ಎದುರಾಳಿಗಳ ಜೊತೆ ಗಜರಾಮ ಕಾಳಗ
Team Udayavani, Oct 12, 2022, 2:32 PM IST
ಇತ್ತೀಚೆಗೆಗಷ್ಟೇ ಸೆಟ್ಟೇರಿದ ರಾಜವರ್ಧನ್ ನಾಯಕನಾಗಿ ಅಭಿನಯಿಸುತ್ತಿರುವ “ಗಜರಾಮ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ.
ಸದ್ಯ “ಗಜರಾಮ’ ಸಿನಿಮಾದ ಮೊದಲ ಹಂತದ ಚಿತ್ರೀಕರಣದ ಅಂತಿಮ ಹಂತದಲ್ಲಿದ್ದು, ಸಿನಿಮಾದ ಕ್ಲೈಮ್ಯಾಕ್ಸ್ನಲ್ಲಿ ಬರುವ ನಾಯಕ ಮತ್ತು ಖಳನಾಯಕನ ನಡುವಿನ ಕಾದಾಟದ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿದೆ. ಬೆಂಗಳೂರಿನ ಜಾಲಹಳ್ಳಿ ಸಮೀಪದ ಹೆಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿರುವ “ಗಜರಾಮ’ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣ ವೇಳೆ ಪತ್ರಕರ್ತರು ಮತ್ತು ಮಾಧ್ಯಮಗಳನ್ನು ಆಹ್ವಾನಿಸಿದ್ದ ಚಿತ್ರತಂಡ, ಸಿನಿಮಾದ ಚಿತ್ರೀಕರಣ ಸಾಗಿಬರುತ್ತಿರುವುದರ ಬಗ್ಗೆ ಒಂದಷ್ಟು ಮಾತನಾಡಿತು.
ಮೊದಲಿಗೆ ಮಾತಿಗಿಳಿದ ನಾಯಕ ನಟ ರಾಜವರ್ಧನ್, “ಸಿನಿಮಾದ ಟೈಟಲ್ಲೇ ಹೇಳುವಂತೆ, “ಗಜರಾಮ’ ಔಟ್ ಆ್ಯಂಡ್ ಔಟ್ ಲವ್ ಕಂ ಆ್ಯಕ್ಷನ್ ಸಬ್ಜೆಕ್ಟ್ ಸಿನಿಮಾ. ಸಿನಿಮಾದಲ್ಲಿ ಸುಮಾರು ಆರೇಳು ಹೈವೋಲ್ಟೇಜ್ ಫೈಟ್ಸ್ ಇದೆ. ಸದ್ಯ ಕ್ಲೈಮ್ಯಾಕ್ಸ್ ಫೈಟ್ಸ್ ಶೂಟಿಂಗ್ ಮಾಡುತ್ತಿದ್ದು, ಸಿನಿಮಾ ತುಂಬ ಚೆನ್ನಾಗಿ ಬರುತ್ತಿದೆ. ನಿರ್ದೇಶಕರು ಹೇಳಿದನ್ನು ಅಚ್ಚುಕಟ್ಟಾಗಿ ತೆರೆಮೇಲೆ ತರುತ್ತಿದ್ದಾರೆ’ ಎಂದು ಸಂತಸ ಹಂಚಿಕೊಂಡರು.
ಖಳನಟ ಕಬೀರ್ ಸಿಂಗ್, “ಈ ಸಿನಿಮಾದಲ್ಲಿ ನನ್ನದು ವಿಲನ್ ಪಾತ್ರ. ತುಂಬ ವಿಭಿನ್ನವಾಗಿರುವ ಮತ್ತು ಹೊಸಥರದ ನಿರೂಪಣೆಯಿರುವುದರಿಂದ ಸಿನಿಮಾದ ಕಥೆ ಮತ್ತು ನನ್ನ ಪಾತ್ರ ಇಷ್ಟವಾಯಿತು. ಬಹಳ ದಿನಗಳ ನಂತರ ಕನ್ನಡದಲ್ಲಿ “ಗಜರಾಮ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಯಿದೆ’ ಎಂದರು.
“ಗಜರಾಮ’ ಸಿನಿಮಾದಲ್ಲಿ ನಟ ದೀಪಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದ ಆ್ಯಕ್ಷನ್ ದೃಶ್ಯಗಳಲ್ಲಿ ಭಾಗಿಯಾಗಿದ್ದ ದೀಪಕ್, “ಈ ಸಿನಿಮಾದಲ್ಲಿ ನನ್ನದು ಪೊಲೀಸ್ ಆಫೀಸರ್ ಪಾತ್ರ. ಇಡೀ ಸಿನಿಮಾದಲ್ಲಿ ನನ್ನ ಪಾತ್ರವಿರುತ್ತದೆ. ಸಿನಿಮಾ ತುಂಬ ಚೆನ್ನಾಗಿ ಬರುತ್ತಿದೆ’ ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
ನಾಯಕಿ ತಪಸ್ವಿನಿ ಪೂಣಚ್ಚ, “ಗಜರಾಮ’ ಸಿನಿಮಾದ ನಿರ್ದೇಶಕ ಸುನೀಲ್ ಕುಮಾರ್, ಸಾಹಸ ನಿರ್ದೇಶಕ ಅರ್ಜುನ್, ನಿರ್ಮಾಪಕ ನರಸಿಂಹ ಮೂರ್ತಿ, ಛಾಯಾಗ್ರಹಕ ಕೆ. ಎಸ್. ಚಂದ್ರಶೇಖರ್, ಸಹ ನಿರ್ಮಾಪಕ ಕ್ಸೇವಿಯರ್ ಫರ್ನಾಂಡಿಸ್ ಸಿನಿಮಾದ ಚಿತ್ರೀಕರಣದ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು. “ಲೈಫ್ ಲೈನ್ ಫಿಲಂ ಪ್ರೂಡಕ್ಷನ್’ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ “ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.