ಸಮಯಪ್ರಜ್ಞೆ, ಸ್ಥಿತಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ಸಲಹೆ


Team Udayavani, Oct 17, 2022, 11:23 AM IST

cm-bommai

ಬೆಂಗಳೂರು: ಜಿಲ್ಲಾಧಿಕಾರಿಗಳು ಸಮಯೋಚಿತ ತೀರ್ಮಾನಗಳ ಮೂಲಕ ಜನರಿಗೆ ನೆರವಾಗಬೇಕು. ಸಮಯಪ್ರಜ್ಞೆ, ಸ್ಥಿತ ಪ್ರಜ್ಞತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.

ಒಬ್ಬ ಐಎಎಸ್ ಅಧಿಕಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು ಅತ್ಯಂತ ಮಹತ್ವಪೂರ್ಣ ಅವಕಾಶ. ಜಿಲ್ಲೆಯಲ್ಲಿ ನೀವು ಯಾವ ರೀತಿ ಹೆಜ್ಜೆ ಗುರುತು ಬಿಡುತ್ತೀರಿ ಎನ್ನುವುದು ಮುಖ್ಯವಾದುದು. ಈಗ ಬಹಳಷ್ಟು ಅಧಿಕಾರಿಗಳು ಜಿಲ್ಲಾಧಿಕಾರಿ ಹುದ್ದೆಯ ಅಧಿಕಾರ ಭಾಗವನ್ನಷ್ಟೇ ನೋಡುತ್ತಾರೆ. ಆ ಹುದ್ದೆಯ ಜವಾಬ್ದಾರಿ ಮತ್ತು ಆಡಳಿತದ ಪರಿಣಾಮವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಆದರೆ ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ನೀವು ಆಡಳಿತದ ಭಾಗವಾಗಿದ್ದೀರಿ. ನಿಮಗೆ ಹೆಚ್ಚಿನ ಅಧಿಕಾರವೂ ಇದೆ. ನೀವು ಕೈಗೊಳ್ಳುವ ನಿರ್ಣಯಗಳು ಆಡಳಿತ ನಿರ್ವಹಣೆಯಲ್ಲಿ ಬಹಳ ಮುಖ್ಯ ಎಂದು ತಿಳಿಸಿದರು. ಯಾವುದೇ ಕೆಲಸ ಮಾಡಬಾರದು ಅಂದುಕೊಂಡರೆ, 101 ಕಾರಣ ದೊರೆಯುತ್ತದೆ. ಒಂದು ಒಳ್ಳೆಯ ಕೆಲಸ ಮಾಡಬೇಕೆಂದರೆ ಒಂದೇ ಕಾರಣ ಸಾಕು. ಆದ್ದರಿಂದ ಸಕಾಲಿಕ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಆಡಳಿತ ನೀಡಬೇಕು. ಸಮಸ್ಯೆಗಳಿದ್ದರೆ, ಕೂಡಲೇ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆಯಿರಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ:ದಾಸನದೊಡ್ಡಿಯ ಕೆರೆಕಟ್ಟೆಗಳ ನಿರ್ಮಾತೃ ಆಧುನಿಕ ಭಗೀರಥ ಕಲ್ಮನೆ ಕಾಮೇಗೌಡರು ಇನ್ನಿಲ್ಲ

ಇಂದಿನ ಸಭೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಮುಕ್ತವಾಗಿ ತಮ್ಮ ಅನುಭವ ಹಂಚಿಕೊಳ್ಳಬೇಕು. ಆಗ ಸರ್ಕಾರ ಸೂಕ್ತ ನಿರರ್ಧಾರಗಳನ್ನು ಕೈಗೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಯವ್ಯಯ ಅನುಷ್ಠಾನ ಕುರಿತಂತೆ ಸರ್ಕಾರಿ ಆದೇಶಗಳಾಗಿದೆ. ತಳಹಂತದಲ್ಲಿ ಅವುಗಳ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಂಡು, ವರ್ಷಾಂತ್ಯದಲ್ಲಿ ಗುರಿ ಸಾಧಿಸುವಂತೆ ಸೂಚಿಸಿದರು.

ಸಚಿವರಾದ ಆರ್. ಅಶೋಕ್, ಜೆ.ಸಿ. ಮಾಧುಸ್ವಾಮಿ, ವಿ. ಸುನಿಲ್ ಕುಮಾರ್, ಸಿ.ಸಿ. ಪಾಟೀಲ್, ವಿ.ಸೋಮಣ್ಣ, ಬಿ.ಶ್ರೀರಾಮುಲು, ಕೆ. ಗೋಪಾಲಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Dinesh-gundurao

Dengue ಹೆಚ್ಚಳಕ್ಕೂ ನಾನೂ ಈಜಿದ್ದಕ್ಕೂ ಏನು ಸಂಬಂಧ: ದಿನೇಶ್‌ ಗುಂಡೂರಾವ್‌

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.