ದೈವದ ಕಥೆ ಯಕ್ಷ ರಂಗಕ್ಕೆ ಹೊಸತೇನಲ್ಲ; ‘ಕಾಂತಾರ’ ಪ್ರಸಂಗವಾಗಲಿದೆಯೇ?

ನಾಗವಲ್ಲಿ... ಬಾಹುಬಲಿ ಸೇರಿ ಹಲವು ಪ್ರಸಂಗಗಳು ಯಕ್ಷ ರಂಗದಲ್ಲಿ ಮೇಳೈಸಿದ್ದವು

Team Udayavani, Oct 12, 2022, 7:53 PM IST

1-sa-aasd

ಯಕ್ಷಗಾನ ರಂಗಕ್ಕೆ ಶತಮಾನಗಳ ಇತಿಹಾಸವಿದ್ದು, ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಆರಾಧನಾ ಕಲೆಗಳಲ್ಲಿ ಒಂದು. ಕಲೆ, ಕಲಾವಿದ ಎನ್ನುವ ವಿಚಾರ ಬಿಟ್ಟರೆ ಸಿನಿಮಾ, ಯಕ್ಷಗಾನ ಮತ್ತು ಭೂತಾರಾಧನೆಯಲ್ಲಿ ಅನೇಕ ವ್ಯತ್ಯಾಸಗಳಿವೆ. ಸಿನಿಮಾ ರಂಗದ ಕಥೆಗಳು ಅನಿವಾರ್ಯ ಕಾರಣಕ್ಕೆ ಯಕ್ಷಗಾನ ರಂಗಕ್ಕೆ ಬಂದಿರುವ ಹಲವು ನಿದರ್ಶನಗಳಿವೆ. ಹಾಗೆಯೇ ದೈವಾರಾಧನೆ, ಭೂತಗಳ ಮಹತ್ವ ಸಾರುವ ಅನೇಕ ಪ್ರಸಂಗಗಳು ಯಕ್ಷಗಾನ ರಂಗದಲ್ಲಿ ಪ್ರದರ್ಶನಗೊಂಡು ಪ್ರೇಕ್ಷಕರಿಗೆ ಹತ್ತಿರವಾಗಿವೆ.

ಯಕ್ಷಗಾನ ರಂಗದಲ್ಲಿ ದೈವಾರಾಧನೆಯ ಮಹತ್ವ ಸಾರುವ ಅನೇಕ ಪ್ರಸಂಗಗಳು ಈಗಾಗಲೇ ಪ್ರದರ್ಶನಗೊಂಡಿವೆ. ಅನೇಕ ಸೂಪರ್ ಹಿಟ್ ಚಲನಚಿತ್ರಗಳೂ ಯಕ್ಷಗಾನ ಪ್ರಸಂಗಗಳಾಗಿ ರಂಗಮಂಚವನ್ನೇರಿವೆ. ದಶಕಗಳ ಹಿಂದೆ ಸಾಹಸಸಿಂಹ ಡಾ.ವಿಷ್ಣುವರ್ಧನ್, ಸೌಂದರ್ಯ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಆಪ್ತಮಿತ್ರ’ ಚಿತ್ರದ ಕಥೆ ‘ನಾಗವಲ್ಲಿ’ ಎಂಬ ಹೆಸರಿನಲ್ಲಿ ಪ್ರದರ್ಶನಗೊಂಡು ಅಪಾರ ಜನಮನ್ನಣೆ ಗಳಿಸಿತ್ತು.

ಸೂಪರ್ ಹಿಟ್ ಚಲನಚಿತ್ರ ‘ಬಾಹುಬಲಿ’ಯ ಕಥೆಯನ್ನೂ ಯಕ್ಷಗಾನ ಪ್ರಸಂಗವಾಗಿ ರಂಗದಲ್ಲಿ ಪ್ರದರ್ಶಿಸಲಾಗಿತ್ತು. ಇಂತಹ ಪ್ರಸಂಗಗಳ ಕುರಿತಾಗಿ ಸಂಪ್ರದಾಯ ಬದ್ದ ಪ್ರಸಂಗಗಳ ಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು.ಆದರೂ ಯುವ ಜನಾಂಗ ರಂಗಸ್ಥಳದ ಎದುರು ಭಾರಿ ಸಂಖ್ಯೆಯಲ್ಲಿ ಸೇರುವಂತೆ ಸಿನಿಮಾ ಕಥೆಗಳ ಪ್ರಸಂಗಗಳು ಮಾಡಿದ್ದವು. ಡೇರೆ ಮೇಳಗಳಿಗೆ ಇಂತಹ ಪ್ರಸಂಗಗಳು ಹೆಚ್ಚಿನ ಆರ್ಥಿಕ ಲಾಭವನ್ನೂ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದವು.ಬಯಲಾಟ ಮೇಳಗಳಿಗೆ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಸೆಳೆದು ಕೊಳ್ಳುವಲ್ಲಿ ಯಶಸ್ವಿಯಾಗಿದ್ದವು.

ಸದ್ಯ ಕರಾವಳಿಯ ದೈವಾರಾಧನೆಯ ಮೂಲ ಕಥೆಯನ್ನಾಧರಿಸಿ, ದೈವಗಳ ಮಹತ್ವಿಕೆ ಸಾರಿರುವ ಬ್ಲಾಕ್ ಬಸ್ಟರ್ ಹಿಟ್ ‘ಕಾಂತಾರ’ ಚಿತ್ರ ಯಕ್ಷ ರಂಗಕ್ಕೆ ಬರಲಿದೆಯೆ ಎನ್ನುವ ಕುತೂಹಲ ಯುವ ಯಕ್ಷಾಭಿಮಾನಿಗಳಲ್ಲಿ ಮೂಡಿದೆ.

ದೈವಗಳ ವಿಚಾರ ಬಳಕೆಗೆ ವಿರೋಧ
‘ಕಾಂತಾರ’ ಸಿನಿಮಾ ಬಿಡುಗಡೆಗೂ, ಭಾರಿ ಜನಮನ್ನಣೆ ಪಡೆಯುವ ಮುನ್ನವೇ ಯಕ್ಷಗಾನ ರಂಗದಲ್ಲಿ ಅತೀ ಎನಿಸುವಂತೆ ದೈವಗಳ ಪಾತ್ರಗಳನ್ನು ರಂಗಕ್ಕೆ ತಂದಿರುವ ಬಗ್ಗೆ ವಿರೋಧವೂ ವ್ಯಕ್ತವಾಗಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಹಲವರು ದೈವಾರಾಧನೆಯನ್ನು ಯಕ್ಷಗಾನದಲ್ಲಿ ಬಳಕೆ ಮಾಡಬಾರದು. ಅಲ್ಲಿ ಬಳಸಲಾಗುವ ಕೆಲ ಧರ್ಮ ಸೂಕ್ಷ್ಮ ವಿಚಾರಗಳನ್ನು ಯಕ್ಷಗಾನ ರಂಗದಲ್ಲಿ ಪ್ರದರ್ಶಿಸಬಾರದು ಎಂಬ ಆಕ್ಷೇಪ ವ್ಯಕ್ತವಾಗಿತ್ತು.

ದಶಕಗಳಿಂದ ಪ್ರತಿವರ್ಷವೂ ದೈವಗಳ ಕುರಿತಾಗಿನ ವಿನೂತನ ಪ್ರಸಂಗಗಳು ಯಕ್ಷ ರಂಗದಲ್ಲಿ ಪ್ರದರ್ಶನಗೊಳ್ಳುತ್ತಿದ್ದವು. ಕೆಲ ಪ್ರೇಕ್ಷಕರೂ ಅಂತಹ ಪ್ರಸಂಗಗಳಿಗಾಗಿಯೇ ಕಾದು ನಿಲ್ಲುತ್ತಿದ್ದರು. ಇನ್ನೇನು ನವೆಂಬರ್ ಮಧ್ಯ ಭಾಗದಲ್ಲಿ ಯಕ್ಷಗಾನ ಮೇಳಗಳು ತಿರುಗಾಟ ಆರಂಭಿಸಲಿದ್ದು,ಜನಮನ್ನಣೆ ಪಡೆದಿರುವ ‘ಕಾಂತಾರ’ ಚಿತ್ರ ಯಕ್ಷ ಭೂಮಿಕೆಗೆ ಹೊಂದುವಂತಹ ಕಥೆಯಾಗಿ ರಂಗಕ್ಕೆ ಬರಲಿದೆಯೇ? ಪ್ರಸಂಗಕರ್ತರು ಆ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೋ ಎನ್ನುವ ಕುರಿತು ಯಕ್ಷ ಪ್ರೇಮಿಗಳಲ್ಲಿ ಕುತೂಹಲ ಮೂಡಿದೆ.

ವಿಷ್ಣುದಾಸ್ ಪಾಟೀಲ್

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.