ಕೋಟಿ-ಚೆನ್ನಯರ ಹೆಸರು ಅಧಿಕೃತ

ಪುತ್ತೂರು ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣ

Team Udayavani, Oct 15, 2022, 11:21 AM IST

5

ಸಾಂದರ್ಭಿಕ ಚಿತ್ರ

ಪುತ್ತೂರು: ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಅತೀದೊಡ್ಡ ಬಸ್‌ ನಿಲ್ದಾಣವಾಗಿರುವ ಪುತ್ತೂರು ಕೆ.ಎಸ್‌.ಆರ್‌ .ಟಿ.ಸಿ ಬಸ್‌ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿಟ್ಟು ಸರಕಾರ ಆದೇಶ ಹೊರಡಿಸಿದೆ.

ಕೋಟಿ ಚೆನ್ನಯರ ಹೆಸರನ್ನು ಪುತ್ತೂರು ಬಸ್‌ ನಿಲ್ದಾಣಕ್ಕೆ ಇಡುವ ಸಂಬಂಧ ಸಾರಿಗೆ ಸಚಿವ ಶ್ರೀರಾಮಲು ಅವರ ಸೂಚನೆಯ ಮೇರೆಗೆ ಇಲಾಖೆಯು ಆದೇಶ ನೀಡುವ ಮೂಲಕ ಹಲವು ಕಾಲದ ಬೇಡಿಕೆಗೆ ಸ್ಪಂದನೆ ಸಿಕ್ಕಿದೆ. ಕೆ.ಎಸ್‌.ಆರ್‌.ಟಿ.ಸಿ. ಗೆ ಸೇರಿದ ಜಾಗದಲ್ಲಿ ಖಾಸಗಿಯವರು ಬಸ್‌ ನಿಲ್ದಾಣ ಕಟ್ಟಿದ್ದು, ಇದು ಜಿಲ್ಲೆಯಲ್ಲಿ ಸರಕಾರಿ ಖಾಸಗಿ ಸಹಭಾಗಿತ್ವದ (ಪಿಪಿಪಿ) ಅತಿದೊಡ್ಡ ಬಸ್‌ ನಿಲ್ದಾಣ ಎಂಬ ಹೆಗ್ಗಳಿಕೆ ಹೊಂದಿದೆ.

ಶಾಸಕರ ಪ್ರಯತ್ನ

ಶಾಸಕ ಸಂಜೀವ ಮಠಂದೂರು ಅವರ ಬೆಂಬಿಡದ ಪ್ರಯತ್ನದ ಫ‌ಲವಾಗಿ ಯೋಜನೆ ಕೈಗೂಡಿದೆ. ಈ ಹಿಂದೆ ಕೆ.ಎಸ್‌.ಆರ್‌.ಟಿ.ಸಿ. ಅಧ್ಯಕ್ಷ ಎಂ. ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುತ್ತೂರು ಬಸ್‌ ನಿಲ್ದಾಣಕ್ಕೆ “ಕೋಟಿ ಚೆನ್ನಯ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣ ಪುತ್ತೂರು’ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳಲಾಗಿತ್ತು. ಪುತ್ತೂರು ನಗರಸಭೆ 2020ರಲ್ಲಿ ಕೋಟಿ ಚೆನ್ನಯರ ಅಭಿದಾನವನ್ನು ಬಸ್‌ ನಿಲ್ದಾಣಕ್ಕೆ ನೀಡುವ ನಿರ್ಣಯ ಅಂಗೀಕರಿಸಿ ಸರಕಾರಕ್ಕೆ ಕಳುಹಿಸಿತ್ತು. ಶಾಸಕ ಸಂಜೀವ ಮಠಂದೂರು ಸರಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ, ನಗರಸಭೆ ನಿರ್ಣಯದ ಪ್ರತಿಯನ್ನು ತಮ್ಮ ಶಿಫಾರಸು ಪತ್ರದ ಮೂಲಕ ಕೆ.ಎಸ್‌.ಆರ್‌.ಟಿ.ಸಿ.ಗೆ ಸಲ್ಲಿಸಿದ್ದರು. ಬಳಿಕ ಕೆ.ಎಸ್‌.ಆರ್‌.ಟಿ.ಸಿ ಅಧ್ಯಕ್ಷ ಚಂದ್ರಪ್ಪ ಜತೆ ಮಾತುಕತೆ ನಡೆಸಿದ್ದರು. ತಾಂತ್ರಿಕ ಕಾರಣ ಅಡ್ಡಿ ಉಂಟಾಗಿ ಪ್ರಕ್ರಿಯೆ ಪೂರ್ಣಗೊಳ್ಳಲು ವಿಳಂಬವಾಗಿತ್ತು. ಇದೀಗ ಸಾಕಾರಗೊಂಡಿದೆ.

ಹಲವರ ಬೇಡಿಕೆ

ಯುವವಾಹಿನಿ ಪುತ್ತೂರು ಘಟಕದ ವತಿಯಿಂದ 2 ವರ್ಷಗಳ ಹಿಂದೆ ಶಾಸಕರಿಗೆ ಮನವಿ ಸಲ್ಲಿಸಿ ಅವಳಿ ವೀರರ ಹೆಸರನ್ನು ಪುತ್ತೂರು ಬಸ್‌ ನಿಲ್ದಾಣಕ್ಕೆ ಇಡುವಂತೆ ಕೋರಲಾಗಿತ್ತು. ದೇಯಿ ಬೈದ್ಯೆತಿ- ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಿಲ್‌ ವತಿಯಿಂದ ಮನವಿ ಮಾಡಲಾಗಿತ್ತು. ಪಡುಮಲೆಯ ಕೋಟಿ ಚೆನ್ನಯ ಜನ್ಮಸ್ಥಳ ಸಂಚಾಲನ ಸಮಿತಿಯಿಂದ ಪುತ್ತೂರು ನಗರಸಭೆಗೆ ಮನವಿ ಸಲ್ಲಿಸಲಾಗಿತ್ತು. ಹೀಗೆ ಸತತ ಮನವಿಗಳ ಹಿನ್ನೆಲೆ ಮತ್ತು ಶಾಸಕರ ಪ್ರಯತ್ನ ಇದೀಗ ಫ‌ಲ ನೀಡಿದೆ.

ಮೂಲ ಊರು

ತುಳುನಾಡಿನಾದ್ಯಂತ 250ಕ್ಕಿಂತಲೂ ಅಧಿಕ ಗರಡಿಗಳಲ್ಲಿ ಉಪಾಸನೆ ಪಡೆಯುತ್ತಿರುವ ಕೋಟಿ ಚೆನ್ನಯರ ಮೂಲ ಊರು ಪುತ್ತೂರು. ಹೀಗಾಗಿ ಪುತ್ತೂರು ಬಸ್‌ ನಿಲ್ದಾಣಕ್ಕೆ ವೀರರ ಹೆಸರು ಸೂಕ್ತವೆಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಕೋಟಿ ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿ ನಂದನ ಬಿತ್ತಿಲ್‌, ಕೋಟಿ ಚೆನ್ನಯರ ಜನ್ಮಸ್ಥಳ ಪಡುಮಲೆ, ಬಲ್ಲಾಳರ ಬೀಡು, ಸ್ವರ್ಣಕೇದಗೆ ಬೆಳೆದ ಮನೆಯೂ ಸೇರಿದಂತೆ ಅವಳಿ ವೀರರ ಬದುಕಿನ ಕುರುಹುಗಳು ಇಲ್ಲಿವೆ. ದೇಯಿ ಬೈದ್ಯೆತಿ ಔಷಧಿವನ ಮುಡಿಪುನಡ್ಕದಲ್ಲಿದೆ.

ಮೂರೂವರೆ ಎಕ್ರೆ ಬಸ್‌ ನಿಲ್ದಾಣ

ಕೆ.ಎಸ್‌.ಆರ್‌.ಟಿ.ಸಿ.ಗೆ ಸೇರಿದ ಸುಮಾರು ಮೂರೂವರೆ ಎಕ್ರೆ ಪ್ರದೇಶದಲ್ಲಿ ಪುತ್ತೂರು ಬಸ್‌ ನಿಲ್ದಾಣ ನಿರ್ಮಾಣವಾಗಿದೆ. ಹಿಂದುಸ್ಥಾನ್‌ ಪ್ರೊಮೋಟರ್ಸ್‌ ಮತ್ತು ಡೆವಲಪರ್ಸ್‌ ಸಂಸ್ಥೆ 33 ಕೋಟಿ ರೂ. ವೆಚ್ಚದಲ್ಲಿ ಬಸ್‌ ಟರ್ಮಿನಲ್‌ ಹಾಗೂ ವಾಣಿಜ್ಯ ಮಳಿಗೆ ನಿರ್ಮಿಸಿದೆ. 33 ವರ್ಷಗಳ ಕಾಲ ಇದರ ನಿರ್ವಹಣೆ ಈ ಸಂಸ್ಥೆಗೆ ಸೇರಿದೆ. 2016ರ ಜನವರಿ 9ರಂದು ಅಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಸ್‌ ಟರ್ಮಿನಲ್‌ ಉದ್ಘಾಟಿಸಿದ್ದರು.

ಬೇಡಿಕೆಗೆ ಸ್ಪಂದನೆ: ಕಾರಣಿಕ ಶಕ್ತಿಗಳಾದ ಕೋಟಿ ಚೆನ್ನಯರ ಹುಟ್ಟೂರಿನಲ್ಲಿ ಇರುವ ತಾಲೂಕು ಬಸ್‌ ನಿಲ್ದಾಣಕ್ಕೆ ಅವಳಿ ವೀರರ ಹೆಸರು ಇಡಬೇಕು ಎನ್ನುವ ಬೇಡಿಕೆಗೆ ಸ್ಪಂದನೆ ಸಿಕ್ಕಿದೆ. ಸಚಿವ ಶ್ರೀರಾಮಲು ಅವರು ನಮ್ಮ ಬೇಡಿಕೆಗೆ ಸ್ಪಂದಿಸಿದ್ದಾರೆ. ಇದೀಗ ಕೋಟಿ ಚೆನ್ನಯ ಹೆಸರು ಅಂತಿಮ ಗೊಂಡಿರುವ ಆದೇಶ ದೊರೆತಿದೆ. –ಸಂಜೀವ ಮಠಂದೂರು, ಶಾಸಕರು, ಪುತ್ತೂರು

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.