ವಸ್ತು ಪ್ರದರ್ಶನದಲ್ಲಿ ವನ್ಯಲೋಕ ದರ್ಶನ; ಗಮನ ಸೆಳೆಯುತ್ತಿದೆ ಪ್ರಾಣಿಪಕ್ಷಿಗಳ ಪ್ರತಿಕೃತಿ

ದೇಶದಲ್ಲಿ ಅಭಿವೃದ್ಧಿ ಮತ್ತು ಕಾಡು ಸಂರಕ್ಷಣೆ ಎರಡೂ ಒಟ್ಟಿಗೆ ನಡೆಯಬೇಕು

Team Udayavani, Oct 14, 2022, 6:36 PM IST

ವಸ್ತು ಪ್ರದರ್ಶನದಲ್ಲಿ ವನ್ಯಲೋಕ ದರ್ಶನ; ಗಮನ ಸೆಳೆಯುತ್ತಿದೆ ಪ್ರಾಣಿಪಕ್ಷಿಗಳ ಪ್ರತಿಕೃತಿ

ಮೈಸೂರು: ಘರ್ಜಿಸುತ್ತಿರುವ ಹುಲಿ, ಹಕ್ಕಿಗಳ ಕಲರವ, ಸಫಾರಿ ವಾಹನದತ್ತ ಘೀಳಿಡುತ್ತಾ ಓಡು ತ್ತಿರುವ ಒಂಟಿ ಸಲಗವನ್ನು ನೀವೂ ನೋಡಬೇಕೆ. ಹಾಗಿದ್ದರೆ ಒಮ್ಮೆ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿ, ದಟ್ಟ ಕಾಡಿನಲ್ಲಿ ಸಂಚರಿಸಿದ ಅನುಭವ ಪಡೆಯಿರಿ. ನಗರದ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಅರಣ್ಯ ಇಲಾಖೆಯಿಂದ ಎರಡು ಎಕರೆ ವಿಶಾಲ ಪ್ರದೇಶದಲ್ಲಿ ತೆರೆದಿರುವ ಮಳಿಗೆಯಲ್ಲಿ ಜೀವ ವೈವಿಧ್ಯತೆಯ ಸೊಬಗು ಅನಾವರಣಗೊಂಡಿದ್ದು,ನೂರಕ್ಕೂ ಹೆಚ್ಚು ಪ್ರಾಣಿ, ಪಕ್ಷಿಗಳ ಪ್ರತಿಕೃತಿಗಳು ಅವುಗಳ ಘರ್ಜನೆ, ಚಿಲಿಪಿಲಿ ಸದ್ದುಗಳು ನೋಡುಗರ ಗಮನ ಸೆಳೆಯುತ್ತಿದೆ.

ದಟ್ಟ ಕಾಡಿಗೆ ಹೋದ ಅನುಭವ: ಅರಣ್ಯ ಇಲಾಖೆ ತೆರೆದಿರುವ ಮಳಿಗೆಯ ಒಳಗೆ ಕಾಲಿಟ್ಟೊಡನೆ ವನ್ಯಜೀವಿಗಳ ಸಂರಕ್ಷಣೆಯಿಂದಾಗುವ ಉಪಯೋಗ, ಅರಣ್ಯ ಇಲಾಖೆ ಕಾರ್ಯ, ಜೀವವೈಧ್ಯತೆ ಉಳಿಸಿಕೊಳ್ಳ ಬೇಕಾದ ಅಗತ್ಯತೆ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಹಾಗೆ ಮುಂದೆ ಸಾಗಿದರೆ ಯಾವುದೋ ದಟ್ಟ ಕಾಡಿಗೆ ಹೋದ ಅನುಭವ ಸಿಗಲಿದೆ.

ಪ್ರತಿಕೃತಿಗಳು ಪ್ರಮುಖ ಆಕರ್ಷಣೆ: ಮದವೇರಿದ ಒಂಟಿ ಸಲಗ ಘೀಳಿಟ್ಟು ಸಫಾರಿ ವಾಹನದತ್ತ ಮುನ್ನುಗ್ಗುತ್ತಿರುವುದು ಆತಂಕ ಹುಟ್ಟಿಸಿದರೆ, ಘರ್ಜಿಸುತ್ತಿರುವ ಹುಲಿ ನೋಡುಗರನ್ನು ನಿಬ್ಬೆರೆರಗು ಗೊಳಿಸುತ್ತದೆ. ಇದರ ಜೊತೆಗೆ ಸೌಮ್ಯ ಸ್ವಭಾವದ ಜಿಂಕೆಗಳು, ಕಾಡು ಹಂದಿ, ಕಾಡೆಮ್ಮೆಗಳ ಪ್ರತಿಕೃತಿಗಳು ಪ್ರಮುಖ ಆಕರ್ಷಣೆಯಾಗಿದೆ.

ಕಪ್ಪುಚಿರತೆ ಆಕರ್ಷಣೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಬಿನಿ ವ್ಯಾಪ್ತಿಯಲ್ಲಿ ಆಗಾಗ ದರ್ಶನ ನೀಡುವ ಕಪ್ಪು ಚಿರತೆಯ ಪ್ರತಿಕೃತಿ ನಿರ್ಮಿಸಿದ್ದು, ಇದು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದೆ. ಮಳಿಗೆಗೆ ಭೇಟಿ ನೀಡುವ ಪ್ರವಾಸಿಗರು ಕಪ್ಪುಚಿರತೆ ಕಂಡು ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿರುವುದು ವಿಶೇಷವಾಗಿದೆ. ಜೊತೆಗೆ ಮಳಿಗೆಯಲ್ಲಿ ಕಾಡು ಪ್ರಾಣಿಗಳು, ಪಕ್ಷಿಗಳು, ನಾನಾ ಬಗೆಯ ಸಸ್ಯಗಳ ಕುರಿತು ಮಾಹಿತಿ ನೀಡಲಾಗಿದೆ.

ಅಲ್ಲಿ ಜಿಂಕೆ, ಆನೆ, ಹಾವು, ಕಾಳಿಂಗಸರ್ಪ, ಹುಲಿ, ಚಿರತೆ, ನರಿ, ಕೋತಿ, ಬಿದುರು ಮೇಲಿನ ಚದುರೆ, ಮುಳ್ಳುಹಂದಿ ಸೇರಿ ಅನೇಕ ಕಾಡುಪ್ರಾಣಿಗಳ ಪ್ರತಿಕೃತಿಗಳನ್ನು ಮರಗಳ ಮಧ್ಯೆ ನಿರ್ಮಿಸಲಾಗಿದೆ. ಇವುಗಳ ಜತೆಗೆ ಕಾಡಿನಲ್ಲಿ ಜರಿ-ತೊರೆ, ಗುಹೆಗಳನ್ನು ನಿರ್ಮಿಸಿರುವುದು ನೋಡುಗರಿಗೆ ಮುದ ನೀಡಲಿದೆ.

ಪ್ರಾಣಿ ಪಕ್ಷಿಗಳ ಕಲರವ: ವಸ್ತು ಪ್ರದರ್ಶನ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಾಗಿ ಸಂಜೆ ವೇಳೆ ಭೇಟಿ ನೀಡುತ್ತಾರೆ. ಆದ್ದರಿಂದ ಅರಣ್ಯ ಇಲಾಖೆ ಮಳಿಗೆಯ ಒಳಗೆ ವಿದ್ಯುತ್‌ ಬೆಳಕಿನ ವ್ಯವಸ್ಥೆ ಮಾಡಿದೆ. ಪ್ರತಿ ಪ್ರಾಣಿಗಳ ಬಳಿಯೂ ಬಣ್ಣ ಬಣ್ಣ ಲೈಟ್‌ ಅಳವಡಿಸಲಾಗಿದೆ. ಎಲ್ಲಾ ಪ್ರಾಣಿಗಳ ಪ್ರತಿಕೃತಿಗಳ ಬಳಿಯೂ ಆಯಾಯಾ ಪ್ರಾಣಿಗಳ ಘರ್ಜನೆಯ ಶಬ್ಧ ಹೊರ ಬರುವ ರೀತಿ ಮಾಡಲಾಗಿದೆ. ಹುಲಿಯ ಘರ್ಜನೆ, ಆನೆಯ ಘೀಳು, ಕೂತಿಗಳ ಕೂಗಾಟ, ಹಕ್ಕಿಗಳ ಚಿಲಿಪಿಲಿ ಸದ್ದು ವಿಶೇಷ ಅನುಭವ ನೀಡಲಿದೆ.

ಗಮನ ಸೆಳೆಯುತ್ತಿದೆ ಹಾಡಿ: ಮಳಿಗೆಯಲ್ಲಿ ಕಾಡು ಪ್ರಾಣಿ ಪಕ್ಷಿಗಳ ಪ್ರತಿಕೃತಿ ಜತೆಗೆ ಆದಿವಾಸಿಗಳ ಹಾಡಿಯ ಪ್ರತಿಕೃತಿ ವಿಶೇಷ ಆಕರ್ಷಣೆಯಾಗಿದೆ. ಹತ್ತಾರು ಆದಿವಾಸಿಗಳ ಗುಡಿಸಲು, ಗುಡಿಸಲು ಮುಂದೆ ಮತ್ತು ಒಳಗೆ ಬುಡಕಟ್ಟು ಜನರ ಪ್ರತಿಕೃತಿ, ಅವರು ಬಳಸುವ ವಸ್ತುಗಳು ಸೇರಿ ಜೀವನ ಕ್ರಮವನ್ನು ಚಿತ್ರಿಸಲಾಗಿದೆ.

ಫಾರೆಸ್ಟ್‌ ಗಾರ್ಡ್‌, ವಾಚರ್‌ ಕಣ್ಗಾವಲು: ಮಳಿಗೆಯಲ್ಲಿ ಅರಣ್ಯ ಇಲಾಖೆಯನ್ನು ಹಗಲಿರುಳು ಕಣ್ಣಲ್ಲಿ ಕಣ್ಣಿಟ್ಟು ಕಾಯುವ ಕಾಡಿನ ವಾಚರ್‌, ಗಾರ್ಡ್ ಗಳ ಪ್ರತಿಕೃತಿಗಳನ್ನು ನಿರ್ಮಿಸಲಾಗಿದ್ದು, ಮರಗಳವು, ಪ್ರಾಣಿಗಳ ಬೇಟೆಯನ್ನು ತಡೆಯುತ್ತಿರುವ ದೃಶ್ಯವನ್ನು ಚಿತ್ರಿಸಲಾಗಿದೆ. ಈ ಮೂಲಕ ಕಾಡು ಮತ್ತು ಪ್ರಾಣಿಗಳ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಶ್ರಮವನ್ನು ಮಳಿಗೆಯಲ್ಲಿ ತಿಳಿಸಿಕೊಡಲಾಗುತ್ತಿದೆ.

ಅರಣ್ಯ ಸಂರಕ್ಷಣೆ ಬಗೆಗೆ ಅರಿವು: ಮಾನವ ಮತ್ತು ವನ್ಯಜೀವಿ ಸಂಘರ್ಷ ತಗ್ಗಿಸಲು ಅರಣ್ಯ ಇಲಾಖೆ ಕೈಗೊಂಡಿರುವ ಕ್ರಮಗಳು, ಕಾಡಿನೊಳಗಿನ ರಸ್ತೆಯಲ್ಲಿ ಸಂಚಾರ ನಿಯಮಗಳು, ಕಾಡನ್ನು ಬೆಂಕಿಯಿಂದ ರಕ್ಷಿಸುವ ಪರಿ ಏನು, ಕಾಡು ಪ್ರಾಣಿಗಳ ರಕ್ಷಣೆ ಬಗ್ಗೆ, ವನ್ಯಜೀವಿ ಸಂರಕ್ಷಣಾ ಕಾಯೆ-1972ರ ನಿಯಮ ಸೇರಿ ಅನೇಕ ಮಾಹಿತಿಯನ್ನು ಫ‌ಲಕಗಳ ಮೂಲಕ ಪ್ರದರ್ಶಿಸಲಾಗಿದೆ. ದೇಶದಲ್ಲಿ ಅಭಿವೃದ್ಧಿ ಮತ್ತು ಕಾಡು ಸಂರಕ್ಷಣೆ ಎರಡೂ ಒಟ್ಟಿಗೆ ನಡೆಯಬೇಕು ಎಂದು ಸಂದೇಶವನ್ನು ಅರಣ್ಯ ಇಲಾಖೆ ಮಳಿಗೆಯಲ್ಲಿ ಸಾರಲಾಗುತ್ತಿದೆ.

ಕಾಡಿನೊಳಗಿನ ರಸ್ತೆಯಲ್ಲಿ ವಾಹನ ಚಾಲನೆ ಮಾಡುವಾಗ ನಿಧಾನವಾಗಿ ಹಾಗೂ ಜಾಗರೂಕತೆ ಯಿಂದ ಚಾಲನೆ ಮಾಡುವಂತೆ ಅರಿವು ಮೂಡಿ ಸಲಾಗಿದೆ. ಕಾಡಿನಲ್ಲಿ ಹೇಗೆ ನಡೆದುಕೊಳ್ಳಬೇಕು, ಕಾಡಿನಲ್ಲಿ ಬೆಂಕಿ ನೋಡಿದ ತಕ್ಷಣ ಏನು ಮಾಡಬೇಕು ಎಂದು ತಿಳಿಸಲಾಗಿದೆ. ವನ್ಯ ಪ್ರಾಣಿ ಗಳನ್ನು ಬೇಟೆ ಯಾಡುವುದು, ಫೆನ್ಸಿಂಗ್‌ಗೆ ವಿದ್ಯುತ್‌ ಸಂಪರ್ಕ ನೀಡಿದರೆ ಏನೆಲ್ಲ ಶಿಕ್ಷೆ ಎದುರಿಸಬೇಕು  ಎಂದು ತಿಳಿಸಲಾಗಿದೆ. ರೈಲು ಕಂಬಿಗಳ ಬೇಲಿ, ಲಂಟಾನಾ, ಯುಪ ಟೋರಿಯಂ ಕಳೆಗಳ ನಿರ್ಮಲನೆಗೆ ಕ್ರಮ, ಸೋಲಾರ್‌ ಬೋರ್‌ವೆಲ್‌ಗ‌ಳು, ವಿಶೇಷವಾಗಿ ಭಾರತದಲ್ಲಿ ಕಂಡು ಬರುವ ಮಂಗಟ್ಟೆ ಹಕ್ಕಿ ಬಗ್ಗೆ ವಿವಿರವಾಗಿ ತಿಳಿಸಲಾಗಿದೆ.

ಹುಲಿ ಯೋಜನೆ ಬಗ್ಗೆ, ಹುಲಿಗಳನ್ನು ಏಕೆ ಸಂರಕ್ಷಿಸಬೇಕು ಎಂಬ ವಿಷಯಗಳನ್ನು ವಿವರವಾಗಿ ತಿಳಿಸಲಾಗಿದೆ. ಒಟ್ಟಾರೆ ವಸ್ತುಪ್ರದರ್ಶನಲ್ಲಿ ಅತಿಹೆಚ್ಚು ಜನರನ್ನು ಆಕರ್ಷಿಸುವ ಮಳಿಗೆ ಇದಾಗಿದ್ದು, ನಿತ್ಯ ಸಾವಿರಕ್ಕೂ ಹೆಚ್ಚು ಜನರು ಭೇಟಿ ನೀಡಿ ವನ್ಯಜೀವಿ ಮತ್ತು ಅರಣ್ಯ ಸಂರಕ್ಷಣೆ ಬಗ್ಗೆ ಮಾಹಿತಿ ಪಡೆಯುತ್ತಿರುವುದು ವಿಶೇಷ.

ಅರಣ್ಯ ಇಲಾಖೆಯಿಂದ ಈ ಬಾರಿ ವಸ್ತು ಪ್ರದರ್ಶನದಲ್ಲಿ ಕಾಡು ಪ್ರಾಣಿಗಳು, ಅರಣ್ಯ ಸಂಪತ್ತಿನ ರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿಶೇಷ ರೀತಿಯಲ್ಲಿ ಮಳಿಗೆ ಆರಂಭಿಸಲಾಗಿದೆ. ಮಳಿಗೆಯನ್ನು ಶೀಘ್ರದಲ್ಲೆ ಅಧಿಕೃತವಾಗಿ ಉದ್ಘಾಟಿಸಲಾಗುತ್ತದೆ. ಮಳಿಗೆಗೆ ಭೇಟಿ ನೀಡುವ ಸಾರ್ವಜನಿಕರಿಗೆ ಅರಣ್ಯ ಇಲಾಖೆ ಎಲ್ಲ ಯೋಜನೆಗಳನ್ನು ತಿಳಿಸುವ ಕೆಲಸ ಮಾಡಲಾಗುತ್ತದೆ.
● ಕಮಲಾ ಕರಿಕಾಳನ್‌, ಡಿಸಿಎಫ್.

ಸತೀಶ್‌ ದೇಪುರ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.