಡಿದ್ದರು. ಆ ದ್ವಿಚಕ್ರ ವಾಹನದ ನಂಬರ್ ಪ್ಲೇಟ್ ಬದಲಾಯಿಸಿ ನಗರದ ಬಾಗಲಗುಂಟೆ, ವಿದ್ಯಾರಣ್ಯಪುರ, ನೆಲಮಂಗಲ ಟೌನ್, ನಂದಿನಿಲೇಔಟ್ ಠಾಣೆಯಲ್ಲಿ ಸರ ಕಳವು ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.