ಗುಣಮಟ್ಟದಲ್ಲಿ ಕೊರತೆ, ಸುಪರ್ದಿಗೆ ಪಡೆಯಲು ಚೇಳ್ಯಾರು ಗ್ರಾ.ಪಂ. ಹಿಂದೇಟು?

ಜಲಜೀವನ್‌ ಮಿಷನ್‌ ಕಾಮಗಾರಿ

Team Udayavani, Oct 11, 2022, 4:37 PM IST

19

ಸುರತ್ಕಲ್‌: ಕೇಂದ್ರ ಮತ್ತು ರಾಜ್ಯ ಸರಕಾರದ ಗ್ರಾಮೀಣ ಪ್ರದೇಶದ ಮಹತ್ವಾಕಾಂಕ್ಷೆಯ ನೀರಿನ ಯೋಜನೆ ಜಲವಿಷನ್‌ (ಜೆ.ಜೆ.ಎಂ.) ಮನೆ ಮನೆ ಗಂಗೆ ಯೋಜನೆಯಲ್ಲಿ ಚೇಳ್ಯಾರು ಗ್ರಾ.ಪಂ. ವ್ಯಾಪ್ತಿಯ ಒಂದು ಕಡೆಯ ಕಾಮಗಾರಿಯಲ್ಲಿ ಗುಣಮಟ್ಟದ ಕೊರತೆ ಇದೆ ಎಂಬ ಬಗ್ಗೆ ಆರೋಪ ಕೇಳಿ ಬಂದಿದೆ.

ಇಲ್ಲಿನ ಕೆಲಸದಲ್ಲಿ ಮೂರು ಅಡಿ ಕೆಳಗೆ ಹಾಕಬೇಕಾದ ನೀರಿನ ಪೈಪ್‌ಗಳು ಒಂದೇ ಮಳೆಗೆ ಮೇಲೆದ್ದು ಬಂದಿವೆ. ವಾಹನಗಳು ಇದರ ಮೇಲೆ ಹೋದರೆ ಒಡೆದು ಹೋಗುವ ಸಾಧ್ಯತೆಯೂ ಇದೆ. ಮಧ್ಯ ಗ್ರಾಮಕ್ಕೆ ಈ ಯೋಜನೆಯಲ್ಲಿ 54 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ನೀರಿನ ಓವರ್‌ ಹೆಡ್‌ ಟ್ಯಾಂಕ್‌, ತೆರೆದ ಬಾವಿ, ಕೊಳವೆ ಬಾವಿ, ಪೈಪ್‌ಲೈನ್‌ ಕಾಮಗಾರಿ ಒಳಗೊಂಡಿದೆ. ಈಗಾಗಲೇ ಪೈಪ್‌ಲೈನ್‌ ಹಾಕಲಾಗಿದ್ದು, ಕಳಪೆ ಮಟ್ಟದ ಪೈಪ್‌ ಗಳನ್ನು ಬಳಸಲಾಗಿದೆ ಎಂಬ ಸಂಶಯ ಗ್ರಾಮಸ್ಥರದ್ದು, ಇತ್ತೀಚೆಗೆ ಸುರಿದ ಮಳೆಗೆ ಮಣ್ಣು ಹೋಗಿ ಪೈಪ್‌ ರಸ್ತೆಯಲ್ಲಿ ಬಿದ್ದಿದೆ ಎಂಬ ಆಕ್ರೋಶ ಗ್ರಾಮಸ್ಥರದ್ದಾಗಿದೆ.

ನೀರಿನ ಓವರ್‌ ಹೆಡ್‌ ಟ್ಯಾಂಕ್‌ ಪ್ರಾರಂಭಿಸಿ ಒಂದು ವರ್ಷ ಕಳೆದರೂ ಮುಕ್ತಾಯ ಹಂತಕ್ಕೆ ಬಂದಿಲ್ಲ. ಕಾಮಗಾರಿಯ ಅಂದಾಜು ಪಟ್ಟಿಯಲ್ಲಿ ತೆರೆದ ಬಾವಿಗೆ ಅನು ದಾನ ಇದ್ದರೂ ಮಳೆಗಾ ಲದ ನೆಪವೊಡ್ಡಿ ಅದನ್ನು ಮಾಡದೆ ಕೊಳವೆ ಬಾವಿ ಮಾಡಿ ಮುಗಿಸುವ ಚಿತಾವಣೆ ನಡೆದಿದೆ ಎಂಬ ಆರೋಪವಿದೆ.

ಗ್ರಾಮಸ್ಥರು ಈ ಬಗ್ಗೆ ಎರಡು ಸಲ ಗ್ರಾಮ ಸಭೆಯಲ್ಲಿ ಈಗಾಗಲೇ ಆಗಿರುವ ಕಾಮಗಾರಿ ಕಳಪೆಯಾಗಿದೆ. ನಮಗೆ ಕೊಳವೆ ಬಾವಿ ಬೇಡ ಈಗಾಗಲೇ 4 ಕೊಳವೆ ಬಾವಿ ನೀರು ಇಲ್ಲದೆ ಮುಚ್ಚಿವೆ. ಹಾಗಾಗಿ ನಮಗೆ ತೆರೆದ ಬಾವಿ ಬೇಕು ಎಂದು ಆಗ್ರಹಿಸಿದ್ದರು. ಕಾಮಗಾರಿಯ ಉಸ್ತುವಾರಿಯನ್ನು ನೋಡ ಬೇಕಾದ ಜಿ.ಪಂ., ನೀರು ಸರಬ ರಾಜು ಇಲಾಖೆಯ ಎಂಜಿನಿಯರ್‌ಗಳು ಕಾಮಗಾರಿಯನ್ನು ಇಷ್ಟರವರೆಗೆ ಪರಿಶೀಲನೆ ಮಾಡಿಲ್ಲ. ಅಕ್ಟೋಬರ್‌ ತಿಂಗಳೊಳಗೆ ಕಾಮಗಾರಿಯನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾ.ಪಂ. ವಿರೋಧವಿದ್ದು, ಅಗತ್ಯವೆನಿಸಿದರೆ ಲೋಕಾಯುಕ್ತಕ್ಕೂ ದೂರು ಸಲ್ಲಿಸಲು ಪಂಚಾಯತ್‌ ಚಿಂತನೆ ನಡೆಸಿದೆ.

ಕ್ರಮದ ಎಚ್ಚರಿಕೆ: ಕಾಮಗಾರಿಯಲ್ಲಿನ ಗುಣ ಮಟ್ಟದ ಬಗ್ಗೆ ಶಾಸಕ ಉಮಾನಾಥ ಕೋಟ್ಯಾನ್‌ ಅವರಿಗೆ ತಿಳಿಸಿದ್ದೇವೆ. ಅವರು ಕೂಡ ಕಳಪೆ ಕಾಮಗಾರಿ ಯಾಗಿದ್ದರೆ ಕ್ರಮ ಜರಗಿಸುವ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಕಾಮಗಾರಿ ಸರಿಯಾಗದೆ ಸುಪರ್ದಿಗೆ ನಾವು ತೆಗೆದುಕೊಳ್ಳುವುದಿಲ್ಲ. ಸರಕಾರದ ಅನುದಾನ ಪೋಲಾಗಲು ಬಿಡುವುದಿಲ್ಲ. –ಯಶೋದಾ ಬಿ., ಅಧ್ಯಕ್ಷರು, ಚೇಳ್ಯಾರು ಗ್ರಾ.ಪಂ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.