ಸರಕಾರಿ ಭೂಮಿ ಮಂಜೂರು: ಕಾನೂನು ಇಲಾಖೆಗೆ ನಿರ್ದೇಶನ: ಸಚಿವ ಅಶೋಕ್
Team Udayavani, Oct 11, 2022, 11:17 PM IST
ಬೆಂಗಳೂರು: ಕುಮ್ಕಿ, ಕಾನೆ, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ದಶಕಗಳಿಂದ ಸಾಗುವಳಿ ಮಾಡುತ್ತಿರುವ ಅರ್ಹರಿಗೆ ಭೂಮಿ ಮಂಜೂರು ಮಾಡುವ ಸಂಬಂಧ ಕಾನೂನು ತಿದ್ದುಪಡಿಗೆ ಅಭಿಪ್ರಾಯ ಸಲ್ಲಿಸುವಂತೆ ಸಂಪುಟ ಉಪಸಮಿತಿ ಕಾನೂನು ಇಲಾಖೆಗೆ ನಿರ್ದೇಶನ ನೀಡಿದೆ.
ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯ ಅನಂತರ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಮಲೆನಾಡು ಸೇರಿ ರಾಜ್ಯಾದ್ಯಂತ 60ರಿಂದ 70 ವರ್ಷ ಬಡ ರೈತರು ಸರಕಾರಿ ಭೂಮಿ, ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ.
ನ್ಯಾಯಾಲಯಗಳು ಅರಣ್ಯ ಪ್ರದೇಶವೆಂದು ಘೋಷಿಸಿದ್ದರೂ ಅಲ್ಲಿ ಅಡಿಕೆ, ತೆಂಗಿನ ಮರ ಬೆಳೆದಿವೆ. ದಶಕಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವವರಿಗೆ ಭೂಮಿ ಮಂಜೂರು ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ. ಇದಕ್ಕಾಗಿ ಕಾನೂನು ತಿದ್ದುಪಡಿ ಆಗಬೇಕಿದ್ದು ಪರಾಮರ್ಶೆ ನಡೆಸಿ ಅಭಿಪ್ರಾಯ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.
ಸಾಗುವಳಿದಾರರು ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ. ಈಗಾಗಲೇ ಅರ್ಜಿ ಸಲ್ಲಿಸಿದವರು ಹಾಗೂ ತಿರಸ್ಕೃತ ಅರ್ಜಿಗಳನ್ನು ಪರಿಗಣಿಸಿ ಅರ್ಹರಿಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ ಲಕ್ಷಾಂತರ ಎಕರೆ ಭೂಮಿಯಲ್ಲಿ ಈ ರೀತಿ ಸಾಗುವಳಿಯಾಗಿದ್ದು, ಬಡ ರೈತರಿಗೆ ನೆರವಾಗಲು ತೀರ್ಮಾನಿಸಲಾಗಿದೆ ಎಂದರು. ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನಬೆಟ್ಟ ಇತರ ಗ್ರಾಮೀಣ ಪ್ರದೇಶದ ಸರಕಾರಿ ಭೂಮಿ ಮಂಜೂರು ಮಾಡುವ ಸಂಬಂಧ ನೀತಿ ರೂಪಿಸಲು ಸಂಪುಟ ಉಪ ಸಮಿತಿ ರಚನೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.