ವಿದೇಶಕ್ಕೂ ತಲುಪಿದ ಆಲೂಗಡ್ಡೆ ಸಂಶೋಧನೆ !


Team Udayavani, Oct 13, 2022, 2:55 PM IST

16

ಬಾಗಲಕೋಟೆ: ಆಲೂಗಡ್ಡೆ ಬೀಜೋತ್ಪಾದನೆಯಲ್ಲಿ ರೈತರು ಎದುರಿಸುತ್ತಿದ್ದ ಬೀಜದ ಗಡ್ಡೆ ಸಮಸ್ಯೆಗೆ ಮುಕ್ತಿ ನೀಡಲು ಹಾಗೂ ರೋಗ ನಿರೋಧಕವಾಗಿರುವ ಹೊಸ ತಳಿಯ ಆಲೂಗಡ್ಡೆ ಚಿಗುರು ಕಾಂಡ ಸಸ್ಯೋತ್ಪಾದನೆ ತಾಂತ್ರಿಕತೆಯನ್ನು ಬಾಗಲಕೋಟೆಯ ತೋಟಗಾರಿಕೆ ವಿವಿಯ ವಿಜ್ಞಾನಿಗಳು ಸಂಶೋಧನೆ ಮಾಡಿದ್ದು, ಇದಕ್ಕೆ ವಿದೇಶಗಳಲ್ಲೂ ಬಲು ಬೇಡಿಕೆ ಬಂದಿದೆ.

ಹೌದು, ಬೆಂಗಳೂರು, ಕೋಲಾರ, ಹಾಸನ ಸೇರಿದಂತೆ ರಾಜ್ಯದ ಸುಮಾರು 7 ಜಿಲ್ಲೆಗಲ್ಲಿ ಅತಿಹೆಚ್ಚು ಆಲೂಗಡ್ಡೆ ಬೆಳೆಯಲಾಗುತ್ತಿದೆ. ಆದರೆ, ಪ್ರತಿವರ್ಷವೂ ಆಲೂಗಡ್ಡೆ ಬೆಳೆಗಾರರು, ಅಂಗಮಾರಿ, ಕೊಳೆರೋಗದ ಜತೆಗೆ ಬೀಜದ ಗಡ್ಡೆಯ ಸಮಸ್ಯೆ ತೀವ್ರವಾಗಿ ಎದುರಿಸುತ್ತಿದ್ದರು. ಅತಿಹೆಚ್ಚು ಆಲೂಗಡ್ಡೆ ಬೆಳೆಗಾರರಿದ್ದರೂ ಅವರಿಗೆ ಸಮಯಕ್ಕೆ ಸರಿಯಾಗಿ ಬೀಜದ ಗಡ್ಡೆ ಸಿಗದೆ ಪರದಾಡುತ್ತಿದ್ದರು. ಈ ಎಲ್ಲ ಸಮಸ್ಯೆ ಅರಿತ ಬಾಗಲಕೋಟೆ ತೋಟಗಾರಿಕೆ ವಿವಿ, ತನ್ನ ಅಧೀನದಲ್ಲಿರುವ ಬೆಂಗಳೂರಿನ (ಜಿಕೆವಿಕೆ) ಮತ್ತು ಹಾಸನದ ತೋಟಗಾರಿಕೆ ಕಾಲೇಜುಗಳ ಪ್ರಾದೇಶಿಕ ತೋಟಗಾರಿಕೆ ಸಂಶೋಧನೆ ಮತ್ತು ವಿಸ್ತರಣೆ ಕೇಂದ್ರದಿಂದ ಹೊಸ ಪ್ರಸ್ತಾವನೆ ಸಿದ್ಧಪಡಿಸಿ, 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು.

2019ರಿಂದ ನಿರಂತರವಾಗಿ ಆಲೂಗಡ್ಡೆ ಚಿಗುರು ಕಾಂಡ ಸಸ್ಯೋತ್ಪಾದನೆ ತಾಂತ್ರಿಕತೆ ಸಂಶೋಧನೆ ಮಾಡಿ, ರೈತರ ಹೊಲಗಳಲ್ಲಿ ಪ್ರಾತಿಕ್ಷಿಕೆ ಕೂಡ ಮಾಡಿತ್ತು. ಅದೂ ಯಶಸ್ವಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೂತನ ಬಿತ್ತನೆ ಗಡ್ಡೆ ಉತ್ಪಾದನೆ ತಂತ್ರಜ್ಞಾನ ಅಭಿವೃದ್ಧಿಪಡಿಸಲು, ತೋಟಗಾರಿಕೆ ವಿವಿಗೆ ವಿಶೇಷ ಅನುದಾನ ಕೂಡ ನೀಡಿತ್ತು. ಅದೀಗ ಸಾಕಾರಗೊಂಡು ಹೊಸ ಆಲೂಗಡ್ಡೆ ಚಿಗುರು ಕಾಂಡ ಸಸಿ ಸಂಶೋಧಿಸಿ, ರೈತರಿಗೆ ಯಶಸ್ವಿಯಾಗಿ ಪೂರೈಸುತ್ತಿದೆ. ಇದಕ್ಕೆ ರಾಜ್ಯ ಸರ್ಕಾರ ಕೂಡ ಮಾನ್ಯತೆ ನೀಡಿ, ರೈತರಿಗೆ ಸಬ್ಸಿಡಿ ರೂಪದಲ್ಲಿ ಸಸಿ ವಿತರಣೆಗೆ ಮುಂದಾಗಿದೆ.

ಈ ಚಿಗುರು ಕಾಂಡ ಸಸ್ಯೋತ್ಪಾದನೆ ನಾಲ್ಕು ಹಂತ ಹೊಂಡಿದ್ದು, ಅಂಗಾಂಶ ಕೃಷಿ ಮೂಲಕ ಅಭಿವೃದ್ಧಿಪಡಿಸಿದೆ. ಇದಕ್ಕಾಗಿ ಶಿಮ್ಲಾದ ಕೇಂದ್ರೀಯ ಆಲೂಗಡ್ಡೆ ಸಂಶೋಧನೆ ಸಂಸ್ಥೆಯಿಂದ ಸುಧಾರಿತ ತಳಿಯ ಅಂಗಾಂಶ ಕೃಷಿ ವಿಧಾನಕ್ಕಾಗಿ ಮಾತೃ ಸಸಿ ತರಿಸಲಾಗಿತ್ತು. ಪಾಲಿಮನೆಗಳಲ್ಲಿ ತಾಯಿ ಮಡಿಗಳ ತಯಾರಿಕೆ, ಮಾತೃ ಸಸಿಗಳ ಬೆಳೆಸುವಿಕೆ ಮಾಡಿ, ರೈತರಿಗೆ ನೀಡಲಾಗುತ್ತಿದೆ.

ಕ್ಯಾಮರೂನ್‌ ದೇಶಕ್ಕೂ ಹೊಸ ತಂತ್ರಜ್ಞಾನ: ತೋಟಗಾರಿಕೆ ವಿವಿಯಿಂದ ಅಭಿವೃದ್ಧಿಪಡಿಸಿದ ಈ ನೂತನ ತಂತ್ರಜ್ಞಾನ, ಆಫ್ರೀಕಾ ಖಂಡದ ಪ್ರಮುಖ ಆಲೂಗಡ್ಡೆ ಬೆಳೆಯುವ ಕ್ಯಾಮರೂನ್‌ ದೇಶಕ್ಕೂ ತಲುಪಿದೆ. ಈ ಸಸ್ಯೋತ್ಪಾದನೆಯಿಂದ ಕೇಂದ್ರ ಸರ್ಕಾರ, ತೋಟಗಾರಿಕೆ ವಿವಿಯನ್ನು ಟೆಕ್ನಾಲಜಿ ಪಾರ್ಟನರ್‌ (ತಾಂತ್ರಿಕ ಸಲಹೆ ತಂಡದಲ್ಲಿ) ಎಂದು ಆಯ್ಕೆ ಮಾಡಿಕೊಂಡಿದ್ದು, ದೇಶೀಯ ಸಂಶೋಧನೆ, ಸಸ್ಯೋತ್ಪಾದನೆಗಳನ್ನು ವಿದೇಶಗಳಲ್ಲೂ ವಿಸ್ತರಿಸಲು ಭಾರತೀಯ ಕೃಷಿ ಅನುಸಂಧಾನ ಪರಿಷತ್‌ ಮೂಲಕ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಮರೂನ್‌ ದೇಶದ ತೋಟಗಾರಿಕೆ ವಿಜ್ಞಾನಿಗಳು, ಪ್ರಾಧ್ಯಾಪಕರು ಒಳಗೊಂಡ 10 ಜನರ ತಂಡ ಈಚೆಗೆ ಬೆಂಗಳೂರಿನ ಜಿಕೆವಿಕೆ, ಹಾಸನದ ಕಾಲೇಜು ಹಾಗೂ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ನೂತನ ಆಲೂಗಡ್ಡೆ ಚಿಗುರು ಕಾಂಡ ಸಸ್ಯ ಉತ್ಪಾದನೆ ತಂತ್ರಜ್ಞಾನ ನೋಡಿಕೊಂಡು, ಅದನ್ನು ಮೆಚ್ಚಿ ತಮ್ಮ ದೇಶದಲ್ಲೂ ಇದನ್ನೇ ಅಭಿವೃದ್ಧಿಪಡಿಸಲು ಮುಂದಾಗಿದ್ದಾರೆ.

ಭಾಗ್ಯ ನುಗ್ಗೆ ಬಿತ್ತನೆ ಬೀಜ ಸಂಶೋಧನೆಯ ಬಳಿಕ ಆಲೂಗಡ್ಡೆ ಚಿಗುರು ಕಾಂಡ ಸಸ್ಯ ಉತ್ಪಾದನೆಯಲ್ಲಿ ಬಾಗಲಕೋಟೆಯ ತೋಟಗಾರಿಕೆ ವಿವಿ, ವಿದೇಶದಲ್ಲೂ ಗಮನ ಸೆಳೆಯುವ ಕಾರ್ಯ ಮಾಡಿದೆ. ಇದಕ್ಕೆ ಕೇಂದ್ರದ ನೆರವು, ರಾಜ್ಯ ಸರ್ಕಾರದ ಸಬ್ಸಿಡಿ ಕೂಡ ದೊರೆಯುತ್ತಿದೆ. ಇಡೀ ರಾಜ್ಯದಲ್ಲಿ ಆಲೂಗಡ್ಡೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಜಿಲ್ಲೆಗಳಲ್ಲಿ ಪ್ರಸಕ್ತ ವರ್ಷದಿಂದ ಆಲೂಗಡ್ಡೆ ಹೊಸ ಚಿಗುರು ಕಾಂಡ ಸಸ್ಯೋತ್ಪಾದನೆ ತಾಂತ್ರಿಕತೆ, ಎಲ್ಲೆಡೆ ಬಲು ಬೇಡಿಕೆ ಪಡೆಯುತ್ತಿದೆ.

ತೋಟಗಾರಿಕೆ ವಿವಿಯಿಂದ ಆಲೂಗಡ್ಡೆ ಚಿಗುರು ಕಾಂಡ ಸಸ್ಯೋತ್ಪಾದನೆ ತಾಂತ್ರಿಕೆ ಸಂಶೋಧನೆ ಮಾಡಿದ್ದು, ಇದಕ್ಕೆ ಕೇಂದ್ರ ಸರ್ಕಾರ ಕೂಡ ಮಾನ್ಯತೆ ಜತೆಗೆ ನೆರವು ನೀಡಿದೆ. 2019ರಿಂದ ಸಂಶೋಧನೆ ಆರಂಭಗೊಂಡು, ಎರಡು ವರ್ಷ ರೈತರ ಹೊಲಗಳಲ್ಲಿ ಟ್ರಯಲ್‌ ಮಾಡಲಾಗಿತ್ತು. 2022ರಿಂದ ರಾಜ್ಯ ಸರ್ಕಾರ, ಈ ಹೊಸ ತಾಂತ್ರಿಕೆಯ ಸಸ್ಯಗಳನ್ನು ಸಬ್ಸಿಡಿ ಮೂಲಕ ರೈತರಿಗೆ ನೀಡುತ್ತಿದೆ. ಮುಖ್ಯವಾಗಿ ಇದನ್ನು ಕ್ಯಾಮರೂನ್‌ ದೇಶದ ವಿಜ್ಞಾನಿಗಳೂ ಇಲ್ಲಿಗೆ ಬಂದು, ಅಧ್ಯಯನ ಮಾಡಿ, ಅವರ ದೇಶದಲ್ಲೂ ಈ ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ. ತೋಟಗಾರಿಕೆ ವಿವಿಯ 10 ವರ್ಷಗಳ ಹಾದಿಯಲ್ಲೆ ಹೆಮ್ಮೆ ತರಿಸಿದೆ.  –ಡಾ|ಕೆ.ಎಂ. ಇಂದಿರೇಶ, ಕುಲಪತಿ, ತೋಟಗಾರಿಕೆ ವಿವಿ, ಬಾಗಲಕೋಟೆ

„ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.