ರಾತ್ರಿ ವೇಳೆ ಗಾಂಜಾ ಸೇವಿಸಿ ಮನೆಗಳ್ಳತನ!
Team Udayavani, Oct 15, 2022, 1:13 PM IST
ಬೆಂಗಳೂರು: ಹಗಲಿನಲ್ಲಿ ಹೊತ್ತು ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಗಾಂಜಾ ಸೇವಿಸಿ ಮನೆ ಕಳವು ಮಾಡುತ್ತಿದ್ದ ಸಹೋದರರು ಸೇರಿ ಮೂವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪರಪ್ಪನ ಅಗ್ರಹಾರದ ಭುವನೇಶ್ವರಿ ಲೇಔಟ್ ನಿವಾಸಿಗಳಾದ ಗುಣಶೇಖರ್ ಅಲಿಯಾಸ್ ಕೊರಂಗು (21), ಆತನ ಸಹೋದರ ಅಜಿತ್ (22), ತಮಿಳುನಾಡಿನ ಧರ್ಮಪುರಿಯ ಮುತ್ತುಕುಮಾರ್ (27) ಬಂಧಿತರು. ಆರೋಪಿಗಳಿಂದ 49.17 ಲಕ್ಷ ರೂ. ಮೌಲ್ಯದ 1 ಕೆ.ಜಿ. 92 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಇವರ ಬಂಧನದಿಂದ ಹೆಣ್ಣೂರು ಪೊಲೀಸ್ ಠಾಣೆ 8, ಕೊತ್ತನೂರು 3, ರಾಮಮೂರ್ತಿನಗರ, ಯಲಹಂಕ , ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪಿಳಮೇಡು ಪೊಲೀಸ್ ಠಾಣೆಯಲ್ಲಿ ತಲಾ 1 ಸೇರಿದಂತೆ ಒಟ್ಟು 14 ಮನೆಗಳವು ಪ್ರಕರಣಗಳು ಬೆಳಕಿಗೆ ಬಂದಿದೆ. ಆರೋಪಿಗಳು ಹಗಲಿನಲ್ಲಿ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದರು. ನಂತರ ಬೀಗ ಮುರಿದು ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚುತ್ತಿದ್ದರು. ನಂತರ ಕದ್ದ ವಸ್ತುಗಳನ್ನು ತಮಿಳುನಾಡು ಹಾಗೂ ಕೇರಳಕ್ಕೆ ಕೊಂಡೊಯ್ದು ಗಿರಾಕಿಗಳನ್ನು ಹುಡುಕಿ, ಕಡಿಮೆ ಬಲೆಗೆ ಮಾರಾಟ ಮಾಡುತ್ತಿದ್ದರು. ಮಾರಾಟ ಮಾಡಿ ಬಂದ ಹಣದಲ್ಲಿ ಮಾದಕ ವಸ್ತು ಸೇವನೆ, ವೇಶ್ಯೆಯರ ಸಹವಾಸಕ್ಕೆ ದುಂದು ವೆಚ್ಚ ಮಾಡುತ್ತಿದ್ದರು. ಹಣ ಖಾಲಿಯಾದ ಬಳಿಕ ಮತ್ತೆ ಮನೆಗಳ್ಳತನಕ್ಕೆ ಇಳಿಯುತ್ತಿದ್ದರು.
ಕದ್ದ ಮೊಬೈಲ್ ಬಳಕೆ: ಪೊಲೀಸರಿಗೆ ತಮ್ಮ ಸುಳಿವು ಸಿಗಬಾರದು ಎಂಬ ಉದ್ದೇಶದಿಂದ ಆರೋಪಿಗಳು ಮನೆಗಳ್ಳತನಕ್ಕೆ ಹೋಗುತ್ತಿದ್ದಾಗ ಕದ್ದ ಮೊಬೈಲ್ಗಳನ್ನೇ ಬಳಕೆ ಮಾಡುತ್ತಿದ್ದರು. ಮನೆಗಳ್ಳತನಕ್ಕೂ ಮುನ್ನ ಮೂವರೂ ಗಾಂಜಾ ಸೇವಿಸುತ್ತಿದ್ದರು. ಬಂಧಿತರ ಪೈಕಿ ಪ್ರಮುಖ ಆರೋಪಿ ಗುಣಶೇಖರ್ ತನ್ನ 17ನೇ ವಯಸ್ಸಿನಲ್ಲೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಎರಡು ಬಾರಿ ಬಾಲಮಂದಿರಕ್ಕೆ ಸೇರಿ ಬಿಡುಗಡೆಯಾಗಿದ್ದ. ಜೈಲಿನಿಂದ ಹೊರ ಬಂದು ಮತ್ತೆ ಹಳೆ ಚಾಳಿ ಮುಂದುವರಿಸಿದ್ದ. ಆತನ ಕೃತ್ಯಗಳಿಗೆ ಸಹೋದರ ಅಜಿತ್ ಹಾಗೂ ಸ್ನೇಹಿತ ಮುತ್ತುಕುಮಾರ್ ಸಹಕಾರ ನೀಡುತ್ತಿದ್ದರು. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.