ರಾಜ್ಯ ಸಹಕಾರ ಸಂಘಗಳ ಚುನಾವಣೆ ಇನ್ನು ಪಾರದರ್ಶಕ
ಬಹು ರಾಜ್ಯ ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸಂಪುಟ ಒಪ್ಪಿಗೆ
Team Udayavani, Oct 13, 2022, 7:00 AM IST
ಹೊಸದಿಲ್ಲಿ: ಬಹುರಾಜ್ಯ ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿಗೆ ಮುಂದಾಗಿರುವ ಕೇಂದ್ರ ಸರಕಾರ, ಚುನಾ ವಣ ವ್ಯವಸ್ಥೆಯಲ್ಲಿ ಸುಧಾರಣೆ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆದಾಯಿತ್ವ ತರಲು ನಿರ್ಧರಿಸಿದೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
97ನೇ ಸಾಂವಿಧಾನಿಕ ತಿದ್ದುಪಡಿ ಮೂಲಕ ಬಹುರಾಜ್ಯ ಸಹಕಾರ ಸಂಘಗಳ(ತಿದ್ದುಪಡಿ) ಕಾಯ್ದೆ, 2022ಯನ್ನು ಜಾರಿಗೆ ತರುವುದಾಗಿ ಕೇಂದ್ರ ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಸರಾಗ ವ್ಯಾಪಾರ, ವಹಿವಾಟು, ಹೆಚ್ಚಿನ ಪಾರದರ್ಶಕತೆ ಮತ್ತು ಸಹಕಾರ ಸಂಘಗಳ ಆಡಳಿತವನ್ನು ಉತ್ತಮಗೊಳಿಸಲು ಈ ತಿದ್ದುಪಡಿ ನೆರವಾಗಲಿದೆ. ಸಹಕಾರ ಸಂಘಗಳಲ್ಲಿ ನಡೆಯು ತ್ತಿರುವ ಹಣಕಾಸು ವಂಚನೆ, ಚುನಾವಣೆ ನಡೆಸುವಲ್ಲಿ ವಿಳಂಬ ಮತ್ತು ಒಬ್ಬನೇ ವ್ಯಕ್ತಿ ದೀರ್ಘಾವಧಿಯವರೆಗೆ ಅಧಿಕಾರ ನಡೆಸುವುದನ್ನು ಇದು ತಪ್ಪಿಸಲಿದೆ ಎಂದರು.
ಸದ್ಯ ದೇಶದಲ್ಲಿ 1500 ಬಹು-ರಾಜ್ಯ ಸಹಕಾರ ಸಂಘಗಳಿವೆ. ಸಂಘದ ಸದಸ್ಯರ ಆರ್ಥಿಕ ಮತ್ತು ಸಾಮಾಜಿಕ ಜೀವನವನ್ನು ಉತ್ತಮಗೊಳಿಸುವ ಮೂಲಕ ದೇಶದ ಆರ್ಥಿಕ ಪ್ರಗತಿಗೂ ಉತ್ತೇಜನ ನೀಡುತ್ತಿವೆ. ಈ ಬಹುರಾಜ್ಯ ಸಹಕಾರ ಸಂಘಗಳು ಕೇಂದ್ರ ಸರಕಾರದ ಅಧೀನದಲ್ಲೇ ಇರುವುದರಿಂದ ತಿದ್ದುಪಡಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ರೈಲ್ವೇ ಸಿಬಂದಿಗೆ ಹಬ್ಬದ ಬೋನಸ್: ರೈಲ್ವೇ ಸಿಬಂದಿಗೂ ಸಂತಸದ ಸುದ್ದಿ ನೀಡಲಾಗಿದೆ. 2021-22ರ ವರ್ಷದಲ್ಲಿ ಉತ್ಪಾದನಾ ಸಂಪರ್ಕಿತ ಬೋನಸ್ ರೂಪದಲ್ಲಿ 78 ದಿನಗಳ ವೇತನ ಅಥವಾ 17,951 ರೂ.ಗಳಷ್ಟು ಬೋನಸನ್ನು ದಸರೆ ಅಥವಾ ಪೂಜಾ ರಜೆ ವೇಳೆಯಲ್ಲಿ ನೀಡಲು ನಿರ್ಧರಿಸಲಾಗಿದೆ. ಈ ವರ್ಷವೂ 11.27 ಲಕ್ಷ ಸಿಬಂದಿಗೆ ಬೋನಸ್ ನೀಡಲಾಗುತ್ತಿದೆ. ಇದರಿಂದ ಕೇಂದ್ರದ ಬೊಕ್ಕಸಕ್ಕೆ 1,832 ಕೋಟಿ ರೂ. ಹೊರೆ ಬೀಳಲಿದೆ ಎಂದು ವಿವರಿಸಿದ್ದಾರೆ.
ತಿದ್ದುಪಡಿ ಮಸೂದೆಯ ಮುಖ್ಯಾಂಶಗಳು
01. ಮಹಿಳೆಯರಿಗೆ ಪ್ರಾತಿನಿಧ್ಯ, ಎಸ್ಸಿ/ಎಸ್ಟಿ ಸದಸ್ಯರಿಗೆ ಮಂಡಳಿಯಲ್ಲಿ ಅವಕಾಶ.
02. ಚುನಾವಣ ವ್ಯವಸ್ಥೆ ಹಾಗೂ ಸಂಘದ ಕಾರ್ಯ ನಿರ್ವಹಣೆ ಮೇಲೆ ನಿಗಾ ವಹಿಸಿ ಹೊಣೆ ಹೆಚ್ಚಿಸುವುದು.
03. ಸಹಕಾರ ಚುನಾವಣ ಪ್ರಾಧಿಕಾರ, ಮಾಹಿತಿ ಅಧಿಕಾರಿ ಮತ್ತು ಒಂಬುಡ್ಸನ್ ನೇಮಕಕ್ಕೆ ಅವಕಾಶ
04. ಸಂಘದ ಮೂರು ಸರ್ವ ಸದಸ್ಯರ ಸಭೆಯಲ್ಲಿ ಹಾಜರಾದವರಿಗೆ ಮಾತ್ರ ಮತದಾನ ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ಅವಕಾಶ.
05. ಚುನಾವಣೆ ವೇಳೆಯಲ್ಲಿ ಅಕ್ರಮ ಎಸಗಿದರೆ3 ವರ್ಷ ಅವರನ್ನು ಡಿಬಾರ್ ಮಾಡುವುದು.
06. ಆಡಳಿತ ಮಂಡಳಿಯಲ್ಲಿ ಇಬ್ಬರು ಮಹಿಳೆ ಯರು, ಎಸ್ಸಿ/ಎಸ್ಟಿಯವರಿಗೆ 1 ಮೀಸಲು ಸ್ಥಾನ.
07. 500 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟು ಇರುವ ಸೊಸೈಟಿಗಳು ಕೇಂದ್ರದಿಂದ ಮಾನ್ಯತೆ ಪಡೆ ದ ಸಿಎಗಳ ಬಳಿಯಲ್ಲೇ ಆಡಿಟ್ ಮಾಡಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.