ಸಹಕಾರ ಸಂಘಗಳ ವಿಶ್ವಾಸಾರ್ಹತೆ ವೃದ್ಧಿಯತ್ತ ದಿಟ್ಟ ಹೆಜ್ಜೆ 


Team Udayavani, Oct 14, 2022, 6:00 AM IST

ಸಹಕಾರ ಸಂಘಗಳ ವಿಶ್ವಾಸಾರ್ಹತೆ ವೃದ್ಧಿಯತ್ತ ದಿಟ್ಟ ಹೆಜ್ಜೆ 

ಬಹು ರಾಜ್ಯ ಸಹಕಾರ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಈ ಸಹಕಾರ ಸಂಘಗಳ ಚುನಾವಣ ವ್ಯವಸ್ಥೆಯಲ್ಲಿ ಸುಧಾರಣೆ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಹಲವಾರು ದಶಕಗಳಿಂದ ದೇಶದಲ್ಲಿ ಬಹು ರಾಜ್ಯ ವ್ಯಾಪ್ತಿಯ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆಯಾದರೂ ಕಳೆದ ಕೆಲವು ವರ್ಷಗಳಿಂದೀಚೆಗೆ ಹಲವಾರು ಸಹಕಾರ ಸಂಘಗಳ ವ್ಯವಹಾರ ಮತ್ತು ಆಡಳಿತದಲ್ಲಿ ಅಕ್ರಮಗಳು ನಡೆದಿರುವ ಸಂಬಂಧ ಆರೋಪಗಳು ಕೇಳಿಬಂದು ಈ ಸಹಕಾರ ಸಂಘಗಳ ಬಗೆಗಿನ ಜನರ ನಂಬಿಕೆಯನ್ನು ಹುಸಿಗೊಳಿಸುವಂತೆ ಮಾಡಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಬಹು ರಾಜ್ಯ ಸಹಕಾರ ಸಂಘಗಳ ಇಡೀ ವ್ಯವಸ್ಥೆಗೆ ಕಾಯಕಲ್ಪ ನೀಡುವ ದಿಸೆಯಲ್ಲಿ ಮುಂದಡಿ ಇರಿಸಿದ್ದು ಇದರ ಮೊದಲ ಹೆಜ್ಜೆಯಾಗಿ ಸಂಬಂಧಿತ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದೆ.

ಬಹು ರಾಜ್ಯ ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿಗಾಗಿ 97ನೇ ಸಾಂವಿಧಾನಿಕ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ತಿದ್ದುಪಡಿ ಅನುಷ್ಠಾನಕ್ಕೆ ಬಂದಲ್ಲಿ ಬಹುರಾಜ್ಯ ಸಹಕಾರ ಸಂಘಗಳ ವ್ಯವಹಾರ-ವಹಿವಾಟು ಸುಗಮಗೊಳ್ಳಲಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಸಹಕಾರಿ ಸಂಘಗಳಲ್ಲಿ ಪದೇಪದೆ ಕೇಳಿ ಬರುತ್ತಿರುವ ಹಣಕಾಸು ಅವ್ಯವಹಾರ, ಪಾರದರ್ಶಕವಾಗಿ ಚುನಾವಣೆ ನಡೆಸದಿರುವುದು ಮತ್ತು ಸಂಘಗಳ ಅಧಿಕಾರ ಏಕವ್ಯಕ್ತಿ ಕೇಂದ್ರಿತವಾಗಿರುವುದು ಮುಂತಾದ ಅಕ್ರಮಗಳಿಗೆ ಕಡಿವಾಣ ಬೀಳಲಿದೆ. ಇನ್ನು ಈ ತಿದ್ದುಪಡಿಯ ಮೂಲಕ ಬಹು ರಾಜ್ಯ ಸಹಕಾರ ಸಂಘಗಳ ಚುನಾವಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗಳಾಗಲಿವೆ. ಈ ಸಹಕಾರ ಸಂಘಗಳ ಆಡಳಿತ ಮಂಡಳಿಗಳಲ್ಲಿ ಮಹಿಳೆಯರಿಗೆ ಮತ್ತು ಎಸ್‌/ಎಸ್‌ಟಿಯವರಿಗೆ ಪ್ರಾತಿನಿಧ್ಯ ಕಲ್ಪಿಸಿ ಕೊಡಲು ಸ್ಥಾನಗಳನ್ನು ಮೀಸಲಿರಿಸಲಾಗುವುದು. ಸಂಘಗಳ ಆಡಳಿತ ಮಂಡಳಿಗೆ ನಡೆಯಲಿರುವ ಚುನಾವಣೆ ಮತ್ತು ಸಂಘದ ಕಾರ್ಯ ನಿರ್ವಹಣೆ ಮೇಲೆ ನಿಗಾ, ಚುನಾವಣೆಯಲ್ಲಿ ಅಕ್ರಮ ಎಸಗಿದವರ ಮೇಲೆ ಕ್ರಮ, ಸಂಘದ ಸದಸ್ಯರನ್ನೂ ಉತ್ತರದಾಯಿಗಳನ್ನಾಗಿ ಮಾಡುವುದು ಮತ್ತಿತರ ನಿಯಮಗಳನ್ನು ಈ ತಿದ್ದುಪಡಿ ಒಳಗೊಂಡಿರಲಿದೆ. ಇದೇ ವೇಳೆ ವಾರ್ಷಿಕ 500 ಕೋ. ರೂ.ಗಳಿಗಿಂತ ಹೆಚ್ಚಿನ ವಹಿವಾಟು ನಡೆಸುವ ಸಹಕಾರ ಸಂಘಗಳು ಕೇಂದ್ರದಿಂದ ಮಾನ್ಯತೆ ಪಡೆದ ಲೆಕ್ಕ ಪರಿಶೋಧಕ ರಿಂದಲೇ ಅಡಿಟ್‌ ನಡೆಸಬೇಕೆಂಬ ನಿಯಮ ಸೇರ್ಪಡೆಗೊಳಿಸಲಾಗಿದೆ.

ಸದ್ಯ ಬಹು ರಾಜ್ಯ ಸಹಕಾರ ಸಂಘಗಳು ಕೇಂದ್ರದ ಅಧೀನದಲ್ಲಿಯೇ ಕಾರ್ಯನಿರ್ವಹಿಸುತ್ತಿವೆಯಾದರೂ ಇವುಗಳ ಕಾರ್ಯನಿರ್ವಹಣೆಯಲ್ಲಿ ಸರಕಾರ ನೇರವಾಗಿ ಹಸ್ತಕ್ಷೇಪ ನಡೆಸುತ್ತಿರಲಿಲ್ಲ. ಆದರೆ ಈ ಸಹಕಾರ ಸಂಘಗಳ ಒಟ್ಟಾರೆ ಕಾರ್ಯಶೈಲಿಯ ಬಗೆಗೆ ಅಪಸ್ವರಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ಸಹಕಾರ  ಸಂಘಗಳನ್ನು ಇನ್ನಷ್ಟು ವಿಶ್ವಾಸಾರ್ಹ ಮತ್ತು ಜನಸ್ನೇಹಿ ಯಾಗಿಸಲು ಸರಕಾರ ಈ ಹೆಜ್ಜೆ ಇರಿಸಿದೆ. ಕೇಂದ್ರದಲ್ಲಿ ಪ್ರತ್ಯೇಕ ಸಹಕಾರ ಖಾತೆಯನ್ನು ರಚಿಸಿದ ಬಳಿಕ ಸಹಕಾರ ಸಂಘಗಳ ಮೇಲಿನ ಕಳಂಕವನ್ನು ತೊಡೆದು ಹಾಕಲು ಕೆಲವೊಂದು ಕಠಿನ ನಿಯಮಾವಳಿಗಳನ್ನು ರೂಪಿಸಿದ್ದು ಇದರ ಮುಂದುವರಿದ ಭಾಗವಾಗಿ ಈ ತಿದ್ದುಪಡಿ ಕಾಯ್ದೆಯ ಜಾರಿಗೆ ನಿರ್ಧರಿಸಿದೆ. ಇದು ಅಕ್ಷರಶಃ ಅನುಷ್ಠಾನಗೊಂಡಲ್ಲಿ ಕಾಯ್ದೆಯ ನೈಜ ಉದ್ದೇಶ ಈಡೇರಲಿದೆ ಮಾತ್ರವಲ್ಲದೆ ಬಹು ರಾಜ್ಯ ಸಹಕಾರ ಸಂಘಗಳ ಬಗೆಗಿನ ಜನರ ವಿಶ್ವಾಸಾರ್ಹತೆಯನ್ನು ಹೆಚ್ಚಿಸಲಿದೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.