ಅಡಕೆ ಆಮದು ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ

ಬೇರುಹುಳು ರೋಗ, ಕೊಳೆರೋಗ ಮುಂತಾದವುಗಳಿಂದ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ.

Team Udayavani, Oct 15, 2022, 4:27 PM IST

Adake

ಶಿವಮೊಗ್ಗ: ಕೇಂದ್ರ ಸರ್ಕಾರ ಅಡಿಕೆ ಆಮದು ರದ್ದುಗೊಳಿಸಬೇಕು. ಎಲೆಚುಕ್ಕಿ ರೋಗಕ್ಕೆ ಪರಿಹಾರ ನೀಡಬೇಕು. ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರುಸೇನೆ, ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಬಸ್‌ ನಿಲ್ದಾಣದಿಂದ ನೂರಾರು ಸಂಖ್ಯೆಯಲ್ಲಿ ರೈತರು ಮತ್ತು ಅಡಿಕೆ ಮಾರಾಟ ಸಹಕಾರ ಸಂಘಗಳ ಸದಸ್ಯರು ಮೆರವಣಿಗೆಯಲ್ಲಿ ಬಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಭೂತಾನ್‌ ನಿಂದ 17 ಸಾವಿರ ಮೆಟ್ರಿಕ್‌ ಟನ್‌ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳಲು ಒಪ್ಪಿಕೊಂಡಿದೆ.

ಇದರಿಂದ ರೈತರಿಗೆ ತೊಂದರೆಯಾಗುತ್ತದೆ. ಈಗ 17 ಸಾವಿರ, ಮುಂದಿನ ದಿನಗಳಲ್ಲಿ ಇದು 50 ಸಾವಿರ ಮೆಟ್ರಿಕ್‌ ಟನ್‌ ಆಗಬಹುದು. ಆಮದು ಸುಂಕವಿಲ್ಲದೆ ಅನುಮತಿ ನೀಡಿರುವುದರಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆಯೂ ಬರುವುದಿಲ್ಲ. ನಮ್ಮ ದೇಶದ ಅಡಿಕೆ ಬೆಲೆ ಕೂಡ ಕಡಿಮೆಯಗುತ್ತದೆ. ಹೀಗೆ ಎಂಐಪಿ ಷರತ್ತು ಇಲ್ಲದೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸರಿಯಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ದೇಶದಲ್ಲಿಯೇ ಸಾಕಷ್ಟು ಅಡಿಕೆ ಬೆಳೆಯುತ್ತೇವೆ. ಜೊತೆಗೆ ರಫ್ತು ಕೂಡ ಮಾಡಬಹುದಾಗಿದೆ. ಹೀಗಿದ್ದೂ ಆಮದು ಮಾಡಿಕೊಳ್ಳುವುದು ಸರಿಯಲ್ಲ. ಈಗಾಗಲೇ ರಾಜ್ಯದ ಗೃಹಮಂತ್ರಿ ಹಾಗೂ ಅಡಿಕೆ ಕಾರ್ಯಪಡೆ ಅಧ್ಯಕ್ಷರಾಗಿರುವ ಆರಗ ಜ್ಞಾನೇಂದ್ರ ಕೇಂದ್ರ ಸರ್ಕಾರಕ್ಕೆ ನಿಯೋಗ ಕರೆದೊಯ್ಯಲಾಗುವುದು ಎಂದಿರುವುದು ಸ್ವಾಗತಾರ್ಹ. ಆದಷ್ಟು ಬೇಗ ನಿಯೋಗ ಹೋಗಬೇಕು. ತಕ್ಷಣ ಈ ಆಮದು ನೀತಿ ರದ್ದುಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದರು.

ಅಡಿಕೆಗೆ ಎಲೆಚುಕ್ಕಿ ರೋಗ ತೀವ್ರವಾಗಿ ಬಾಧಿಸುತ್ತಿದೆ. ಬೆಳೆ ಕೂಡ ನಾಶವಾಗಿದೆ. ಮರಗಳೇ ಸಾಯತೊಡಗಿವೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಕೇವಲ 10 ಕೋಟಿ ರೂ. ಮಂಜೂರು ಮಾಡಿ ಔಷಧಕ್ಕಾಗಿ ಹೆಕ್ಟೇರಿಗೆ 4 ಸಾವಿರ ನೀಡುತ್ತಿದೆ. ಇದು ಯಾವುದಕ್ಕೂ ಸಾಲುವುದಿಲ್ಲ. ಕನಿಷ್ಟ 100 ಕೋಟಿ ರೂ.ಗಳಿಗೆ ಹೆಚ್ಚಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಅಲ್ಲದೆ ಹಳದಿರೋಗ, ಬೇರುಹುಳು ರೋಗ, ಕೊಳೆರೋಗ ಮುಂತಾದವುಗಳಿಂದ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ಅಡಿಕೆ ಬೆಳೆಗಾರರ ಅನುಕೂಲಕ್ಕಾಗಿ ಶಿವಮೊಗ್ಗದಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಎಚ್‌.ಆರ್‌. ಬಸವರಾಜಪ್ಪ, ಸಹ್ಯಾದ್ರಿ ಅಡಿಕೆ ಸಹಕಾರ ಸಂಘದ ಅಧ್ಯಕ್ಷ ಎಚ್‌.ಎನ್‌. ವಿಜಯ್‌ ದೇವ್‌, ಅಡಿಕೆ ಪರಿಷ್ಕರಣ ಮಾರಾಟ ಸಂಘದ ಕೆ.ಎಂ. ಸೂರ್ಯನಾರಾಯಣ, ಪ್ರಮುಖರಾದ ತೀ.ನ. ಶ್ರೀನಿವಾಸ, ಸಿ. ಮಲ್ಲೇಶಪ್ಪ, ಬಿ.ಕೆ. ಶಿವಕುಮಾರ್‌, ಹಿಟ್ಟೂರು ರಾಜು, ಟಿ.ಎಂ. ಚಂದ್ರಪ್ಪ, ಈಶಣ್ಣ, ಶಿವಮೂರ್ತಿ, ಜಗದೀಶ್‌, ಕೆ.ಪಿ. ಶ್ರೀಪಾಲ್‌, ಕೆ. ರಾಘವೇಂದ್ರ, ಈ.ಬಿ. ಜಗದೀಶ್‌, ಪಿ.ಡಿ. ಮಂಜಪ್ಪ, ಡಿ.ಎಚ್‌. ರಾಮಚಂದ್ರಪ, ಸಿ. ಚಂದ್ರಪ್ಪ, ರುದ್ರೇಶ್‌, ಪಂಚಾಕ್ಷರಪ್ಪ, ಶಿವಮೂರ್ತಪ್ಪ ಮುಂತಾದವರಿದ್ದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.