ಜೀವನದಲ್ಲಿ ಸಮೃದ್ಧಿ ತರಲು ಇಬ್ಬರು ಮಹಿಳೆಯರ ನರಬಲಿ; ದಂಪತಿ ಬಂಧನ
ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ...
Team Udayavani, Oct 11, 2022, 4:17 PM IST
ಪತ್ತನಂತಿಟ್ಟ : ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಾಟಮಂತ್ರದ ಭಾಗವಾಗಿ ಇಬ್ಬರು ಮಹಿಳೆಯರನ್ನು ಬಲಿಕೊಡಲಾಗಿರುವ ಆತಂಕಕಾರಿ ಘಟನೆ ನಡೆದಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಶಂಕಿತ ದಂಪತಿ ಸೇರಿದಂತೆ ಮೂವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಬೀದಿಗಳಲ್ಲಿ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುವ ಮೂಲಕ ಜೀವನ ನಡೆಸುತ್ತಿದ್ದ ಇಬ್ಬರು ಮಹಿಳೆಯರನ್ನು ಆರೋಪಿಗಳು ತಮ್ಮ ಹಣಕಾಸಿನ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಜೀವನದಲ್ಲಿ ಸಮೃದ್ಧಿ ತರಲು ಬಲಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಪಾಕಿಸ್ಥಾನ ಉತ್ತಮ ತಂಡ ಆದರೆ…; ಸ್ಪಿನ್ನರ್ ಚಹಾಲ್ ದೊಡ್ಡ ಹೇಳಿಕೆ
ಕೊಲೆಗಳ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ತಲೆಗೆ ಕಾಯಿಲೆ ಇರುವವರು ಮಾತ್ರ ಇಂತಹ ಅಪರಾಧಗಳನ್ನು ಮಾಡಲು ಸಾಧ್ಯ.ಇಂತಹ ಮಾಟಮಂತ್ರ ಮತ್ತು ವಾಮಾಚಾರದ ಆಚರಣೆಗಳು ಸುಸಂಸ್ಕೃತ ಸಮಾಜಕ್ಕೆ ಸವಾಲಾಗಿ ಮಾತ್ರ ಕಾಣಬಹುದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಹತ್ಯೆಯಾದವರು ಸುಮಾರು 50 ರ ಆಸುಪಾಸಿನವರಾಗಿದ್ದು, ಇಲ್ಲಿನ ಕಡವಂತಾರ ಮತ್ತು ಸಮೀಪದ ಕಾಲಡಿ ನಿವಾಸಿಗಳು. ಈ ವರ್ಷ ಸೆಪ್ಟೆಂಬರ್ ಮತ್ತು ಜೂನ್ನಲ್ಲಿ ಮಹಿಳೆಯರು ನಾಪತ್ತೆಯಾಗಿದ್ದರು ಮತ್ತು ಅಂತಿಮವಾಗಿ ತನಿಖೆಯಲ್ಲಿ ನರಬಲಿ ನೀಡಿರುವುದು ತಿಳಿದು ಬಂದಿದೆ ಎಂದರು.
ಪತ್ತನಂತಿಟ್ಟದ ತಿರುವಲ್ಲಾದ ಎಳಂತೂರ್ ಗ್ರಾಮದಲ್ಲಿ ಎರಡು ಸ್ಥಳಗಳಲ್ಲಿ ಹೂಳುವ ಮೊದಲು ಮಹಿಳೆಯರ ದೇಹದ ಭಾಗಗಳನ್ನು ತುಂಡುಗಳಾಗಿ ಕತ್ತರಿಸಲಾಯಿತು ಎಂದು ಆರೋಪಿಗಳ ತಪ್ಪೊಪ್ಪಿಗೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ.
ವರದಿಯ ಪ್ರಕಾರ ಬಂಧಿತ ವ್ಯಕ್ತಿಗಳನ್ನು ಸ್ಥಳೀಯ ಮಸಾಜ್ ಥೆರಪಿಸ್ಟ್ ಭಗವಲ್ ಸಿಂಗ್ ಅವರ ಪತ್ನಿ ಲೈಲಾ ಎಂದು ಗುರುತಿಸಲಾಗಿದೆ. ಇಬ್ಬರೂ ತಿರುವಲ್ಲಾದ ಸ್ಥಳೀಯರು ಮತ್ತು ಪೆರುಂಬವೂರು ಮೂಲದ ರಶೀದ್ ಅಲಿಯಾಸ್ ಮುಹಮ್ಮಂದ್ ಶಾಫಿ ಎಂಬಾತನು ಆಮಿಷವೊಡ್ಡಿ ಮಹಿಳೆಯರನ್ನು ದಂಪತಿಯ ಮನೆಗೆ ಕರೆತಂದು ಬಲಿ ನೀಡಿರುವುದಾಗಿ ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಚರ್ಚ್ ಸ್ಟ್ರೀಟ್ ನಲ್ಲಿದ್ದ 50 ಅನಧಿಕೃತ ಅಂಗಡಿ ತೆರವು
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…
Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.