ರೋಹಿತ್ ಶರ್ಮಾ ಜೊತೆಗೆ ಬರ್ತ್ ಡೇ ಆಚರಿಸಿದ ಪಾಕ್ ನಾಯಕ ಬಾಬರ್ ಅಜಂ


Team Udayavani, Oct 15, 2022, 1:21 PM IST

Babar Azam celebrates birthday with Rohit Sharma

ಪರ್ತ್: ಐಸಿಸಿ ಟಿ20 ವಿಶ್ವಕಪ್ ಗಾಗಿ 16 ತಂಡಗಳು ಆಸ್ಟ್ರೇಲಿಯಾದಲ್ಲಿ ಸೇರಿವೆ. ಶುಕ್ರವಾರ ಎಲ್ಲಾ 16 ತಂಡಗಳ ನಾಯಕರು ಫೋಟೋ ಶೂಟ್ ಗಾಗಿ ಸೇರಿದ್ದು, ಇದೇ ವೇಳೆ ಪಾಕಿಸ್ಥಾನ ನಾಯಕ ಬಾಬರ್ ಅಜಂ ಬರ್ತ್ ಡೇ ಆಚರಣೆ ನಡೆದಿದ್ದು ವಿಶೇಷ.

ಎಲ್ಲಾ ನಾಯಕರು ಮಾಧ್ಯಮಗಳೊಂದಿಗೆ ಮಾತನಾಡಿದ ನಂತರ, ಸಂಯೋಜಕ ಮೆಲ್ ಜೋನ್ಸ್ ಅವರು ಇಂದು ಪಾಕಿಸ್ತಾನದ ನಾಯಕನ ಜನ್ಮದಿನ ಎಂದು ಘೋಷಿಸುತ್ತಿದ್ದಂತೆ ಬಾಬರ್‌ ಗಾಗಿ ಆಸ್ಟ್ರೇಲಿಯಾದ ಕ್ಯಾಪ್ಟನ್ ಆರನ್ ಫಿಂಚ್ ಕೇಕ್ ಹಿಡಿದುಕೊಂಡು ಬಂದರು.

ಭಾರತೀಯ ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲಾ 15 ಮಂದಿ ನಾಯಕರ ಸಮ್ಮುಖದಲ್ಲಿ ಬಾಬರ್ ಅಜಂ ಕೇಕ್ ಕಟ್ ಮಾಡಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.

ಇದನ್ನೂ ಓದಿ:ಶಾಲೆಯಲ್ಲಿ ಬಲವಂತವಾಗಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ: ವಿದ್ಯಾರ್ಥಿನಿಯಿಂದ ಆತ್ಮಹತ್ಯೆಗೆ ಯತ್ನ

ಮಾಧ್ಯಮದವರೊಂದಿಗೆ ಮಾತನಾಡಿದ ಬಾಬರ್ ಅಜಂ, ಭಾರತ ವಿರುದ್ಧದ ಹೈವೋಲ್ಟೇಜ್ ಪಂದ್ಯದ ತಯಾರಿಯ ಬಗ್ಗೆ ಹೇಳಿದರು. ಅನುಭವಿ ಫಾಖರ್ ಜಮಾನ್ ಮತ್ತು ವೇಗಿ ಶಹೀನ್ ಅಫ್ರಿದಿ ತಂಡಕ್ಕೆ ಸೇರಿದ್ದು ಬಲ ತಂದಿದ್ದು, ಭಾರತ ವಿರುದ್ಧದ ಪಂದ್ಯದ ಮೊದಲು ಎರಡು ಅಭ್ಯಾಸ ಪಂದ್ಯವಾಡಲಿದ್ದಾರೆ ಎಂದರು.

ರೋಹಿತ್ ಶರ್ಮಾ ಬಗ್ಗೆ ಮಾತನಾಡಿದ ಬಾಬರ್, ನಾನು ಅವರ ಅನುಭವಗಳಿಂದ ಕಲಿಯುತ್ತೇನೆ ಎಂದರು. ಇದೇ ವೇಳೆ ಮಾತನಾಡಿದ ರೋಹಿತ್, ಎರಡು ಕ್ರಿಕೆಟ್ ತಂಡಗಳ ನಡುವೆ ಉತ್ತಮ ಬಾಂಧವ್ಯವಿದೆ. ಆಟಗಾರರು ಒಂದೆಡೆ ಸೇರುವಾಗ ಕ್ರಿಕೆಟ್ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ ಪರಸ್ಪರರ ಕುಟುಂಬದ ಯೋಗಕ್ಷೇಮದ ಬಗ್ಗೆ, ಅವರು ಯಾವ ಕಾರನ್ನು ಖರೀದಿಸುತ್ತಿದ್ದಾರೆ ಅಥವಾ ಖರೀದಿಸಲು ಆಸಕ್ತಿ ಹೊಂದಿದ್ದಾರೆ ಎಂಬಂತಹ ಇತರ ವಿವರಗಳ ಬಗ್ಗೆ ಮಾತುಕತೆ ನಡೆಯುತ್ತದೆ ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.