![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
ಎಸ್ ಸಿ- ಎಸ್ ಟಿ ಮೀಸಲಾತಿ: ಸಿಎಂ ಗೆ ಅಭಿನಂದನೆ ಸಲ್ಲಿಸಿದ ಕರಾವಳಿ ತಂಡ
Team Udayavani, Oct 17, 2022, 12:31 PM IST
![ಎಸ್ ಸಿ- ಎಸ್ ಟಿ ಮೀಸಲಾತಿ: ಸಿಎಂ ಗೆ ಅಭಿನಂದನೆ ಸಲ್ಲಿಸಿದ ಕರಾವಳಿ ತಂಡ](https://www.udayavani.com/wp-content/uploads/2022/10/ststs-620x342.jpg)
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಬೇಡಿಕೆಗೆ ರಾಜ್ಯ ಸರ್ಕಾರವು ಸ್ಪಂದಿಸಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲಾತಿಯನ್ನು ಶೇ.17 ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಇದ್ದ ಶೇ.3 ಮೀಸಲಾತಿಯನ್ನು ಶೇ. 7 ಕ್ಕೆ ಹೆಚ್ಚಿಸಿದ್ದಕ್ಕಾಗಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ಒಂದು ಸಾವಿರಕ್ಕೂ ಅಧಿಕ ಪರಿಶಿಷ್ಟ ಪಂಗಡದ ಜನರು ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಮೀಸಲಾತಿ ಹೆಚ್ಚಳ ಮಾಡುವಂತೆ ಹಾಗೂ ಜನಾಂಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇರೆ ಬೇರೆ ಸರಕಾರಗಳು ಅಸ್ತಿತ್ವದಲ್ಲಿದ್ದ ಸಂಧರ್ಭದಲ್ಲಿಯೂ ಕೂಡ ಇಂದಿನ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರ ನೇತೃತ್ವದಲ್ಲಿ ಸಂಭದಪಟ್ಟ ಇಲಾಖಾ ಸಚಿವರಲ್ಲಿ ಹಾಗೂ ಆಯಾ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿಯನ್ನು ಮಾಡಲಾಗಿತ್ತು. ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಪರಿಶಿಷ್ಟ ಹಾಗೂ ಪರಿಶಿಷ್ಟ ಪಂಗಡದ ಜನರ ಬೇಡಿಕೆಯನ್ನು ಈಡೇರಿಸಿರುವುದು ರಾಜ್ಯದ ಇಡೀ ದಲಿತ ಸಮುದಾಯಕ್ಕೆ ಖುಷಿಯನ್ನು ಉಂಟುಮಾಡಿದೆ.
ಮುಖ್ಯಮಂತ್ರಿಗಳನ್ನು ಅಭಿನಂದಿಸುವ ಸಂಧರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್ ರವರೊಂದಿಗೆ, ಉಡುಪಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಲೆಕುಡಿಯ ಸಂಘದ ರಾಜ್ಯಧ್ಯಕ್ಷ ಶ್ರೀಧರ್ ಗೌಡ ಈದು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![RadhaMohan-das](https://www.udayavani.com/wp-content/uploads/2024/07/RadhaMohan-das-150x90.jpg)
BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
![Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ](https://www.udayavani.com/wp-content/uploads/2024/07/sedam-150x94.jpg)
Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ
![Channapatna Bypoll; I am the candidate of alliance party…: What did CP Yogeshwar say?](https://www.udayavani.com/wp-content/uploads/2024/07/channapatna-150x83.jpg)
Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.