ಪಾಕ್ ಆಸ್ಪತ್ರೆಯ ಮೇಲ್ಛಾವಣಿಯಲ್ಲಿ 200 ಕೊಳೆತ ಶವಗಳು ಪತ್ತೆ; ವಿಡಿಯೋ ವೈರಲ್, ಆಕ್ರೋಶ

ಗುಜ್ಜಾರ್ ಅವರು ಅಲ್ಲಿಗೆ ಹೋದಾಗ ಸಿಬಂದಿ ಶವಾಗಾರದ ಬಾಗಿಲು ತೆರೆಯಲು ಮೀನಮೇಷ ಎಣಿಸುತ್ತಿದ್ದ

Team Udayavani, Oct 15, 2022, 1:14 PM IST

ಪಾಕ್ ಆಸ್ಪತ್ರೆಯ ಮೇಲ್ಛಾವಣಿಯಲ್ಲಿ 200 ಕೊಳೆತ ಶವಗಳು ಪತ್ತೆ; ವಿಡಿಯೋ ವೈರಲ್, ಆಕ್ರೋಶ

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಾರ್ವಜನಿಕ ವಲಯದ ಆಸ್ಪತ್ರೆಯ ಮೇಲ್ಛಾವಣಿಯಲ್ಲಿ ನೂರಾರು ಕೊಳೆತ ನಗ್ನ ಶವಗಳು ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಆಕ್ರೋಶ ಭುಗಿಲೆದ್ದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಭಾರತ- ಲಂಕಾ ನಡುವೆ ವನಿತಾ ಏಷ್ಯಾ ಕಪ್ ಫೈನಲ್: ಟಾಸ್ ಗೆದ್ದ ಚಾಮರಿ ಅತ್ತಪಟ್ಟು

ಈ ಘಟನೆ ಬಗ್ಗೆ ತನಿಖೆ ನಡೆಸುವಂತೆ ಪಂಜಾಬ್ ಮುಖ್ಯಮಂತ್ರಿ ಪರ್ವೇಜ್ ಇಲಾಹಿ ಶುಕ್ರವಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದಾರೆ. ಆರೋಗ್ಯ ಇಲಾಖೆಯ ಕಾರ್ಯದರ್ಶಿ ಮುಝಾಮಿಲ್ ಬಶೀರ್ ನೇತೃತ್ವದಲ್ಲಿ ಆರು ಮಂದಿ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದು ವರದಿ ವಿವರಿಸಿದೆ.

ಏನಿದು ವಿವಾದ…ಒಬ್ಬರು ನನಗೆ ಶವಾಗಾರಕ್ಕೆ ಹೋಗಿ ವೀಕ್ಷಿಸಿ ಎಂದಿದ್ದರು!

ಎಎನ್ ಐ ವರದಿ ಪ್ರಕಾರ, ಗುಜ್ಜಾರ್ ಅವರು ನಿಶ್ತಾರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಬಂದು, ನೀವು ಒಳ್ಳೆಯ ಕೆಲಸ ಮಾಡಲು ಬಯಸಿದರೆ ಒಮ್ಮೆ ಶವಾಗಾರಕ್ಕೆ ಹೋಗಿ ವೀಕ್ಷಿಸಿ ಎಂದು ಸಲಹೆ ನೀಡಿರುವುದಾಗಿ ತಿಳಿಸಿದೆ.

ಅವರ ಬೇಡಿಕೆಯಂತೆ ಗುಜ್ಜಾರ್ ಅವರು ಅಲ್ಲಿಗೆ ಹೋದಾಗ ಸಿಬಂದಿ ಶವಾಗಾರದ ಬಾಗಿಲು ತೆರೆಯಲು ಮೀನಮೇಷ ಎಣಿಸುತ್ತಿದ್ದಾಗ…ಒಂದು ವೇಳೆ ನೀನೀಗ ಶವಾಗಾರದ ಬಾಗಿಲು ತೆರೆಯದಿದ್ದರೆ ನಿನ್ನ (ಸಿಬಂದಿ) ವಿರುದ್ಧ ಎಫ್ ಐಆರ್ ದಾಖಲಿಸುತ್ತೇನೆ ಎಂದು ಗುಜ್ಜಾರ್ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದ್ದಾರೆ.

ಕೊನೆಗೂ ಆತ ಬಾಗಿಲು ತೆರೆದ ನಂತರ ಒಳ ಹೋದರೆ…ಆಸ್ಪತ್ರೆಯ ಮೇಲ್ಛಾವಣಿಯಲ್ಲಿ ಕನಿಷ್ಠ 200 ಶವಗಳು ಪತ್ತೆಯಾಗಿದ್ದವು. ಎಲ್ಲಾ (ಗಂಡಸರು, ಮಹಿಳೆಯರು) ನಗ್ನ ಶವಗಳು ಕೊಳೆತು ಹೋಗಿದ್ದವು. ಮಹಿಳೆಯರ ಶವಗಳ ಮೇಲೆ ಯಾವ ಹೊದಿಕೆಯನ್ನೂ ಹಾಕಿರಲಿಲ್ಲವಾಗಿತ್ತು ಎಂದು ಗುಜ್ಜಾರ್ ಆರೋಪಿಸಿದ್ದಾರೆ.

ಈ ಬಗ್ಗೆ ಗುಜ್ಜಾರ್ ವೈದ್ಯರ ಬಳಿ ವಿವರಣೆ ಕೇಳಿದಾಗ, ಈ ಶವಗಳನ್ನು ವೈದ್ಯಕೀಯ ವಿದ್ಯಾರ್ಥಿಗಳು ಶಿಕ್ಷಣದ ಉದ್ದೇಶಕ್ಕಾಗಿ ಬಳಸುತ್ತಿರುವುದಾಗಿ ಸಮಜಾಯಿಷಿ ನೀಡಿರುವುದಾಗಿ ವರದಿ ವಿವರಿಸಿದೆ.

ಅನಾಥ ಶವಗಳ ಅಂತ್ಯಕ್ರಿಯೆ ನಡೆಸುವಂತೆ ಮುಖ್ಯಮಂತ್ರಿ ಆದೇಶ ನೀಡಿದ್ದು, ಈ ಪ್ರಕರಣದಲ್ಲಿ ಶಾಮೀಲಾದವರ ವಿರುದ್ಧ ಆರೋಗ್ಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.